AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ.  ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​
TV9 Web
| Updated By: Pavitra Bhat Jigalemane|

Updated on:Jan 10, 2022 | 5:26 PM

Share

ಒಂದು ಬಾರಿ ಅಪಘಾತದಿಂದ ಪಾರಾದರೆ  ಜೀವ ಉಳಿಯಿತು ಎಂದು ಖುಷಿ ಪಡುತ್ತೇವೆ. ಅಂತಹದ್ದರಲ್ಲಿ ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ. ಬೈಕ್​ ಸವಾರ ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಬಚಾವ್​ ಆದ ವ್ಯಕ್ತಿಯನ್ನು ಮಲಾರ್​ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. 

ವ್ಯಕ್ತಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಇಂದು ಘಟನೆ ನಡೆದಿದೆ.  ಮಲ್ಯಾರಪದವು ಊರಿನ ಶಾಲೆಯ ಬಳಿ​ ವೇಗವಾಗಿ ಹೋಗುತ್ತಿದ್ದ ಸವಾರನ ಎದುರು ಸಿಟಿ ಬಸ್​ ಒಂದು ರೋಡ್​ ಕ್ರಾಸ್​ ಮಾಡುತ್ತಿತ್ತು. ಈ ವೇಳೆ  ಕೂದಲೆಳೆ ಆಂತರದಿಂದ ಬೈಕ್​ ಸವಾರ ತಪ್ಪಿಸಿಕೊಂಡಿದ್ದಾನೆ. ಅಲ್ಲಿಂದ ಮುಂದಕ್ಕೆ ಹೋದ ಬೈಕ್​ ಸವಾರ, ಬೈಕ್​ ಅನ್ನು ನಿಯಂತ್ರಣಕ್ಕೆ ತರಲಾಗದೆ ಮೀನಿನ ಕಾರ್ಖಾನೆ ಬಳಿ ಇದ್ದ ಅಂಗಡಿ ಮತ್ತು ಮರದ ನಡುವೆ ಇದ್ದ ಸಣ್ಣ ಜಾಗದಲ್ಲಿ ಸ್ಕೂಟರ್​ಅನ್ನು ನುಗ್ಗಿಸಿಕೊಂಡು ಹೋಗಿದ್ದಾನೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್​ ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರನನ್ನು ಕಂಡು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

Published On - 5:19 pm, Mon, 10 January 22

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು