AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕತ್ತೆಯನ್ನು ಅಪ್ಪಿಕೊಂಡು ಲಾಲಿ ಹಾಡಿ ಮಲಗಿಸಿದ ವ್ಯಕ್ತಿ; ಹೃದಯಸ್ಪರ್ಶಿ ಈ ವಿಡಿಯೋವನ್ನು ನೋಡಿದ್ದೀರಾ?

ಪುಟ್ಟ ಮಗುವನ್ನು ಮಲಗಿಸಿದಂತೆಯೇ ಲಾಲಿ ಹಾಡುತ್ತಾ ಕತ್ತೆಯನ್ನು ಮಲಗಿಸುತ್ತಿದ್ದಾನೆ. ಹಾಡು ಕೇಳಿಸಿಕೊಳ್ಳುತ್ತಾ ಕತ್ತೆ ಮಲಗುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋ ನೋಡಿ..

Viral Video: ಕತ್ತೆಯನ್ನು ಅಪ್ಪಿಕೊಂಡು ಲಾಲಿ ಹಾಡಿ ಮಲಗಿಸಿದ ವ್ಯಕ್ತಿ; ಹೃದಯಸ್ಪರ್ಶಿ ಈ ವಿಡಿಯೋವನ್ನು ನೋಡಿದ್ದೀರಾ?
ಹಾಡು ಹೇಳುತ್ತಾ ಕತ್ತೆಯನ್ನು ಮಲಗಿಸುತ್ತಿರುವ ವ್ಯಕ್ತಿ
TV9 Web
| Edited By: |

Updated on: Oct 04, 2021 | 11:02 AM

Share

ಸಾಮಾನ್ಯವಾಗಿ ಪ್ರಾಣಿಗಳು ಮನುಷ್ಯರನ್ನು ಹಚ್ಚಿಕೊಂಡಷ್ಟು ಮನುಷ್ಯರೇ ಮನುಷ್ಯರನ್ನು ಹಚ್ಚಿಕೊಳ್ಳುವುದಿಲ್ಲ. ಕೆಲವು ಮೂಕ ಪ್ರಾಣಿಗಳೊಡನೆ ಸ್ನೇಹ ಗಟ್ಟಿಯಾಗಿರುತ್ತವೆ. ಮೂಕ ಪ್ರಾಣಿಗಳಾದರೂ ಸಹ ನಮ್ಮೆಲ್ಲಾ ನೋವು, ಕಷ್ಟಗಳನ್ನು ಅರ್ಥೈಸಿಕೊಂಡು ಸಂತೈಸುತ್ತವೆ. ನಾವು ಎಷ್ಟು ಪ್ರೀತಿ ನೀಡುತ್ತೇವೆಯೋ ಅಷ್ಟೇ ಪ್ರೀತಿಯನ್ನು ಪ್ರಾಣಿಗಳೂ ಸಹ ನಮಗೆ ನೀಡುತ್ತವೆ. ಪ್ರಾಣಿ ಮಾನವರ ನಡುವಿನ ಹೃದಯಸ್ಪರ್ಶಿ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಲ್ಲರಿಗೂ ಇಷ್ಟವಾಗುವಂತಹ ವಿಡಿಯೋವಿದು.

ವ್ಯಕ್ತಿ ಕತ್ತೆಯನ್ನು ಎತ್ತಿಕೊಂಡಿದ್ದಾನೆ. ಆತನ ಭುಜದ ಮೇಲೆ ಕತ್ತೆ ಮಲಗಿರುವುದನ್ನು ನೋಡಬಹುದು. ಪುಟ್ಟ ಮಗುವನ್ನು ಮಲಗಿಸಿದಂತೆಯೇ ಲಾಲಿ ಹಾಡುತ್ತಾ ಕತ್ತೆಯನ್ನು ಮಲಗಿಸುತ್ತಿದ್ದಾನೆ. ಹಾಡು ಕೇಳಿಸಿಕೊಳ್ಳುತ್ತಾ ಕತ್ತೆ ಮಲಗುತ್ತಿರುವ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನೆಟ್ಟಿಗರು ವಿಡಿಯೋವನ್ನು ಇಷ್ಟಪಟ್ಟಿದ್ದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಾಗಿನಿಂದ ಸುಮಾರು 41,000 ಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಅದ್ಭುತ ವಿಡಿಯೋ ಎಂದು ಓರ್ವರು ಅಭಿಪ್ರಾಯ ತಿಳಿಸಿದ್ದಾರೆ. ಹಾಡನ್ನು ಕೇಳುತ್ತಿರುವ ಕತ್ತೆ ಆನಂದಿಸುತ್ತಿದೆ ಸುಂದರ ದೃಶ್ಯವಿದು ಎಂದು ಮತ್ತೋರ್ವರು ತಿಳಿಸಿದ್ದಾರೆ.

View this post on Instagram

A post shared by Mr Donkers (@mrdonkers)

ಇದನ್ನೂ ಓದಿ:

Viral Video: ಕೊಳದ ದಡದಲ್ಲಿ ಅಡ್ಡಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದ ಸಿಂಹ; ಆಮೇಲೇನಾಯ್ತು? ವಿಡಿಯೊ ನೋಡಿ

Viral Video: ನೀರು ಚೆಲ್ಲಿದ್ದ ನೆಲದ ಮೇಲೆ ವ್ಯಕ್ತಿಯ ಸ್ಟಂಟ್​; ಆಮೇಲೇನಾಯ್ತು? ವಿಡಿಯೋ ನೋಡಿ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್