AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಛೀ ಛೀ… ಕೊಚ್ಚೆ ನೀರಲ್ಲಿ ನಿಂಬೆ ಜ್ಯೂಸ್‌ ಮಾಡಿ ಕುಡಿದ ಆಸಾಮಿ

ಸೋಷಿಯಲ್‌ ಮೀಡಿಯಾದಲ್ಲಿ ರಾತ್ರೋ ರಾತ್ರಿ ಫೇಮಸ್‌ ಆಗ್ಬೇಕು ಅಂತ ಈ ಕೆಲ ಜನರು ಚಿತ್ರ ವಿಚಿತ್ರ ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಆಸಾಮಿ ರೀಲ್ಸ್‌ ಮಾಡುವ ಸಲುವಾಗಿ ಕೊಚ್ಚೆ ನೀರಿಗೆ ನಿಂಬೆ ರಸ ಬೆರೆಸಿ ಅದನ್ನು ಗಟ ಗಟನೇ ಕುಡಿದಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಹೀಗೆ ಹುಚ್ಚಾಟ ಮೆರೆಯುವವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 25, 2024 | 6:08 PM

Share

ಚಿತ್ರ ವಿಚಿತ್ರ ವಿಡಿಯೋಗಳನ್ನು ಮಾಡುತ್ತಾ, ಸಾರ್ವಜನಿಕರಿಗೆ ತೊಂದರೆ ಕೊಡುತ್ತಾ ಹುಚ್ಚು ರೀಲ್ಸ್‌ ಮಾಡುತ್ತಲೇ ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆದರವರು ಹಲವರಿದ್ದಾರೆ. ಅಂತಹವರಲ್ಲಿ ಪುನೀತ್‌ ಸೂಪರ್‌ ಸ್ಟಾರ್‌ ಕೂಡಾ ಒಬ್ಬ. ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಅಭಿಮಾನಿಗಳನ್ನು ಹೊಂದಿರುವ ಈತ ತನ್ನ ವಿಲಕ್ಷಣ ಹಾಗೂ ವಿಚಿತ್ರ ವರ್ತನೆಯಿಂದಲೇ ಫೇಮಸ್‌ ಆದವನು. ಅನೇಕ ಬಾರೀ ಈತನ ವರ್ತನೆ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿವೆ. ಇದೀಗ ಅಂಹದ್ದೇ ವಿಡಿಯೋ ವೈರಲ್‌ ಆಗಿದ್ದು, ಈತ ಕೊಚ್ಚೆ ನೀರಿಗೆ ನಿಂಬೆ ರಸವನ್ನು ಬೆರೆಸಿ, ಅದನ್ನು ಜ್ಯೂಸ್‌ ಕುಡಿದಂತೆ ಗಟ ಗಟನೇ ಕುಡಿದಿದ್ದಾನೆ. ಈ ದೃಶ್ಯ ಕಂಡು ಹೀಗೆ ಹುಚ್ಚಾಟ ಮೆರೆಯುವವರನ್ನು ಮೊದಲು ಒದ್ದು ಒಳಗೆ ಹಾಕ್ಬೇಕು ಎಂದು ನೋಡುಗರು ಕಿಡಿ ಕಾರಿದ್ದಾರೆ.

ಈ ಕುರಿತ ವಿಡಿಯೋವೊಂದನ್ನು gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಪುನೀತ್‌ ಸೂಪರ್‌ಸ್ಟಾರ್‌ ಕೊಚ್ಚೆ ನೀರಿನಲ್ಲಿ ನಿಂಬೆ ಜ್ಯೂಸ್‌ ಮಾಡುವಂತಹ ದೃಶ್ಯವನ್ನು ಕಾಣಬಹುದು. ಕೊಚ್ಚೆ ನೀರಿನ ಪಕ್ಕ ಕುಳಿತ ಆತ ಒಂದು ಗ್ಲಾಸ್‌ಗೆ ನಿಂಬೆ ರಸವನ್ನು ಸೇರಿಸಿ, ಬಳಿಕ ಅದಕ್ಕೆ ಚರಂಡಿಯ ನೀರನ್ನು ಬೆರೆಸಿ ಕ್ಯಾರೇ ಅನ್ನದೇ ಅದನ್ನು ಗಟ ಗಟನೇ ಕುಡಿದಿದ್ದಾನೆ.

ಇದನ್ನೂ ಓದಿ: ತನ್ನ ಮನೆಯ ಅಡುಗೆ ಭಟ್ಟರ ಮನೆಯಲ್ಲೂ ಅಡುಗೆ ಕೆಲಸಕ್ಕೆ ಜನ ಇರುವ ವಿಷಯ ತಿಳಿದು ಬೆಂಗಳೂರಿನ ನಿವಾಸಿ ಶಾಕ್‌

ಅಕ್ಟೋಬರ್‌ 23 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼದಯವಿಟ್ಟು ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಿ, ಯಾಕಂದ್ರೆ ಮಕ್ಕಳು ಕೂಡಾ ಇತನನ್ನು ಅನುಸರಿಸುವ ಸಾಧ್ಯತೆ ಇರುತ್ತದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇವನೆಂಥಾ ಅಸಹ್ಯಕರ ಮನುಷ್ಯʼ ಎಂದು ಕಿಡಿಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ