AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಕಚ್ಚಿ ಯುವಕ ಸಾವು,  ಬದುಕಬಹುದು ಎಂದು ಶವವನ್ನು ಗಂಗಾ ನದಿಗೆ ಮುಳುಗಿಸಿದ ಕುಟುಂಬ 

ಈ ಘಟನೆಯನ್ನು  ಮೂಢ ನಂಬಿಕೆಯ ಪರಮಾವಧಿ ಅಂದ್ರೂ ತಪ್ಪಿಲ್ಲ. ಉತ್ತರ ಪ್ರದೇಶದ 20 ವರ್ಷದ ಯುವಕನೊಬ್ಬ ಹಾವು ಕಡಿತದಿಂದ ಸಾವನ್ನಪ್ಪಿದ್ದು,  ಈ ಶವವನ್ನು ಗಂಗಾ ನದಿಯಲ್ಲಿ ಮುಳುಗಿಸಿಟ್ಟರೆ, ದೇಹಕ್ಕೆ ಏರಿದ ವಿಷವೆಲ್ಲಾ ಹೋಗಿ ಆತ ಮತ್ತೆ ಬದುಕಿ ಬರುತ್ತಾನೆ ಎಂದು ಯಾರೋ ಹೇಳಿದ ಮಾತನ್ನು ಕೇಳಿ,  ಮೃತ ಯುವಕನ ಕುಟುಂಬಸ್ಥರು ಶವವನ್ನು ಹಗ್ಗದಲ್ಲಿ ಕಟ್ಟಿ ಎರಡು ದಿನಗಳ  ಗಂಗಾ ನದಿ ನೀರಿನಲ್ಲಿರಿಸಿದ್ದಾರೆ. 

ಹಾವು ಕಚ್ಚಿ ಯುವಕ ಸಾವು,  ಬದುಕಬಹುದು ಎಂದು ಶವವನ್ನು ಗಂಗಾ ನದಿಗೆ ಮುಳುಗಿಸಿದ ಕುಟುಂಬ 
ಮಾಲಾಶ್ರೀ ಅಂಚನ್​
| Edited By: |

Updated on: May 03, 2024 | 4:40 PM

Share

ಯಾವುದೇ ವಿಷಯಗಳಲ್ಲಿಯೂ  ಅತಿಯಾದ ಮೂಢನಂಬಿಕೆ ಒಳ್ಳೆಯದಲ್ಲ. ಸಾಕಷ್ಟು ಜನರು ಇಂತಹ ನಂಬಿಕೆಗಳಿಂದ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಅದೇ ರೀತಿ ಇಲ್ಲೊಂದು ಮೂಢನಂಬಿಕೆಯ ಪರಮಾವಧಿಗೆ ಸಂಬಂಧಿಸಿದ ಸುದ್ದಿಯೊಂದು ವೈರಲ್ ಆಗಿದ್ದು, 20 ವರ್ಷದ ಯುವಕನೊಬ್ಬ ಹಾವು ಕಡಿತದಿಂದ ಮೃತಪಟ್ಟಿದ್ದು, ಆತ ಬದುಕಿ ಬರುತ್ತಾನೆಂದು ನಂಬಿ ಕುಟುಂಬಸ್ಥರು ಆತನ ಶವವನ್ನು ಹಗ್ಗದಲ್ಲಿ ಕಟ್ಟಿ ಎರಡು ದಿನಗಳ ಕಾಲ ಗಂಗಾನದಿ ನೀರಿನಲ್ಲಿ ಮುಳುಗಿಸಿಟ್ಟಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನ ಜಹಾಂಗೀರಾಬಾದಿನಲ್ಲಿ ನಡೆದಿದ್ದು, ಏಪ್ರಿಲ್ 26 ರಂದು ಮೋಹಿತ್ ಎಂಬ 20 ವರ್ಷ ವಯಸ್ಸಿನ ಯುವಕನೊಬ್ಬ ಮತ ಚಲಾಯಿಸಿ ಬಂದು ಹೊಲದ ಕಡೆಗೆ ಹೋಗಿರುತ್ತಾನೆ.  ಅಲ್ಲಿ ಆತನಿಗೆ ಹಾವು ಕಡಿದಿದ್ದು, ಆ ತಕ್ಷಣ ಆ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಟ್ರೆಡ್ ಮಿಲ್ ಮೇಲೆ ಓಡುವಂತೆ ಒತ್ತಾಯಿಸಿ ಮಗ ಪ್ರಾಣವನ್ನೇ ಬಲಿ ಪಡೆದುಕೊಂಡ ತಂದೆ

ನಂತರ ಹೀಗೆ ಹಾವು ಕಡಿತದಿಂದ ಮೃತಪಟ್ಟವರು ಬದುಕಿಬರಬೇಕಾದರೆ ಹಾಗೂ ಅವರ ದೇಹಕ್ಕೆ ಏರಿದ ವಿಷ ಹೋಗಲಾಡಸಬೇಕಾದರೆ ಮೃತ ದೇಹವನ್ನು ಗಂಗಾ ನದಿನೀರಿನಲ್ಲಿ ಮುಳುಗಿಸಬೇಕು ಎಂದು ಯಾರೋ ಹೇಳಿದ ಮೂಢ ನಂಬಿಕೆಯ ಮಾತನ್ನು ನಂಬಿ, ಮೃತ ಯುವಕನ ಕುಟುಂಬಸ್ಥರು ಮೃತ ದೇಹವನ್ನು  ಹಗ್ಗದಲ್ಲಿ ಕಟ್ಟಿ ಎರಡು ದಿನಗಳ ಕಾಲ ಗಂಗಾ ನದಿ ನೀರಿನಲ್ಲಿ ಇರಿಸಿದ್ದಾರೆ. ನಂತರ ಉಸಿರು ಮರಳಿ ಬರದಿದ್ದಾಗ ಆ ಯುವಕನ ಅಂತ್ಯ ಸಂಸ್ಕಾರವನ್ನು ಅಲ್ಲಿಯೇ ನೆರವೇರಿಸಲಾಗಿದೆ. ಈ ಘಟನೆ ಮೂಢನಂಬಿಕೆಯ ಪರಮಾವಧಿಗೆ ಜ್ವಲಂತ ಉದಾಹರಣೆ ಎಂದರೆ ತಪ್ಪಾಗಲಾರದು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?