AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ವಿಚ್ಛೇದನದ ವೇಳೆ ಕಿಡ್ನಿ ವಾಪಸ್ ಕೇಳಿದ ಪತಿ

2001 ರಲ್ಲಿ, ತನ್ನ ಪತ್ನಿಯ ಜೀವ ಉಳಿಸಲು ಪತಿ ಮುಂದಾಗಿದ್ದು, ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದಾನೆ. ಆದರೆ ಇದಾದ ಕೆಲವೇ ವರ್ಷಗಳ ಬಳಿಕ ಪತ್ನಿ ಡೊನ್ನೆಲ್ ವಿಚ್ಛೇದನ ಪಡೆಯಲು ಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದಳು.ಇದರಿಂದ ಕೋಪಗೊಂಡ ಪತಿ ಕಿಡ್ನಿ ವಾಪಸ್ ಕೇಳಿದ್ದಾನೆ.

Viral News: ವಿಚ್ಛೇದನದ ವೇಳೆ ಕಿಡ್ನಿ ವಾಪಸ್ ಕೇಳಿದ ಪತಿ
ವಿಚ್ಛೇದನದ ವೇಳೆ ಕಿಡ್ನಿ ವಾಪಸ್ ಕೇಳಿದ ಪತಿ Image Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 21, 2024 | 12:18 PM

Share

ವಿಚ್ಛೇದನದ ವೇಳೆ ‘ನನ್ನ ಕಿಡ್ನಿಯನ್ನು ನನಗೆ ಮರಳಿಸು’ ಎಂದು ಪತಿಯೊಬ್ಬ ಪತ್ನಿಗೆ ಕೋರ್ಟ್​​ನಲ್ಲಿ ಬೇಡಿಕೆ ಇಟ್ಟಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಇದಲ್ಲದೆ ಕಿಡ್ನಿ ವಾಪಸ್​​ ಕೊಡಲು ಆಗದ್ದಿದ್ದಲ್ಲಿ 1.2 ಮಿಲಿಯನ್ ಪೌಂಡ್(12.56ಕೋಟಿ ರೂ.) ಹಣ ನೀಡಬೇಕಾಗಿ ಬೇಡಿಕೆಯಿಟ್ಟಿದ್ದಾನೆ. ಪತ್ನಿಯ ಎರಡು ಕಿಡ್ನಿಯೂ ವಿಫಲವಾದ್ದುದನ್ನು ತಿಳಿದು ಆಕೆಯನ್ನು ಬದುಕುಳಿಸುವ ಸಲುವಾಗಿ 2001 ರಲ್ಲಿ ಪತಿ ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದ. ಆದರೆ ವರ್ಷಗಳ ನಂತರ ಇಬರಿಬ್ಬರ ನಡುವೆ ಭಿನ್ನಾಭಿಪ್ರಾಯಗಳು ಬಂದ ಕಾರಣ ವಿಚ್ಛೇದನ ಪಡೆದುಕೊಳ್ಳಲು ಪತ್ನಿ ಕೋರ್ಟ್​​​​ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ ಪತಿ ಕಿಡ್ನಿ ವಾಪಸ್ ಕೇಳಿದ್ದಾನೆ.

ಡೈಲಿ ಸ್ಟಾರ್ ವರದಿಯ ಪ್ರಕಾರ, 1990ರಲ್ಲಿ ರಿಚರ್ಡ್ ಬಟಿಸ್ಟಾ(ಪತಿ) ಮತ್ತು ಡೊನ್ನೆಲ್ (ಪತ್ನಿ) ವಿವಾಹವಾಗಿದ್ದರು. ಇವರಿಗೆ ಮೂರು ಮಕ್ಕಳಿದ್ದಾರೆ. ಆದರೆ 2001 ರಲ್ಲಿ, ಡೊನ್ನೆಲ್​​ಗೆ ತೀವ್ರ ಅನಾರೋಗ್ಯ ಕಾಡಿದೆ. ಕಡೆಗೆ ಆಕೆಯ ಎರಡು ಕಿಡ್ನಿಯೂ ವಿಫಲವಾಗಿದೆ ಎಂದು ವೈದ್ಯರು ಘೋಷಿಸಿದ್ದರು. ಈ ವೇಳೆ ತನ್ನ ಪತ್ನಿಯ ಜೀವ ಉಳಿಸಲು ಬಟಿಸ್ಟಾ ಮುಂದಾಗಿದ್ದು, ತನ್ನ ಒಂದು ಕಿಡ್ನಿಯನ್ನು ದಾನ ಮಾಡಿದ್ದಾನೆ. ಆದರೆ ಇದಾದ ಕೆಲವೇ ವರ್ಷಗಳ ಬಳಿಕ ಪತ್ನಿ ಡೊನ್ನೆಲ್ ವಿಚ್ಛೇದನ ಪಡೆಯಲು ಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದಳು. ಇದರಿಂದ ಸಾಕಷ್ಟು ನೋವುಂಡ ಪತಿ ನನ್ನ ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಆರೋಪಿಸಿದ್ದಾನೆ. ಅಲ್ಲದೆ ಕಿಡ್ನಿ ವಾಪಸ್ ಇಲ್ಲವೇ ಹಣ ಕೊಡಿ ಎಂದು ಹೇಳಿದ್ದಾನೆ.

ಇದನ್ನೂ ಓದಿ: ಮಡದಿಗೂ ಸಮಾನ ಗೌರವ, ವಧುವಿನ ಪಾದ ಸ್ಪರ್ಶಿಸಿದ ವರ, ನಾಚಿ ನೀರಾದ ವಧು

ಆದರೆ ರಿಚರ್ಡ್ ಗೆ ನ್ಯಾಯ ಸಿಗಲಿಲ್ಲ. ಕಿಡ್ನಿಯನ್ನು ವಾಪಸ್ ನೀಡಲು ಸಾಧ್ಯವಿಲ್ಲ ಎಂದು ವೈದ್ಯಕೀಯ ತಜ್ಞರು ಸ್ಪಷ್ಟಪಡಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಕಿಡ್ನಿ ವಾಪಸ್ ಕೊಡಲು ಸಾಧ್ಯವಿಲ್ಲ . ಡೊನ್ನೆಲ್ ತನ್ನ ಮೂತ್ರಪಿಂಡವನ್ನು ಹಿಂದಿರುಗಿಸಲು ಎರಡನೇ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಗುತ್ತದೆ. ಇದರಿಂದ ಅವರ ಪ್ರಾಣಕ್ಕೂ ಅಪಾಯವಿದೆ. ಆದ್ದರಿಂದ ಮೂತ್ರಪಿಂಡವನ್ನು ಮರಳಿ ನೀಡಲು ಸಾಧ್ಯವಿಲ್ಲ ಎಂದು ತಜ್ಞರ ಹೇಳಿಯನ್ನು ಆಧರಿಸಿ ಕೋರ್ಟ್​ ತೀರ್ಪು ನೀಡಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?