AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ನೋ ಸ್ಪೇಯಿಂದ ಬೆಂಕಿ; ಹುಟ್ಟುಹಬ್ಬದ ಸಂಭ್ರಮವನ್ನು ಕಿತ್ತುಕೊಳ್ಳಬಹುದು ಜೋಕೆ

ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾಗ ಸ್ನೇಹಿತನ ಮುಖಕ್ಕೆ ಸ್ನೋ ಸ್ಪ್ರೇ ಮಾಡಿದಾಗ ಮುಖಕ್ಕೆ ಬೆಂಕಿ ಹತ್ತಿಕೊಂಡಿರುವ ಘಟನೆ ನಡೆದಿದೆ.

ಸ್ನೋ ಸ್ಪೇಯಿಂದ ಬೆಂಕಿ; ಹುಟ್ಟುಹಬ್ಬದ ಸಂಭ್ರಮವನ್ನು ಕಿತ್ತುಕೊಳ್ಳಬಹುದು ಜೋಕೆ
ಹುಟ್ಟು ಹಬ್ಬದ ಸಂಭ್ರಮದ ವೇಳೆ ಮುಖಕ್ಕೆ ಬೆಂಕಿ ತಗುಲಿದ್ದ ಚಿತ್ರ
shruti hegde
|

Updated on: Mar 26, 2021 | 12:07 PM

Share

ತಮ್ಮ ಆತ್ಮೀಯ ಸ್ನೇಹಿತನ ಹುಟ್ಟು ಹಬ್ಬದ ಸಂಭ್ರಮವನ್ನು ಆಚರಿಸುತ್ತಿರುವಾಗ ಹೃದಯ ಕದಡುವ ಘಟನೆಯೊಂದು ನಡೆದಿದೆ. ವ್ಯಕ್ತಿ ಕೇಕ್​ ಕತ್ತರಿಸಲೆಂದು ಬಾಗಿದಾಗ ಸ್ನೇಹಿತರು ಆತನ ಮುಖಕ್ಕೆ ಸ್ನೋ ಸ್ಪ್ರೇ ಮಾಡುತ್ತಾರೆ. ಅದೇ ವೇಳೆ ಮೇಣದ ಬತ್ತಿಗೆ ಹಚ್ಚಿದ್ದ ಬೆಂಕಿ ಸ್ನೋ ಸ್ಪ್ರೇಗೆ ಹಿಡಿದು ವ್ಯಕ್ತಿಯ ಮುಖಕ್ಕೆ ಬೆಂಕಿ ಹಚ್ಚಿಕೊಳ್ಳುವ ಭಯಾನಕ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 

ಕಳೆದ ತಿಂಗಳು ಸ್ನೇಹಿತರೆಲ್ಲ ಕೂಡಿ ತಮ್ಮ ಆತ್ಮೀಯ ಸ್ನೇಹಿತನ ಹುಟ್ಟು ಹಬ್ಬದ ಆಚರಣೆಗೆಂದು ಕೇಕ್​ ಜೊತೆ ಮೇಣದ ಬತ್ತಿ ಹಚ್ಚಿ ದೀಪ ಬೆಳಗಿ ಸಕಲ ಸಿದ್ಧತೆ ಮಾಡಿಕೊಂಡಿರುತ್ತಾರೆ. ಇದೇ ವೇಳೆ ಕೇಕ್​ ಕತ್ತರಿಸಲೆಂದು ವ್ಯಕ್ತಿ ಬಾಗುತ್ತಿದ್ದಾಗ, ಖುಷಿಯಿಂದ ಸ್ನೇಹಿತರು ವ್ಯಕ್ತಿ ಮುಖಕ್ಕೆ ಸ್ನೋ ಸ್ಪ್ರೇ ಮಾಡುತ್ತಾರೆ. ಕೇಕ್​ ಪಕ್ಕದಲ್ಲಿ ಬೆಳಗಿದ್ದ ಮೇಣದ ಬತ್ತಿಯ ಬೆಂಕಿ ವ್ಯಕ್ತಿ ಮುಖಕ್ಕೆ ಎರಚಿದ್ದ ಸ್ನೋ ನೊರೆಗೆ ತಗಲುತ್ತದೆ.

ಮುಖಕ್ಕೆ ಬೆಂಕಿ ಹತ್ತಿದ ತಕ್ಷಣ ಆತನ ಸ್ನೇಹಿತರು ಸಹಾಯಕ್ಕಾಗಿ ಓಡುತ್ತಾರೆ. ತಡ ಮಾಡದೇ ಬೆಂಕಿ ಆರಿಸುತ್ತಾರೆ. ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಟ್ರಾವೆಲ್ ಬ್ಲಾಗರ್​ ‘ಪಾರ್ಟಿ ಸ್ನೋ ಸ್ಪ್ರೇ ಕಣ್ಣಿಗೆ ಒಳ್ಳೆಯದಲ್ಲದ ರಾಸಾಯನಿಕಗಳನ್ನು ಹೊಂದಿರುತ್ತದೆ. ಇದು ಕಣ್ಣಿನ ಕಿರಿಕಿರಿಯುಂಟು ಮಾಡುತ್ತದೆ. ಕಣ್ಣು ಉರಿಯಲು ಪ್ರಾರಂಭಿಸುತ್ತದೆ. ಈ ದಿನಗಳಲ್ಲಿ ಯುವ ಹುಡುಗರು ಮತ್ತು ಹುಡುಗಿಯರು ಪಾರ್ಟಿಗಳಲ್ಲಿ, ವಿಶೇಷವಾಗಿ ಜನ್ಮದಿನಗಳಲ್ಲಿ ಸ್ನೋ ಸ್ಪ್ರೇಗಳೊಂದಿಗೆ ಆಟವಾಡುತ್ತಾರೆ. ದೇಹಕ್ಕೆ ಸಿಂಪಡಿಸುತ್ತಾರೆ. ಪಾರ್ಟಿ ಸ್ಪ್ರೇಗಳು ಹೆಚ್ಚು ಉರಿಯುವ ರಾಸಾಯನಿಕಗಳನ್ನು ಹೊಂದಿರುವುದರಿಂದ ಅಪಾಯಕಾರಿ. ಆದ್ದರಿಂದ, ಅದನ್ನು ಬೆಂಕಿಯ ಬಳಿ ಸಿಂಪಡಿಸದಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ’.

ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಲಾದ ವಿಡಿಯೋ ಇದೀಗ ಡಿಲಿಟ್​ ಆಗಿದೆ.

ಇದನ್ನೂ ಓದಿ: ಹೊತ್ತಿ ಉರಿದ ಕೊಟ್ಟಿಗೆ; ನೋಡನೋಡುತ್ತಲೇ ಸಜೀವ ದಹನವಾದ ಆಕಳು, ಕಲಬುರಗಿಯಲ್ಲಿ ಮನಕಲಕುವ ಘಟನೆ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ