AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾರ್ ವಾಶ್ ಮಾಡಿ ಜೀವನ ನಡೆಸುವ ವೃದ್ಧೆಗೆ ಸರ್ಪ್ರೈಸ್ ಉಡುಗೊರೆ ನೀಡಿದ ವ್ಯಕ್ತಿ

ಇಳಿ ವಯಸ್ಸಿನಲ್ಲಿ ತಾವೇ ದುಡಿದು ತಿನ್ನುವವರನ್ನು ನೋಡುವಾಗ ನಿಜಕ್ಕೂ ಖುಷಿ ಎನಿಸುತ್ತದೆ. ಇದಕ್ಕೆ ಉದಾಹರಣೆಯಂತಿದ್ದಾರೆ ಈ ವೃದ್ಧೆ. ರಸ್ತೆ ಬದಿಯಲ್ಲಿ ಕಾರನ್ನು ತೊಳೆಯುವ ಕಾಯಕವನ್ನು ನಂಬಿ ಬದುಕುತ್ತಿರುವ ಈ ಅಜ್ಜಿಯ ಮೊಗದಲ್ಲಿ ವ್ಯಕ್ತಿಯೊಬ್ಬರು ನಗು ಮೂಡಿಸಿದ್ದಾರೆ. ಈ ಹೃದಯಸ್ಪರ್ಶಿ ವಿಡಿಯೋ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

Video: ಕಾರ್ ವಾಶ್ ಮಾಡಿ ಜೀವನ ನಡೆಸುವ ವೃದ್ಧೆಗೆ ಸರ್ಪ್ರೈಸ್ ಉಡುಗೊರೆ ನೀಡಿದ ವ್ಯಕ್ತಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Feb 23, 2026 | 4:50 PM

Share

ಮುಂಬೈ, ಫೆಬ್ರವರಿ 23: ಸ್ವಾಭಿಮಾನದ ಬದುಕೇ ಹಾಗೆ, ಎಷ್ಟೇ ಕಷ್ಟ ಆದ್ರೂ ದುಡಿಮೆ ತಿಂತಾರೆ ಹೊರತು ಯಾರ ಮುಂದೆಯೂ ಕೈ ಚಾಚಲ್ಲ. ಅದರಲ್ಲೂ ಇಳಿ ವಯಸ್ಸಿನ ವ್ಯಕ್ತಿಗಳು ಕಷ್ಟ ಪಟ್ಟು ದುಡಿಯುವುದನ್ನು ನೋಡಿದ್ರೆ ಕಣ್ಣಲ್ಲಿ ನೀರು ಬರುತ್ತದೆ. ಇದೀಗ ಇಲ್ಲೊಬ್ಬ ವೃದ್ಧೆಯೂ (elderly woman) ಮುಂಬೈ ರಸ್ತೆಯಲ್ಲಿ ಧೂಳು ಹಿಡಿದ ಕಾರುಗಳನ್ನು ತೊಳೆದು ಮೂರು ಹೊತ್ತಿನ ಕೂಳನ್ನು ಸಂಪಾದಿಸಿಕೊಳ್ಳುತ್ತಿದ್ದಾರೆ. ಈ ಅಜ್ಜಿಗೆ ವ್ಯಕ್ತಿಯೊಬ್ಬರು ಸರ್ಪ್ರೈಸ್ ಉಡುಗೊರೆ ನೋಡಿ ಖುಷಿ ಪಡಿಸುವ ದೃಶ್ಯವು ನೆಟ್ಟಿಗರ ಹೃದಯ ಗೆದ್ದಿದೆ.

ಹುಸೇನ್ ಮನ್ಸೂರಿ (Hussain Mansuri) ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ವೃದ್ಧೆಯೊಬ್ಬರು ಮುಂಬೈ ರಸ್ತೆಯಲ್ಲಿ ಧೂಳು ಹಿಡಿದು ನಿಂತಿರುವ ಕಾರನ್ನು ವಾಶ್ ಮಾಡುತ್ತಿರುವುದನ್ನು ಕಾಣಬಹುದು. ಇದೇ ವೇಳೆ ಅಜ್ಜಿಯ ಕಾಯಕವನ್ನು ಗಮನಿಸಿದ ಹುಸೇನ್ ಮನ್ಸೂರಿ ಎಂಬ ವ್ಯಕ್ತಿ ತಮ್ಮ ಕಾರನ್ನು ಗಲೀಜು ಮಾಡಿಕೊಂಡು ಅಜ್ಜಿಯ ಮುಂದೆ ತಂದು ನಿಂತಿದ್ದಾರೆ. ಅಜ್ಜಿಯ ಬಳಿ ಕಾರು ಸ್ವಚ್ಛಗೊಳಿಸಲು ಹೇಳಿ, ಕೊನೆಗೆ ವೃದ್ಧೆಯ ಕೈಗೆ ಹಣವನ್ನು ಇಟ್ಟಿದ್ದಾರೆ. ಅದಲ್ಲದೇ ವೃದ್ಧೆಗೆ ಸೀರೆ ಸೇರಿದಂತೆ ಉಡುಗೊರೆ ನೀಡಿ ಖುಷಿ ಪಡಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬರು ಉಡುಗೊರೆ ನೀಡಿದ್ದನ್ನು ನೋಡಿ ಅಜ್ಜಿ ಭಾವುಕರಾಗಿದ್ದಾರೆ. ಇದೇ ವೇಳೆ ವ್ಯಕ್ತಿಯೂ ಅಪ್ಪಿಕೊಂಡು ಸಮಾಧಾನ ಮಾಡಿರುವುದನ್ನು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ರೈಲಿನಲ್ಲಿ ಬ್ರೇಸ್ಲೆಟ್‌ ಮಾರಿ ಸ್ವಾಭಿಮಾನದ ಬದುಕು ಕಟ್ಟಿಕೊಂಡ ಅಜ್ಜಿ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಎರಡು ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಕಣ್ಣಲ್ಲಿ ನೀರು ಬಂತು ಎಂದರೆ, ಇನ್ನೊಬ್ಬರು, ಇಳಿ ವಯಸ್ಸಿನಲ್ಲಿ ದುಡಿಯುವವರು ಯುವಕರಿಗೆ ಮಾದರಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಒಳ್ಳೆಯ ಮನಸ್ಸಿನ ವ್ಯಕ್ತಿಗಳು ಕಾಣ ಸಿಗುವುದೇ ಅಪರೂಪ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Mon, 23 February 26

Follow Us
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಸಂಪುಟ ವಿಸ್ತರಣೆ ಬೆನ್ನಲ್ಲೇ ಇದೀಗ ಖಾತೆ ಕ್ಯಾತೆ, ದಿಲ್ಲಿಯತ್ತ ಡಿಕೆಶಿ
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು
ಕಾರ್ಕಳದಲ್ಲಿ ವಯನಾಡು ಮಾದರಿ ದುರಂತದ ಭೀತಿ: ಗುಡ್ಡಕುಸಿತದ ಆತಂಕದಲ್ಲಿ ಜನರು