Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಛೀ ಛೀ… ಕೊಚ್ಚೆ ನೀರಲ್ಲಿ ನಿಂಬೆ ಜ್ಯೂಸ್‌ ಮಾಡಿ ಕುಡಿದ ಆಸಾಮಿ

ಸೋಷಿಯಲ್‌ ಮೀಡಿಯಾದಲ್ಲಿ ರಾತ್ರೋ ರಾತ್ರಿ ಫೇಮಸ್‌ ಆಗ್ಬೇಕು ಅಂತ ಈ ಕೆಲ ಜನರು ಚಿತ್ರ ವಿಚಿತ್ರ ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಆಸಾಮಿ ರೀಲ್ಸ್‌ ಮಾಡುವ ಸಲುವಾಗಿ ಕೊಚ್ಚೆ ನೀರಿಗೆ ನಿಂಬೆ ರಸ ಬೆರೆಸಿ ಅದನ್ನು ಗಟ ಗಟನೇ ಕುಡಿದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಹೀಗೆ ಹುಚ್ಚಾಟ ಮೆರೆಯುವವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 25, 2024 | 6:08 PM

ಚಿತ್ರ ವಿಚಿತ್ರ ವಿಡಿಯೋಗಳನ್ನು ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆ ಕೊಡುತ್ತಾ ಹುಚ್ಚು ರೀಲ್ಸ್‌ ಮಾಡುತ್ತಲೇ ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆದರವರು ಹಲವರಿದ್ದಾರೆ. ಅಂತಹವರಲ್ಲಿ ಪುನೀತ್‌ ಸೂಪರ್‌ ಸ್ಟಾರ್‌ ಕೂಡಾ ಒಬ್ಬ. ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಅಭಿಮಾನಿಗಳನ್ನು ಹೊಂದಿರುವ ಈತ ತನ್ನ ವಿಲಕ್ಷಣ ಹಾಗೂ ವಿಚಿತ್ರ ವರ್ತನೆಯಿಂದಲೇ ಫೇಮಸ್‌ ಆದವನು. ಅನೇಕ ಬಾರೀ ಈತನ ವರ್ತನೆ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿವೆ. ಇದೀಗ ಅಂಹದ್ದೇ ವಿಡಿಯೋ ವೈರಲ್‌ ಆಗಿದ್ದು, ಈತ ಕೊಚ್ಚೆ ನೀರಿಗೆ ನಿಂಬೆ ರಸವನ್ನು ಬೆರೆಸಿ, ಅದನ್ನು ಜ್ಯೂಸ್‌ ಕುಡಿದಂತೆ ಗಟ ಗಟನೇ ಕುಡಿದಿದ್ದಾನೆ. ಈ ದೃಶ್ಯ ಕಂಡು ಹೀಗೆ ಹುಚ್ಚಾಟ ಮೆರೆಯುವವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು ಎಂದು ನೋಡುಗರು ಕಿಡಿ ಕಾರಿದ್ದಾರೆ.

ಈ ಕುರಿತ ವಿಡಿಯೋವೊಂದನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಪುನೀತ್‌ ಸೂಪರ್‌ಸ್ಟಾರ್‌ ಕೊಚ್ಚೆ ನೀರಿನಲ್ಲಿ ನಿಂಬೆ ಜ್ಯೂಸ್‌ ಮಾಡುವಂತಹ ದೃಶ್ಯವನ್ನು ಕಾಣಬಹುದು. ಕೊಚ್ಚೆ ನೀರಿನ ಪಕ್ಕ ಕುಳಿತ ಆತ ಒಂದು ಗ್ಲಾಸ್‌ಗೆ ನಿಂಬೆ ರಸವನ್ನು ಸೇರಿಸಿ, ಬಳಿಕ ಅದಕ್ಕೆ ಚರಂಡಿಯ ನೀರನ್ನು ಬೆರೆಸಿ ಕ್ಯಾರೇ ಅನ್ನದೇ ಅದನ್ನು ಗಟ ಗಟನೇ ಕುಡಿದಿದ್ದಾನೆ.

ಇದನ್ನೂ ಓದಿ: ತನ್ನ ಮನೆಯ ಅಡುಗೆ ಭಟ್ಟರ ಮನೆಯಲ್ಲೂ ಅಡುಗೆ ಕೆಲಸಕ್ಕೆ ಜನ ಇರುವ ವಿಷಯ ತಿಳಿದು ಬೆಂಗಳೂರಿನ ನಿವಾಸಿ ಶಾಕ್‌

ಅಕ್ಟೋಬರ್‌ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼದಯವಿಟ್ಟು ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ, ಯಾಕಂದ್ರೆ ಮಕ್ಕಳು ಕೂಡಾ ಇತನನ್ನು ಅನುಸರಿಸುವ ಸಾಧ್ಯತೆ ಇರುತ್ತದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇವನೆಂಥಾ ಅಸಹ್ಯಕರ ಮನುಷ್ಯʼ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ