AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರೀಲ್ಸ್‌ಗಾಗಿ ಬೆಟ್ಟದಲ್ಲಿ ಸ್ಟಂಟ್‌ ಮಾಡಲು ಹೋಗಿ ಆಯ ತಪ್ಪಿ ಕೆಳಗೆ ಬಿದ್ದ ಯುವಕ; ವಿಡಿಯೋ ವೈರಲ್‌

ವಿಡಿಯೋ ಮತ್ತು ರೀಲ್ಸ್‌ ಮಾಡುವ ಸಲುವಾಗಿ ಕೆಲವರು ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಕೂಡಾ ಬೆಟ್ಟದ ತುದಿಯಲ್ಲಿ ನಿಂದು ಕಸರತ್ತು ಮಾಡಲು ಹೋಗಿದ್ದು, ಆತ ಬ್ಯಾಕ್‌ಫ್ಲಿಪ್‌ ಮಾಡುವ ಸಂದರ್ಭದಲ್ಲಿ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾನೆ. ಈ ಆಘಾತಕಾರಿ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಮಾಲಾಶ್ರೀ ಅಂಚನ್​
| Edited By: |

Updated on: Oct 31, 2024 | 5:35 PM

Share

ಸೋಷಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗುವ ಸಲುವಾಗಿ ರೀಲ್ಸ್‌ ಮಾಡುವವರು ಹಲವಾರು ಸಾಹಸಗಳನ್ನು ಮಾಡುತ್ತಿರುತ್ತಾರೆ. ಅದರಲ್ಲಿ ಚಿತ್ರ ವಿಚಿತ್ರ ಸಾಹಸಗಳನ್ನು ಮಾಡಲು ಹೋಗಿ ಪ್ರಾಣಕ್ಕೆ ಆಪತ್ತು ತಂದುಕೊಂಡವರೂ ಇದ್ದಾರೆ. ಹೀಗೆ ರೀಲ್ಸ್‌ ಮಾಡಲು ಹೋಗಿ ಪಜೀತಿಗೆ ಸಿಲುಕಿಕೊಂಡವರ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತಿರುತ್ತವೆ. ಇದೀಗ ಇಂತಹದ್ದೇ ಘಟನೆಯೊಂದು ನಡೆದಿದ್ದು, ಯುವಕನೊಬ್ಬ ರೀಲ್ಸ್‌ಗಾಗಿ ಬೆಟ್ಟದ ತುದಿಯಲ್ಲಿ ನಿಂತು ಕಸರತ್ತು ಮಾಡಲು ಹೋಗಿದ್ದು, ಆತ ಬ್ಯಾಕ್‌ಫ್ಲಿಪ್‌ ಮಾಡುವ ಸಂದರ್ಭದಲ್ಲಿ ಆಯತಪ್ಪಿ ದೊಪ್ಪನೆ ಪ್ರಪಾತಕ್ಕೆ ಬಿದ್ದಿದ್ದಾನೆ. ಈ ಆಘಾತಕಾರಿ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಸ್ಟಂಟ್‌, ಬಗೆ ಬಗೆಯ ಕಸರತ್ತುಗಳನ್ನು ಮಾಡಲು ಹೋಗಿ ತಮಗೆ ತಾವೇ ಅಪಾಯ ತಂದುಕೊಂಡ ಹಲವರಿದ್ದಾರೆ. ಅದೇ ರೀತಿ ಇಲ್ಲೊಬ್ಬ ಯುವಕ ಕೂಡಾ ಸ್ಟೈಲ್‌ ಆಗಿ ಬ್ಯಾಕ್‌ಫ್ಲಿಪ್‌ ಮಾಡಲು ಹೋಗಿ ಆಯತಪ್ಪಿ ಬೆಟ್ಟದ ಕೆಳಗೆ ಬಿದ್ದಿದ್ದಾನೆ. ಈ ಘಟನೆ ಯಾವಾಗ, ಎಲ್ಲಿ ನಡೆದದ್ದು ಎಂಬುದರ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಈ ಕುರಿತ ಪೋಸ್ಟ್‌ ಒಂದನ್ನು cctividiots ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು ʼಇನ್ನೊಬ್ಬ ಯುವಕ ಈ ಮೂರ್ಖನನ್ನು ಹಿಡಿಯಲು ಪ್ರಯತ್ನಿಸಿದನುʼ ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಯುವಕನೊಬ್ಬ ಬ್ಯಾಕ್‌ಫ್ಲಿಪ್‌ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಹೀಗೆ ಕಸರತ್ತು ಮಾಡುವ ವೇಳೆ ಆತ ಆಯ ತಪ್ಪಿ ಬೆಟ್ಟದ ಕೆಳಗೆ ಬಿದ್ದಿದ್ದಾನೆ. ಅಲ್ಲಿದ್ದ ಯುವಕ ಆತನನ್ನು ಹಿಡಿಯಲು ಪ್ರಯತ್ನಿಸಿದರೂ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಸರಳವಾಗಿ ಪರಭಾಷಿಕರಿಗೆ ಕನ್ನಡ ಕಲಿಸುವ ಪ್ರಯತ್ನದಲ್ಲಿ ಯುವತಿಯರು…

ಇಂದು ಮಧ್ಯಾಹ್ನ ಹಂಚಿಕೊಂಡ ಈ ವಿಡಿಯೋ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆತ ಬಿದ್ದ ಏಟಿಗೆ ಖಂಡಿತವಾಗಿಯೂ ಆತನ ಮೂಳೆಗಳು ಮುರಿದಿರುತ್ತವೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼವಿಡಿಯೋಗಾಗಿ ಜೀವವನ್ನೇ ಪಣಕ್ಕಿಡುವ ಅವಶ್ಯಕತೆ ಇತ್ತೇ?ʼ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆತ ಉದ್ದೇಶಪೂರ್ವಕವಾಗಿ ಮುಂದೆ ಓಡಿ ಬೆಟ್ಟದಿಂದ ಕೆಳಗೆ ಬಿದ್ದಂತಿದೆʼ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ