Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು

ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ. 

ಪಲ್ಟಿ ಹೊಡೆದು ಬಂದು ಶಾರ್ಟ್​ ಪ್ಯಾಂಟ್​ ಧರಿಸಿದ ಯುವಕ; ಅಚ್ಚರಿ ವ್ಯಕ್ತಪಡಿಸಿದ ನೆಟ್ಟಿಗರು
ವೀಡಿಯೋದಿಂದ ಸೆರೆಹಿಡಿದ ಚಿತ್ರ
Follow us
TV9 Web
| Updated By: Pavitra Bhat Jigalemane

Updated on: Dec 30, 2021 | 10:27 AM

ವಿವಿಧ ರೀತಿಯ ಪ್ರತಿಭೆಯ ಪ್ರದರ್ಶನಕ್ಕೆ ಸಾಮಾಜಿಕ ಜಾಲತಾಣ ಸದಾ ತಾಣವಾಗಿರುತ್ತದೆ. ಹಲವು ವೀಡಿಯೋಗಳು ಅಗಾಗ ನೆಟ್ಟಿಗರನ್ನು ಅಚ್ಚರಿಗೊಳಿಸುತ್ತವೆ. ಹಲವು ರೀತಿಯ ಸಾಹಸಗಳ ವೀಡಿಯೋಗಳು ಆಗಾಗ ಸೆಳೆಯುತ್ತಿರುತ್ತವೆ. ಇದೀಗ ಮೂವರು ಹುಡುಗರ ಸಾಹಸದ ಒಂದು ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.  ವೀಡಿಯೋದಲ್ಲಿ ಯುವಕನೋರ್ವ ಪಲ್ಟಿ ಹೊಡೆದು ಬಂದು ಇನ್ನಿಬ್ಬರು ಯುವಕರು ಹಿಡಿದ ಶಾರ್ಟ್ ಪ್ಯಾಂಟ್​ನೊಳಗೆ ಕಾಲನ್ನು ಸುಲಭವಾಗಿ ಇಳಿಸುತ್ತಾನೆ. ಇದನ್ನು ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

ವೀಡಿಯೋದಲ್ಲಿ ಮೊದಲು ಇಬ್ಬರು ಯುವಕರು ಎರಡೂ ಬದಿಯಲ್ಲಿ  ಶಾರ್ಟ್ ಪ್ಯಾಂಟ್ ಹಿಡಿದು ನಿಂತುಕೊಂಡಿರುವುದನ್ನು ನೋಡಬಹುದು. ನಂತರ ದೂರದಿಂದ ಓಡಿಬಂದ ಯುವಕ  ನೆಗೆದು ಪಲ್ಟಿ ಹೊಡೆದು ಪ್ಯಾಂಟ್​ ಒಳಗೆ ಕಾಲನ್ನು ಇಳಿಸುತ್ತಾನೆ. ಈ ವೀಡಿಯೋವನ್ನು ಬಲವಂತ್​ ಸಿಂಗ್​ ಎನ್ನುವವರ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಡಿಸೆಂಬರ್​ 16ರಂದು ಹಂಚಿಕೊಂಡ ವೀಡಿಯೋ 14 ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದಿದೆ.  ಹಲವರು ವೀಡಿಯೋ ನೋಡಿ ತಮಾಷೆಯಾಗಿ ಕಾಮೆಂಟ್​ ಮಾಡಿದ್ದಾರೆ.

View this post on Instagram

A post shared by balwant singh (@balwant5083)

ಈ ಹಿಂದೆ ಆಂದ್ರ ಪ್ರದೇಶದ ನೆಲ್ಲೋರೆ ಎನ್ನುವ ಗ್ರಾಮದಲ್ಲಿ ಇಬ್ಬರು ಯುವಕರು ತೆಲುಗಿನ  ವಕೀಲ್​ ಸಾಬ್​ ಚಿತ್ರದ ಸಾಹಸದ ಸೀನ್​ ಅನ್ನು ರೀ ಕ್ರಿಯೇಟ್​ ಮಾಡಿ ನೆಟ್ಟಿಗರ ಗಮನ ಸೆಳೆದಿದ್ದರು.  ಇನ್ನೊಂದು ವೀಡಿಯೋದಲ್ಲಿ ತೆಲಂಗಾಣದ ದುರ್ಗಂ ಚೆರುವ ಎನ್ನುವ  ಸೇತುವೆಯ ಬಳಿ ಯುವಕನೋರ್ವ  ರಸ್ತೆ ಮಧ್ಯೆ ಗಾಡಿ ನಿಲ್ಲಿಸಿ ಡ್ಯಾನ್ಸ್​ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು.  ಸೈದರಾಬಾದ್​ ಪೊಲೀಸರು ಆತನನ್ನು ಹಿಡಿದು ಬಂಧಿಸಿ ಆತನ ಡ್ಯಾನ್ಸ್​ನ ವೀಡಿಯೋ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಇದನ್ನೂ ಓದಿ:

Viral Video: ಕೊರೋನಾ ವ್ಯಾಕ್ಸಿನ್​ಗೆ ಹೆದರಿ ಮರವೇರಿ ಕುಳಿತ ವ್ಯಕ್ತಿ: ವೀಡಿಯೋ ವೈರಲ್

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ
ರಾಮಲಿಂಗಾರೆಡ್ಡಿ ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಪ್ರತಿಕ್ರಿಯೆ ನೀಡುತ್ತಾರೆ