AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೆ. 14, ಪ್ರೇಮಿಗಳ ದಿನವಲ್ಲ, ಪುಲ್ವಾಮ ಹುತಾತ್ಮರ ದಿನ; ಜಾಗೃತಿಗೆ ಸೈಕಲ್‌ ಯಾತ್ರೆ

ಫೆಬ್ರವರಿ 14, 2019 ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮಡಿದ ಭಾರತೀಯ ಸೈನಿಕರ ಗೌರವಾರ್ಥ ಈ ಯಾತ್ರೆ ಮಾಡುತ್ತಿದ್ದೇನೆ. ಈ ದಿನ ಪ್ರೇಮಿಗಳ ದಿನಾಚರಣೆಯ ಬದಲಾಗಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರತಿಯೊಬ್ಬ ಭಾರತೀಯನೂ ಒಂದು ಕ್ಷಣ ಮೌನಾಚರಣೆ ಮಾಡಬೇಕಾಗಿ ವಿನಂತಿಸುತ್ತೇನೆ ಎಂದು ಕೀರ್ತಿ ನಾಯ್ಡು ಹೇಳಿಕೊಂಡಿದ್ದಾರೆ.

ಫೆ. 14, ಪ್ರೇಮಿಗಳ ದಿನವಲ್ಲ, ಪುಲ್ವಾಮ ಹುತಾತ್ಮರ ದಿನ; ಜಾಗೃತಿಗೆ ಸೈಕಲ್‌ ಯಾತ್ರೆ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on:Feb 06, 2024 | 5:14 PM

Share

ಫೆಬ್ರವರಿ 14ರಂದು ವಿಶ್ವದಾದ್ಯಂದ ಪ್ರೇಮಿಗಳ ದಿನ(Valentine’s Day) ವನ್ನಾಗಿ ಆಚರಿಸಲಾಗುತ್ತದೆ. ಆದರೆ ಪ್ರೇಮಿಗಳ ದಿನದ ಬದಲು ಹುತಾತ್ಮ ಯೋಧರ ಸ್ಮರಣ ದಿನ (Pulwama attack) ವನ್ನಾಗಿ ಆಚರಿಸಬೇಕೆಂದು ಆಗ್ರಹಿಸಿ ಪ್ರತಿ ವರ್ಷ ಸೈಕಲ್ ಯಾತ್ರೆಯನ್ನು ಆಂಧ್ರಪ್ರದೇಶದ ಒಂಗೋಲೆಯ ಯುವಕ ಕೀರ್ತಿನಾಯ್ಡು ಮುಂದುವರಿಸುತ್ತಾ ಬಂದಿದ್ದಾರ. ಈ ವರ್ಷ ಒಂಗೋಲ್ ನಿಂದ ಕನ್ಯಾಕುಮಾರಿಗೆ ಇಂದಿನಿಂದ(ಫೆ.06) ಸೈಕಲ್ ಯಾತ್ರೆ ಆರಂಭಿಸಿದ್ದು, ಫೆಬ್ರವರಿ 14 ರೊಳಗೆ ಕನ್ಯಾಕುಮಾರಿ ತಲುಪಿ ಭಾರತದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ಸೈಕಲ್​​ ಸವಾರಿ ಮಾಡುತ್ತಾನೆ. 14 ಫೆಬ್ರವರಿ 2019 ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮಡಿದ ಭಾರತೀಯ ಸೈನಿಕರ ಗೌರವಾರ್ಥ ಈ ಯಾತ್ರೆ ಮಾಡುತ್ತಿದ್ದೇನೆ ಎಂದು ಕೀರ್ತಿ ನಾಯ್ಡು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ನೋಡಲು ತುಕ್ಕು ಹಿಡಿದಂತಿರುವ ಈ ಬೆಲ್ಟ್​​​ನ ಬೆಲೆ ಕೇಳಿದ್ರೆ ನೀವು​​​ ಶಾಕ್ ಆಗುವುದಂತೂ ಖಂಡಿತಾ!

ಕಳೆದ ವರ್ಷ ಒಂಗೋಲ್ ನಿಂದ ದೆಹಲಿಗೆ ಸೈಕಲ್ ಯಾತ್ರೆ ಕೈಗೊಂಡು ಫೆ.14ರಂದು ಇಂಡಿಯಾ ಗೇಟ್ ಬಳಿ ಮಡಿದ ಭಾರತದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೆ. ಈ ವರ್ಷವೂ ಒಂಗೋಲ್ ನಿಂದ ಕನ್ಯಾಕುಮಾರಿವರೆಗೆ ಸೈಕಲ್ ಯಾತ್ರೆ ಕೈಗೊಂಡಿದ್ದಾರೆ. ಇಂದು ಆರಂಭವಾದ ಈ ಸೈಕಲ್ ಯಾತ್ರೆ ಫೆಬ್ರವರಿ 14 ರೊಳಗೆ ಕನ್ಯಾಕುಮಾರಿ ತಲುಪಲಿದೆ, ಹುತಾತ್ಮ ಭಾರತೀಯ ಯೋಧರಿಗೆ ಸ್ಥಳೀಯರೊಂದಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಆ ದಿನಗಳಲ್ಲಿ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಪ್ರತಿಯೊಬ್ಬ ಭಾರತೀಯನೂ ಒಂದು ಕ್ಷಣ ಮೌನಾಚರಣೆ ಮಾಡಬೇಕಾಗಿ ವಿನಂತಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:06 pm, Tue, 6 February 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!