AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹೆಂಡತಿ ವಿಚ್ಛೇದನ ನೀಡಿದ ಕಾರಣಕ್ಕೆ ಪ್ರತಿದಿನ ಅನ್ನ ನೀರು ಬಿಟ್ಟು ಬಿಯರ್​​​ ಕುಡಿದು ವ್ಯಕ್ತಿ ಸಾವು

ಹೆಂಡತಿ ವಿಚ್ಛೇದನ ನೀಡಿದಕ್ಕೆ ನೊಂದು ಅನ್ನ ನೀರು ಬಿಟ್ಟು, ಪ್ರತಿದಿನ ಬಿಯರ್​​​​ ಕುಡಿಯಲು ಶುರು ಮಾಡಿ, ಇದೀಗ ವ್ಯಕ್ತಿಯೊಬ್ಬ ಸಾವನ್ನಪ್ಪಿದ ವಿಚಿತ್ರ ಘಟನೆ ನಡೆದಿದೆ.. 44 ವರ್ಷದ ವ್ಯಕ್ತಿಯೊಬ್ಬ ವಿಚ್ಛೇದನದ ನಂತರ ನೋವಿನಲ್ಲಿ ಅನ್ನ ನೀರು ಬಿಟ್ಟು ಒಂದು ತಿಂಗಳು ಬರೀ ಬಿಯರ್​​ನ್ನು ಕುಡಿದು ತನ್ನ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

Viral: ಹೆಂಡತಿ ವಿಚ್ಛೇದನ ನೀಡಿದ ಕಾರಣಕ್ಕೆ ಪ್ರತಿದಿನ ಅನ್ನ ನೀರು ಬಿಟ್ಟು ಬಿಯರ್​​​ ಕುಡಿದು ವ್ಯಕ್ತಿ ಸಾವು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: ಮಾಲಾಶ್ರೀ ಅಂಚನ್​|

Updated on: Jul 26, 2025 | 12:17 PM

Share

ಇತ್ತಿಚೀಗಿನ ದಿನಗಳಲ್ಲಿ ವಿಚ್ಛೇದನ ( divorce)  ಪ್ರಕರಣಗಳು ಹೆಚ್ಚಾಗಿದೆ. ಸಣ್ಣ ಸಣ್ಣ ಕಾರಣಗಳಿಗೆ ವಿಚ್ಛೇದನ ನೀಡುತ್ತಾರೆ. ಹೀಗೆ ಸುಮ್ಮಸುಮ್ಮನೆ ವಿಚ್ಛೇದನ ನೀಡಿ, ತಮ್ಮ ಜೀವನವನ್ನು ಹಾಳು ಮಾಡಿಕೊಂಡಿರುವ ಹಲವು ಉದಾಹರಣೆಗಳು ನಮ್ಮ ಮುಂದೆ ಇದೆ. ಇದೀಗ ಇಲ್ಲೊಂದು ಘಟನೆ ಕೂಡ ಅದೇ ರೀತಿ ಆಗಿದೆ, ಆದರೆ ಇದು ಸ್ವಲ್ಪ ವಿಚಿತ್ರವಾಗಿದೆ. ವಿಚ್ಛೇದನ ನೀಡಿದ ನಂತರ ಅನ್ನ ನೀರು ಬಿಟ್ಟು ಬಿಯರ್​​​ ಮಾತ್ರ ಕುಡಿದು, ವ್ಯಕ್ತಿಯೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಈ ಘಟನೆ ಥೈಲ್ಯಾಂಡ್‌ನ (Thailand) ಬಾನ್ ಚಾಂಗ್ ಜಿಲ್ಲೆಯಲ್ಲಿ ನಡೆದಿದೆ. 44 ವರ್ಷದ ವ್ಯಕ್ತಿಯೊಬ್ಬ ವಿಚ್ಛೇದನದ ನಂತರ ಆ  ನೋವಿನಲ್ಲಿ ಅನ್ನ ನೀರು ಬಿಟ್ಟು ಒಂದು ತಿಂಗಳು ಬಿಯರ್​​ನ್ನು ಕುಡಿದು ತನ್ನ ಮಲಗುವ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇನ್ನು ಸಾವನ್ನಪ್ಪಿರುವ ವ್ಯಕ್ತಿಯನ್ನು ಥವೀಸಕ್ ನಮ್ವೊಂಗ್ಸಾ ಎಂದು ಗುರುತಿಸಲಾಗಿದೆ.

ಇನ್ನು ಈ ಘಟನೆಯನ್ನು ಮಗ ನೋಡಿದ್ದಾನೆ. ತಂದೆ ಶವ ಪತ್ತೆಯಾಗಿರುವ ರೂಮ್​​​ನಲ್ಲಿ 100ಕ್ಕೂ ಹೆಚ್ಚು ಬಿಯರ್​​ ಬಾಟಲ್​​​​ ಸಿಕ್ಕಿದೆ. ಒಂದು ಮಗುವಿನ ತಂದೆಯಾಗಿರುವ ನಮ್ವೊಂಗ್ಸಾ, ತನ್ನ ಹೆಂಡತಿಯಿಂದ ಬೇರ್ಪಟ್ಟ ನಂತರ ತನ್ನ 16 ವರ್ಷದ ಮಗನೊಂದಿಗೆ ವಾಸಿಸುತ್ತಿದ್ದ. ಪ್ರತಿದಿನ ಬಿಸಿ ಬಿಸಿಯಾದ ಅಡುಗೆಯನ್ನು ಮಾಡುತ್ತಿದ್ದರೂ, ತಂದೆ ಮಾತ್ರ ಊಟ ಮುಟ್ಟುತ್ತಿರಲಿಲ್ಲ, ಪ್ರತಿದಿನ ಅವರಿಗೆ ಬಿಯರ್​​​​​ ಬೇಕಿತ್ತು ಎಂದು ಮಗ ಪೊಲೀಸರಿಗೆ ತಿಳಿಸಿದ್ದಾನೆ. ಇನ್ನು ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಥವೀಸಕ್ ನಮ್ವೊಂಗ್ಸಾ ಅವರ ಮಗ ಶಾಲೆ ಹೋಗಿ ಬರುವಾಗ ಮೂರ್ಛೆ ಹೋಗಿದ್ದನು, ಕೋಣೆಯಲ್ಲಿ ಪ್ರಜ್ಞಾಹೀನಾ ಸ್ಥಿತಿಯನ್ನು ಕಂಡು ಸಿಯಾಮ್ ರೇಯಾಂಗ್ ಫೌಂಡೇಶನ್‌ನ ಅರೆವೈದ್ಯಕೀಯ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಸಲಾಯಿತು. ಆದರೆ ಅವರು ಬರುವ ಹೊತ್ತಿಗೆ ನಮ್ವೊಂಗ್ಸಾ ಈಗಾಗಲೇ ಮೃತಪಟ್ಟಿದ್ದನು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಮಗುವಿನ ಶಾಲೆಗಾಗಿ 11.2 ಲಕ್ಷ ರೂ. ಖರ್ಚು ಮಾಡುತ್ತಿರುವ ದಂಪತಿ

ಇದನ್ನೂ ಓದಿ
Image
ಹತ್ತು ಸಾವಿರ ಕೋಟಿ ರೂ ಜಾಬ್ ಆಫರ್ ತಿರಸ್ಕರಿಸಿದ ವ್ಯಕ್ತಿ
Image
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ, ವರ್ಕ್‌ ಫ್ರಮ್ ಹೋಮ್ ಬೆಸ್ಟ್‌
Image
ಬದುಕು ಕಟ್ಟಿಕೊಟ್ಟ ಸುಂದರ ನಗರಕ್ಕೆ ಧನ್ಯವಾದ ತಿಳಿಸಿದ ವ್ಯಕ್ತಿ
Image
ಮೊಬೈಲ್‌ ನೋಡುತ್ತಾ ಕುಳಿತು ಮೈ ಮರೆತ್ರೆ ಏನಾಗುತ್ತೆ ಅನ್ನೋದನ್ನು ನೋಡಿ

ಇನ್ನು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರಿಗೆ ಒಂದು ಅಚ್ಚರಿಯ ವಿಚಾರ ಕಂಡಿದೆ. ಕೋಣೆಯೊಳಗೆ 100 ಕ್ಕೂ ಹೆಚ್ಚು ಖಾಲಿ ಬಿಯರ್ ಬಾಟಲಿಗಳು ರೂಮ್​​​ ತುಂಬಾ ಹರಡಿತ್ತು. ರೂಮ್​​​ ಒಳಗೆ ಕಾಲಿಡಲು ಸ್ಥಳವಿಲ್ಲ, ಅಷ್ಟು ಬಾಟಲಿಗಳು ರೂಮ್​​ನಲ್ಲಿ ಇತ್ತು. ಅತಿಯಾದ ಮದ್ಯ ಸೇವನೆಯಿಂದ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಅಧಿಕಾರಿಗಳು ಇನ್ನೂ ಸಾವಿಗೆ ಅಧಿಕೃತ ಕಾರಣವನ್ನು ದೃಢಪಡಿಸಿಲ್ಲ. ಈ ವಾರದ ಕೊನೆಯಲ್ಲಿ ಶವಪರೀಕ್ಷೆ ನಡೆಯಲಿದೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ