AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಛೀ ಛೀ… ಕೊಚ್ಚೆ ನೀರಲ್ಲಿ ನಿಂಬೆ ಜ್ಯೂಸ್‌ ಮಾಡಿ ಕುಡಿದ ಆಸಾಮಿ

ಸೋಷಿಯಲ್‌ ಮೀಡಿಯಾದಲ್ಲಿ ರಾತ್ರೋ ರಾತ್ರಿ ಫೇಮಸ್‌ ಆಗ್ಬೇಕು ಅಂತ ಈ ಕೆಲ ಜನರು ಚಿತ್ರ ವಿಚಿತ್ರ ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಆಸಾಮಿ ರೀಲ್ಸ್‌ ಮಾಡುವ ಸಲುವಾಗಿ ಕೊಚ್ಚೆ ನೀರಿಗೆ ನಿಂಬೆ ರಸ ಬೆರೆಸಿ ಅದನ್ನು ಗಟ ಗಟನೇ ಕುಡಿದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಹೀಗೆ ಹುಚ್ಚಾಟ ಮೆರೆಯುವವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 25, 2024 | 6:08 PM

Share

ಚಿತ್ರ ವಿಚಿತ್ರ ವಿಡಿಯೋಗಳನ್ನು ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆ ಕೊಡುತ್ತಾ ಹುಚ್ಚು ರೀಲ್ಸ್‌ ಮಾಡುತ್ತಲೇ ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆದರವರು ಹಲವರಿದ್ದಾರೆ. ಅಂತಹವರಲ್ಲಿ ಪುನೀತ್‌ ಸೂಪರ್‌ ಸ್ಟಾರ್‌ ಕೂಡಾ ಒಬ್ಬ. ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಅಭಿಮಾನಿಗಳನ್ನು ಹೊಂದಿರುವ ಈತ ತನ್ನ ವಿಲಕ್ಷಣ ಹಾಗೂ ವಿಚಿತ್ರ ವರ್ತನೆಯಿಂದಲೇ ಫೇಮಸ್‌ ಆದವನು. ಅನೇಕ ಬಾರೀ ಈತನ ವರ್ತನೆ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿವೆ. ಇದೀಗ ಅಂಹದ್ದೇ ವಿಡಿಯೋ ವೈರಲ್‌ ಆಗಿದ್ದು, ಈತ ಕೊಚ್ಚೆ ನೀರಿಗೆ ನಿಂಬೆ ರಸವನ್ನು ಬೆರೆಸಿ, ಅದನ್ನು ಜ್ಯೂಸ್‌ ಕುಡಿದಂತೆ ಗಟ ಗಟನೇ ಕುಡಿದಿದ್ದಾನೆ. ಈ ದೃಶ್ಯ ಕಂಡು ಹೀಗೆ ಹುಚ್ಚಾಟ ಮೆರೆಯುವವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು ಎಂದು ನೋಡುಗರು ಕಿಡಿ ಕಾರಿದ್ದಾರೆ.

ಈ ಕುರಿತ ವಿಡಿಯೋವೊಂದನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಪುನೀತ್‌ ಸೂಪರ್‌ಸ್ಟಾರ್‌ ಕೊಚ್ಚೆ ನೀರಿನಲ್ಲಿ ನಿಂಬೆ ಜ್ಯೂಸ್‌ ಮಾಡುವಂತಹ ದೃಶ್ಯವನ್ನು ಕಾಣಬಹುದು. ಕೊಚ್ಚೆ ನೀರಿನ ಪಕ್ಕ ಕುಳಿತ ಆತ ಒಂದು ಗ್ಲಾಸ್‌ಗೆ ನಿಂಬೆ ರಸವನ್ನು ಸೇರಿಸಿ, ಬಳಿಕ ಅದಕ್ಕೆ ಚರಂಡಿಯ ನೀರನ್ನು ಬೆರೆಸಿ ಕ್ಯಾರೇ ಅನ್ನದೇ ಅದನ್ನು ಗಟ ಗಟನೇ ಕುಡಿದಿದ್ದಾನೆ.

ಇದನ್ನೂ ಓದಿ: ತನ್ನ ಮನೆಯ ಅಡುಗೆ ಭಟ್ಟರ ಮನೆಯಲ್ಲೂ ಅಡುಗೆ ಕೆಲಸಕ್ಕೆ ಜನ ಇರುವ ವಿಷಯ ತಿಳಿದು ಬೆಂಗಳೂರಿನ ನಿವಾಸಿ ಶಾಕ್‌

ಅಕ್ಟೋಬರ್‌ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼದಯವಿಟ್ಟು ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ, ಯಾಕಂದ್ರೆ ಮಕ್ಕಳು ಕೂಡಾ ಇತನನ್ನು ಅನುಸರಿಸುವ ಸಾಧ್ಯತೆ ಇರುತ್ತದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇವನೆಂಥಾ ಅಸಹ್ಯಕರ ಮನುಷ್ಯʼ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ