AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿಯನ್ನು 58 ವರ್ಷದ ಶೈಲೇಂದರ್​ ಮೆಹತಾ ಎಂದು ಗುರುತಿಸಲಾಗಿದೆ. ಸದ್ಯ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

ಮೊಬೈಲ್​ ನೋಡುತ್ತಾ ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಮೆಟ್ರೋ ಹಳಿಗೆ ವ್ಯಕ್ತಿ ಬಿದ್ದ ದೃಶ್ಯ
TV9 Web
| Edited By: |

Updated on: Feb 06, 2022 | 1:36 PM

Share

ಮೊಬೈಲ್ (Mobile​ ದೈನಂದಿನ ಬದುಕಿನ ಭಾಗವಾಗಿದೆ. ಪ್ರತೀ ಕ್ಷಣವೂ ಕೈಯಲ್ಲಿ ಮೊಬೈಲ್​ ಇರಬೇಕು. ಸಾರ್ವಜನಿಕವಾಗಿ ಓಡಾಡುವಾಗಲಂತೂ ಕೈಯಲ್ಲಿ ಮೊಬೈಲ್​, ಕಿವಿಗೆ ಇಯರ್​ಫೋನ್ ಹಾಕಿಕೊಂಡು ತಮ್ಮದೇ ಲೋಕದಲ್ಲಿ ಇರುವ​  ಸ್ಥಿತಿ ನಿರ್ಮಾಣವಾಗಿದೆ. ಆದರೆ ಈ ರೀತಿ ಸಾರ್ವಜನಿಕವಾಗಿಯೂ ತಲೆತಗ್ಗಿಸಿ ಮೊಬೈಲ್​ ನೋಡುತ್ತಾ ಹೋಗುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿ. ಇದರಿಂದ ಈ ಹಿಂದೆಯೂ ಸಾಕಷ್ಟು ಅಪಘಾತಗಳು ಸಂಭಿವಿಸಿದೆ. ಈಗ ಅಂತಹದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ಮೊಬೈಲ್​ ನೋಡುತ್ತಾ ನಡೆದುಕೊಂಡು ಬರುವಾಗ ಮೆಟ್ರೋ (Metro) ಹಳಿಯ ಮೇಲೆ ಬಿದ್ದ ಘಟನೆ  ನಡೆದಿದೆ. ಇದರ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವಿಡಿಯೋದಲ್ಲಿ ದೆಹಲಿಯ ಶಹದಾರ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಮೊಬೈಲ್​ ನೋಡಿಕೊಂಡು ನಡೆದುಕೊಂಡು ಬರುತ್ತಿರುವುದನ್ನು ಕಾಣಬಹುದು. ತಕ್ಷಣ ಆತ ಆಯತಪ್ಪಿ  ಮೆಟ್ರೋ ಹಳಿಯ ಮೇಲೆ ಬೀಳುತ್ತಾನೆ. ಅದೃಷ್ಟವಶಾತ್​ ಅಲ್ಲಿಯೇ ಇದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ಬಂದು ಬಿದ್ದಲ್ಲಿಂದ ಏಳಲು ಕಷ್ಟಪಡುತ್ತಿದ್ದ ವ್ಯಕ್ತಿಯನ್ನು ಮೇಲೆಕ್ಕೆ ಎತ್ತಿ ಪ್ಲಾಟ್​ಪಾರ್ಮಗೆ ಹತ್ತಿಸಿದ್ದಾರೆ. ವರದಿಯ  ಪ್ರಕಾರ ವ್ಯಕ್ತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ.

ಮೆಟ್ರೋ ಹಳಿಗೆ ಬಿದ್ದ ವ್ಯಕ್ತಿಯನ್ನು 58 ವರ್ಷದ ಶೈಲೇಂದರ್​ ಮೆಹತಾ ಎಂದು ಗುರುತಿಸಲಾಗಿದೆ. ಸದ್ಯ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ. ಈ ಘಟನೆಯ ಸಿಸಿಟಿವಿ ದೃಶ್ಯವನ್ನು ಸಿಐಎಸ್​ಎಫ್​ ಟ್ವಿಟರ್​ ಖಾತೆ ಹಂಚಿಕೊಂಡಿದ್ದು, ಸಖತ್​ ವೈರಲ್​ ಆಗಿದೆ.

ಇದನ್ನೂ ಓದಿ:

ಬ್ಲಾಕ್​ಚೈನ್​ ತಂತ್ರಜ್ಞಾನದ ಮೂಲಕ ಮದುವೆಯಾದ ದಂಪತಿ; ಭಾರತದಲ್ಲಿ ಇದು ಮೊದಲ ಟೆಕ್ನಾಲಜಿಕಲ್​ ಮದುವೆ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?