Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ.  ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​
Follow us
TV9 Web
| Updated By: Pavitra Bhat Jigalemane

Updated on:Jan 10, 2022 | 5:26 PM

ಒಂದು ಬಾರಿ ಅಪಘಾತದಿಂದ ಪಾರಾದರೆ  ಜೀವ ಉಳಿಯಿತು ಎಂದು ಖುಷಿ ಪಡುತ್ತೇವೆ. ಅಂತಹದ್ದರಲ್ಲಿ ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ. ಬೈಕ್​ ಸವಾರ ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಬಚಾವ್​ ಆದ ವ್ಯಕ್ತಿಯನ್ನು ಮಲಾರ್​ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. 

ವ್ಯಕ್ತಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಇಂದು ಘಟನೆ ನಡೆದಿದೆ.  ಮಲ್ಯಾರಪದವು ಊರಿನ ಶಾಲೆಯ ಬಳಿ​ ವೇಗವಾಗಿ ಹೋಗುತ್ತಿದ್ದ ಸವಾರನ ಎದುರು ಸಿಟಿ ಬಸ್​ ಒಂದು ರೋಡ್​ ಕ್ರಾಸ್​ ಮಾಡುತ್ತಿತ್ತು. ಈ ವೇಳೆ  ಕೂದಲೆಳೆ ಆಂತರದಿಂದ ಬೈಕ್​ ಸವಾರ ತಪ್ಪಿಸಿಕೊಂಡಿದ್ದಾನೆ. ಅಲ್ಲಿಂದ ಮುಂದಕ್ಕೆ ಹೋದ ಬೈಕ್​ ಸವಾರ, ಬೈಕ್​ ಅನ್ನು ನಿಯಂತ್ರಣಕ್ಕೆ ತರಲಾಗದೆ ಮೀನಿನ ಕಾರ್ಖಾನೆ ಬಳಿ ಇದ್ದ ಅಂಗಡಿ ಮತ್ತು ಮರದ ನಡುವೆ ಇದ್ದ ಸಣ್ಣ ಜಾಗದಲ್ಲಿ ಸ್ಕೂಟರ್​ಅನ್ನು ನುಗ್ಗಿಸಿಕೊಂಡು ಹೋಗಿದ್ದಾನೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್​ ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರನನ್ನು ಕಂಡು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

Published On - 5:19 pm, Mon, 10 January 22

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!