AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೋ ಸ್ಪೇಯಿಂದ ಬೆಂಕಿ; ಹುಟ್ಟುಹಬ್ಬದ ಸಂಭ್ರಮವನ್ನು ಕಿತ್ತುಕೊಳ್ಳಬಹುದು ಜೋಕೆ

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾಗ ಸ್ನೇಹಿತನ ಮುಖಕ್ಕೆ ಸ್ನೋ ಸ್ಪ್ರೇ ಮಾಡಿದಾಗ ಮುಖಕ್ಕೆ ಬೆಂಕಿ ಹತ್ತಿಕೊಂಡಿರುವ ಘಟನೆ ನಡೆದಿದೆ.

ಸ್ನೋ ಸ್ಪೇಯಿಂದ ಬೆಂಕಿ; ಹುಟ್ಟುಹಬ್ಬದ ಸಂಭ್ರಮವನ್ನು ಕಿತ್ತುಕೊಳ್ಳಬಹುದು ಜೋಕೆ
ಹುಟ್ಟು ಹಬ್ಬದ ಸಂಭ್ರಮದ ವೇಳೆ ಮುಖಕ್ಕೆ ಬೆಂಕಿ ತಗುಲಿದ್ದ ಚಿತ್ರ
shruti hegde
|

Updated on: Mar 26, 2021 | 12:07 PM

Share

ತಮ್ಮ ಆತ್ಮೀಯ ಸ್ನೇಹಿತನ ಹುಟ್ಟು ಹಬ್ಬದ ಸಂಭ್ರಮವನ್ನು ಆಚರಿಸುತ್ತಿರುವಾಗ ಹೃದಯ ಕದಡುವ ಘಟನೆಯೊಂದು ನಡೆದಿದೆ. ವ್ಯಕ್ತಿ ಕೇಕ್​ ಕತ್ತರಿಸಲೆಂದು ಬಾಗಿದಾಗ ಸ್ನೇಹಿತರು ಆತನ ಮುಖಕ್ಕೆ ಸ್ನೋ ಸ್ಪ್ರೇ ಮಾಡುತ್ತಾರೆ. ಅದೇ ವೇಳೆ ಮೇಣದ ಬತ್ತಿಗೆ ಹಚ್ಚಿದ್ದ ಬೆಂಕಿ ಸ್ನೋ ಸ್ಪ್ರೇಗೆ ಹಿಡಿದು ವ್ಯಕ್ತಿಯ ಮುಖಕ್ಕೆ ಬೆಂಕಿ ಹಚ್ಚಿಕೊಳ್ಳುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ಕಳೆದ ತಿಂಗಳು ಸ್ನೇಹಿತರೆಲ್ಲ ಕೂಡಿ ತಮ್ಮ ಆತ್ಮೀಯ ಸ್ನೇಹಿತನ ಹುಟ್ಟು ಹಬ್ಬದ ಆಚರಣೆಗೆಂದು ಕೇಕ್​ ಜೊತೆ ಮೇಣದ ಬತ್ತಿ ಹಚ್ಚಿ ದೀಪ ಬೆಳಗಿ ಸಕಲ ಸಿದ್ಧತೆ ಮಾಡಿಕೊಂಡಿರುತ್ತಾರೆ. ಇದೇ ವೇಳೆ ಕೇಕ್​ ಕತ್ತರಿಸಲೆಂದು ವ್ಯಕ್ತಿ ಬಾಗುತ್ತಿದ್ದಾಗ, ಖುಷಿಯಿಂದ ಸ್ನೇಹಿತರು ವ್ಯಕ್ತಿ ಮುಖಕ್ಕೆ ಸ್ನೋ ಸ್ಪ್ರೇ ಮಾಡುತ್ತಾರೆ. ಕೇಕ್​ ಪಕ್ಕದಲ್ಲಿ ಬೆಳಗಿದ್ದ ಮೇಣದ ಬತ್ತಿಯ ಬೆಂಕಿ ವ್ಯಕ್ತಿ ಮುಖಕ್ಕೆ ಎರಚಿದ್ದ ಸ್ನೋ ನೊರೆಗೆ ತಗಲುತ್ತದೆ.

ಮುಖಕ್ಕೆ ಬೆಂಕಿ ಹತ್ತಿದ ತಕ್ಷಣ ಆತನ ಸ್ನೇಹಿತರು ಸಹಾಯಕ್ಕಾಗಿ ಓಡುತ್ತಾರೆ. ತಡ ಮಾಡದೇ ಬೆಂಕಿ ಆರಿಸುತ್ತಾರೆ. ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಟ್ರಾವೆಲ್ ಬ್ಲಾಗರ್​ ‘ಪಾರ್ಟಿ ಸ್ನೋ ಸ್ಪ್ರೇ ಕಣ್ಣಿಗೆ ಒಳ್ಳೆಯದಲ್ಲದ ರಾಸಾಯನಿಕಗಳನ್ನು ಹೊಂದಿರುತ್ತದೆ. ಇದು ಕಣ್ಣಿನ ಕಿರಿಕಿರಿಯುಂಟು ಮಾಡುತ್ತದೆ. ಕಣ್ಣು ಉರಿಯಲು ಪ್ರಾರಂಭಿಸುತ್ತದೆ. ಈ ದಿನಗಳಲ್ಲಿ ಯುವ ಹುಡುಗರು ಮತ್ತು ಹುಡುಗಿಯರು ಪಾರ್ಟಿಗಳಲ್ಲಿ, ವಿಶೇಷವಾಗಿ ಜನ್ಮದಿನಗಳಲ್ಲಿ ಸ್ನೋ ಸ್ಪ್ರೇಗಳೊಂದಿಗೆ ಆಟವಾಡುತ್ತಾರೆ. ದೇಹಕ್ಕೆ ಸಿಂಪಡಿಸುತ್ತಾರೆ. ಪಾರ್ಟಿ ಸ್ಪ್ರೇಗಳು ಹೆಚ್ಚು ಉರಿಯುವ ರಾಸಾಯನಿಕಗಳನ್ನು ಹೊಂದಿರುವುದರಿಂದ ಅಪಾಯಕಾರಿ. ಆದ್ದರಿಂದ, ಅದನ್ನು ಬೆಂಕಿಯ ಬಳಿ ಸಿಂಪಡಿಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ’.

ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾದ ವಿಡಿಯೋ ಇದೀಗ ಡಿಲಿಟ್​ ಆಗಿದೆ.

ಇದನ್ನೂ ಓದಿ: ಹೊತ್ತಿ ಉರಿದ ಕೊಟ್ಟಿಗೆ; ನೋಡನೋಡುತ್ತಲೇ ಸಜೀವ ದಹನವಾದ ಆಕಳು, ಕಲಬುರಗಿಯಲ್ಲಿ ಮನಕಲಕುವ ಘಟನೆ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!