AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆ, ಹನಿಮೂನ್‌ಗಾಗಿ ಕಂಪನಿಂದ 10.6 ಕೋಟಿ ರೂ. ದೋಚಿದ ವ್ಯಕ್ತಿ

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, 32 ವರ್ಷದ ವ್ಯಕ್ತಿಯೊಬ್ಬ ತನ್ನ ಕಂಪನಿಗೆ 10.6 ಕೋಟಿ ರೂ. ವಂಚಿಸಿದ್ದ ಮತ್ತು ಈ ಹಣದಿಂದ ಮೊದಲು ತನ್ನ ಸಾಲವನ್ನು ತೀರಿಸಿದ್ದಾನೆ. ಬಳಿಕ ಉಳಿದ ಹಣವನ್ನು ತನ್ನ ಮದುವೆ ಮತ್ತು ಹನಿಮೂನ್‌ಗಾಗಿ ಬಳಸಿದ್ದಾನೆ ಎಂದು ತಿಳಿದುಬಂದಿದೆ.

Viral News: ಮದುವೆ, ಹನಿಮೂನ್‌ಗಾಗಿ ಕಂಪನಿಂದ 10.6 ಕೋಟಿ ರೂ. ದೋಚಿದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Jul 06, 2024 | 10:21 AM

Share

ಪ್ರತಿಯೊಬ್ಬರಿಗೂ ತಮ್ಮ ಮದುವೆ  ಐಷಾರಾಮಿ ರೀತಿಯಲ್ಲಿ ನಡೆಯಬೇಕು ಎಂಬ ಕನಸಿರುತ್ತದೆ. ಅದಕ್ಕಾಗಿ ಲಕ್ಷ ಕೋಟಿಯಷ್ಟು ಹಣ ಖರ್ಚು ಮಾಡುವುದುಂಟು. ಇತ್ತೀಚಿಗೆ ಇಂತಹದ್ದೇ ಒಂದು ಕಥೆ ಜನರಲ್ಲಿ ಚರ್ಚೆಯಾಗುತ್ತಿದೆ. ವ್ಯಕ್ತಿಯೊಬ್ಬ ತನ್ನ ಮದುವೆ ಮತ್ತು ಹನಿಮೂನ್‌ಗಾಗಿ ಕಂಪನಿಗೆ 10.6 ಕೋಟಿ ರೂ.ಗಳನ್ನು ವಂಚಿಸಿದ್ದಾನೆ.

ಇಂಗ್ಲಿಷ್ ವೆಬ್‌ಸೈಟ್ ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, 32 ವರ್ಷದ ವ್ಯಕ್ತಿ ತನ್ನ ಕಂಪನಿಗೆ 10.6 ಕೋಟಿ ರೂಪಾಯಿಗಳನ್ನು ವಂಚಿಸಿದ್ದ ಮತ್ತು ಈ ಹಣದಿಂದ ಅವನು ಮೊದಲು ತನ್ನ ಸಾಲವನ್ನು ತೀರಿಸಿದ್ದಾನೆ. ಬಳಿಕ ಉಳಿದ ಹಣವನ್ನು ತನ್ನ ಮದುವೆ ಮತ್ತು ಹನಿಮೂನ್‌ಗಾಗಿ ಬಳಸಿದ್ದಾನೆ. ಈ ಹಣದಲ್ಲಿ 40 ಲಕ್ಷ ರೂಪಾಯಿ ಮೌಲ್ಯದ ಎರಡು ಸಾಲವನ್ನು ತೀರಿಸಿದ್ದಾನೆ ಎಂದು ವರದಿ ತಿಳಿಸಿದೆ.

ಇಷ್ಟೇ ಅಲ್ಲ, ಉಳಿದ ಹಣವನ್ನು ತನ್ನದೆಂದು ಪರಿಗಣಿಸಿ 15 ಲಕ್ಷ ರೂ.ಗಳನ್ನು ಷೇರು ಮತ್ತು ಮ್ಯೂಚುವಲ್ ಫಂಡ್ ಗಳಲ್ಲಿ ಹೂಡಿಕೆ ಮಾಡಿ 15 ಲಕ್ಷ ರೂ. ಅಷ್ಟೇ ಅಲ್ಲ, ಈ ಹಣದಿಂದ 16 ಲಕ್ಷ ರೂಪಾಯಿ ಖರ್ಚು ಮಾಡಿ ಆ ವ್ಯಕ್ತಿ ಮದುವೆ ಮಾಡಿಕೊಂಡಿದ್ದಾನೆ. ಇದಾದ ಬಳಿಕ ಹನಿಮೂನ್ ಗೆ 3.5 ಲಕ್ಷ ರೂ. ಖರ್ಚು ಮಾಡಿದ್ದಾನೆ.

ಇದನ್ನೂ ಓದಿ: ವಿಶ್ವಕಪ್​​​ ಕಲಿಗಳನ್ನು ನೋಡಲು ಮರವೇರಿ ಕುಳಿತ ಕ್ರಿಕೆಟ್‌ ಪ್ರೇಮಿ; ಫೋಟೋ ವೈರಲ್‌

ಈ ವಂಚನೆ ಪ್ರಕರಣದಲ್ಲಿ ತನ್ನ ಯೋಜನೆಯನ್ನು ಕಾರ್ಯಗತಗೊಳಿಸಲು, ತನ್ನ ಸಹೋದರಿ, ಸ್ನೇಹಿತ ಮತ್ತು ಹೆಂಡತಿಯ ಖಾತೆಗಳನ್ನು ಬಳಸಿದ್ದ ಎಂದು ತಿಳಿದುಬಂದಿದೆ. ಏಪ್ರಿಲ್ ತಿಂಗಳಲ್ಲಿ ಆತನನ್ನು ಬಂಧಿಸಲಾಗಿದ್ದು,ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಅಲ್ಲಿ ತನ್ನ ದುರಾಸೆಯಿಂದ ಕಂಪನಿಗೆ ನಷ್ಟ ಉಂಟು ಮಾಡಿ ಕಂಪನಿಯಿಂದ ಇಷ್ಟು ದೊಡ್ಡ ಕಳ್ಳತನ ಮಾಡಿದ್ದೇನೆ ಎಂದು ಬಹಿರಂಗಪಡಿಸಿದ್ದಾನೆ. ಸದ್ಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಚಾರಣೆ ಆರಂಭಿಸಲಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:00 am, Sat, 6 July 24

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು