AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿಯನ್ನು 58 ವರ್ಷದ ಶೈಲೇಂದರ್​ ಮೆಹತಾ ಎಂದು ಗುರುತಿಸಲಾಗಿದೆ. ಸದ್ಯ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೆಟ್ರೋ ಹಳಿಗೆ ವ್ಯಕ್ತಿ ಬಿದ್ದ ದೃಶ್ಯ
TV9 Web
| Edited By: |

Updated on: Feb 06, 2022 | 1:36 PM

Share

ಮೊಬೈಲ್ (Mobile​ ದೈನಂದಿನ ಬದುಕಿನ ಭಾಗವಾಗಿದೆ. ಪ್ರತೀ ಕ್ಷಣವೂ ಕೈಯಲ್ಲಿ ಮೊಬೈಲ್​ ಇರಬೇಕು. ಸಾರ್ವಜನಿಕವಾಗಿ ಓಡಾಡುವಾಗಲಂತೂ ಕೈಯಲ್ಲಿ ಮೊಬೈಲ್​, ಕಿವಿಗೆ ಇಯರ್​ಫೋನ್ ಹಾಕಿಕೊಂಡು ತಮ್ಮದೇ ಲೋಕದಲ್ಲಿ ಇರುವ​  ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ರೀತಿ ಸಾರ್ವಜನಿಕವಾಗಿಯೂ ತಲೆತಗ್ಗಿಸಿ ಮೊಬೈಲ್​ ನೋಡುತ್ತಾ ಹೋಗುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಇದರಿಂದ ಈ ಹಿಂದೆಯೂ ಸಾಕಷ್ಟು ಅಪಘಾತಗಳು ಸಂಭಿವಿಸಿದೆ. ಈಗ ಅಂತಹದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಮೊಬೈಲ್​ ನೋಡುತ್ತಾ ನಡೆದುಕೊಂಡು ಬರುವಾಗ ಮೆಟ್ರೋ (Metro) ಹಳಿಯ ಮೇಲೆ ಬಿದ್ದ ಘಟನೆ  ನಡೆದಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಡಿಯೋದಲ್ಲಿ ದೆಹಲಿಯ ಶಹದಾರ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮೊಬೈಲ್​ ನೋಡಿಕೊಂಡು ನಡೆದುಕೊಂಡು ಬರುತ್ತಿರುವುದನ್ನು ಕಾಣಬಹುದು. ತಕ್ಷಣ ಆತ ಆಯತಪ್ಪಿ  ಮೆಟ್ರೋ ಹಳಿಯ ಮೇಲೆ ಬೀಳುತ್ತಾನೆ. ಅದೃಷ್ಟವಶಾತ್​ ಅಲ್ಲಿಯೇ ಇದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಬಂದು ಬಿದ್ದಲ್ಲಿಂದ ಏಳಲು ಕಷ್ಟಪಡುತ್ತಿದ್ದ ವ್ಯಕ್ತಿಯನ್ನು ಮೇಲೆಕ್ಕೆ ಎತ್ತಿ ಪ್ಲಾಟ್​ಪಾರ್ಮಗೆ ಹತ್ತಿಸಿದ್ದಾರೆ. ವರದಿಯ  ಪ್ರಕಾರ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿಯನ್ನು 58 ವರ್ಷದ ಶೈಲೇಂದರ್​ ಮೆಹತಾ ಎಂದು ಗುರುತಿಸಲಾಗಿದೆ. ಸದ್ಯ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯವನ್ನು ಸಿಐಎಸ್​ಎಫ್​ ಟ್ವಿಟರ್​ ಖಾತೆ ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಮನೆ ಕೊಟ್ಟ ಸರ್ಕಾರ, ಮೂಲ ಸೌಕರ್ಯ ಕೊಡಲು ಮರೆಯಿತು!
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿಳಿದ 286 ಕೆಜಿ ತೂಕದ ಸ್ವರ್ಣ ಧನಸ್ಸು
ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ
ನರೇಗಾ ಹೆಸರು ವಿವಾದ, ಸರ್ಕಾರ-ಪ್ರತಿಪಕ್ಷಗಳ ನಡುವೆ ಜಟಾಪಟಿ
ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ
ಸಂಧ್ಯಾ ಜೊತೆ ಸರಳವಾಗಿ ವಿವಾಹ ಆದ ಉಗ್ರಂ ಮಂಜು; ಇಲ್ಲಿದೆ ವಿಡಿಯೋ
ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು
ಮೊದಲೇ ಗೆಲುವಿನ ಸೂಚನೆ ಕೊಟ್ಟಿದ್ದ ಸುದೀಪ್; ಗಿಲ್ಲಿ ಹೇಳಿದ್ದಿಷ್ಟು
ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು
ರೈಲ್ವೆ ಹಳಿಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ರೈಲು
ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ
ಯಾರೇ ಗೆದ್ರು ಖುಷೀನೆ; ಅಶ್ವಿನಿ ಹೇಳಿದ್ದ ಕೊನೆಯ ಮಾತು ನನೆಪಿಸಿಕೊಂಡ ಗಿಲ್ಲಿ