AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​

ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ.  ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ.

ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರ: ವಿಡಿಯೋ ವೈರಲ್​
TV9 Web
| Edited By: |

Updated on:Jan 10, 2022 | 5:26 PM

Share

ಒಂದು ಬಾರಿ ಅಪಘಾತದಿಂದ ಪಾರಾದರೆ  ಜೀವ ಉಳಿಯಿತು ಎಂದು ಖುಷಿ ಪಡುತ್ತೇವೆ. ಅಂತಹದ್ದರಲ್ಲಿ ಇಲ್ಲೊಬ್ಬ ಬೈಕ್​ ಸವಾರ ಒಂದೇ ದಿನ ಎರಡು ಅಪಘಾತದಿಂದ ಪಾರಾಗಿದ್ದಾನೆ. ಈ ಘಟನೆ ಮಂಗಳೂರಿನ ಬಳಿ ನಡೆದಿದೆ. ಬೈಕ್​ ಸವಾರ ಮಂಗಳೂರಿನ ಮಲ್ಯಾರಪದವು ಮಾರ್ಗವಾಗಿ ಮಲಾರ್​ಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಬಚಾವ್​ ಆದ ವ್ಯಕ್ತಿಯನ್ನು ಮಲಾರ್​ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. 

ವ್ಯಕ್ತಿ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವೇಳೆ ಇಂದು ಘಟನೆ ನಡೆದಿದೆ.  ಮಲ್ಯಾರಪದವು ಊರಿನ ಶಾಲೆಯ ಬಳಿ​ ವೇಗವಾಗಿ ಹೋಗುತ್ತಿದ್ದ ಸವಾರನ ಎದುರು ಸಿಟಿ ಬಸ್​ ಒಂದು ರೋಡ್​ ಕ್ರಾಸ್​ ಮಾಡುತ್ತಿತ್ತು. ಈ ವೇಳೆ  ಕೂದಲೆಳೆ ಆಂತರದಿಂದ ಬೈಕ್​ ಸವಾರ ತಪ್ಪಿಸಿಕೊಂಡಿದ್ದಾನೆ. ಅಲ್ಲಿಂದ ಮುಂದಕ್ಕೆ ಹೋದ ಬೈಕ್​ ಸವಾರ, ಬೈಕ್​ ಅನ್ನು ನಿಯಂತ್ರಣಕ್ಕೆ ತರಲಾಗದೆ ಮೀನಿನ ಕಾರ್ಖಾನೆ ಬಳಿ ಇದ್ದ ಅಂಗಡಿ ಮತ್ತು ಮರದ ನಡುವೆ ಇದ್ದ ಸಣ್ಣ ಜಾಗದಲ್ಲಿ ಸ್ಕೂಟರ್​ಅನ್ನು ನುಗ್ಗಿಸಿಕೊಂಡು ಹೋಗಿದ್ದಾನೆ. ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್​ ಒಂದೇ ದಿನ ಎರಡು ಅಪಘಾತದಿಂದ ಪಾರಾದ ಬೈಕ್​ ಸವಾರನನ್ನು ಕಂಡು ಕಂಡು ನೆಟ್ಟಿಗರು ಬೆರಗಾಗಿದ್ದಾರೆ.

Published On - 5:19 pm, Mon, 10 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ