Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

45 ವರ್ಷವಾದರೂ ಇನ್ನೂ ಯಾಕೆ ಒಂಟಿಯಾಗಿದ್ದೀರಿ? ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ವೃದ್ದನನ್ನು ವ್ಯಕ್ತಿಯೊರ್ವ ಮರದ ದಿಮ್ಮಿಯಿಂದ ಹೊಡೆದು ಕೊಂದಿದ್ದಾನೆ. ಇನ್ನೂ ಮದುವೆಯಾಗದೇ ಒಂಟಿ ಜೀವನ ನಡೆಸುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ
Follow us
ಅಕ್ಷತಾ ವರ್ಕಾಡಿ
|

Updated on:Aug 04, 2024 | 6:17 PM

ಇಂಡೋನೇಷ್ಯಾ: 45 ವರ್ಷವಾದರೂ ಇನ್ನೂ ಯಾಕೆ ಒಂಟಿಯಾಗಿದ್ದೀರಿ? ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ವೃದ್ದನನ್ನು ಕೊಂದಿರುವ ಘಟನೆ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ ನಡೆದಿದೆ. ಕೋಪಗೊಂಡ ಅವಿವಾಹಿತ ವ್ಯಕ್ತಿ 60 ವರ್ಷದ ವೃದ್ಧನ ಮನೆಯೊಳಗೆ ನುಗ್ಗಿ ಮರದ ದಿಮ್ಮಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಜುಲೈ 29 ರಂದು ನಡೆದ ಘಟನೆ ನಡೆದಿದ್ದು, ಕೊಲೆಯಾದ ವೃದ್ಧ ಅಸ್ಗಿಮ್ ಇರಿಯಾಂಟೊ ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಸಹಾಯಕ ಪೊಲೀಸ್ ಕಮಿಷನರ್ (ಎಕೆಪಿ) ಮಾರಿಯಾ ಮಾರ್ಪಾಂಗ್ ಅವರಿಗೆ ನೀಡಿದ ಹೇಳಿಕೆಯ ಪ್ರಕಾರ, ಅವಿವಾಹಿತ ವ್ಯಕ್ತಿ ಮನೆಯ ಬಾಗಿಲು ಮುರಿದು ಬಂದು ತನ್ನ ಪತಿ ಅಸ್ಗಿಮ್ ಮೇಲೆ ಮರದ ದಿಮ್ಮಿಯಿಂದ ಹೊಡೆದು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

45 ವರ್ಷ ವಯಸ್ಸಾದರೂ ಒಂಟಿ ಜೀವನ ನಡೆಸುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ. ಇದಲ್ಲದೇ ಪಕ್ಕದ ಮನೆಯ ವೃದ್ಧ ಪದೇ ಪದೇ ಮದುವೆ ಬಗ್ಗೆ ಕೇಳಿದ್ದರಿಂದ ಮತ್ತಷ್ಟು ನೋವು ಅನುಭವಿಸಿದ್ದ. ಕೊನೆಗೆ ಕೋಪ ತಡೆಯಲಾರದೇ ವೃದ್ದನನ್ನು ಕೊಂದಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Sun, 4 August 24

ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್​ ಜೋಶಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್​ ಗುಂಡೇಗೆ ಬಲಿ: ಕಮಿಷನರ್​ಗೆ ಜೈಕಾರ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಐಪಿಎಲ್​ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
33 ಎಸೆತಗಳಲ್ಲಿ 65 ರನ್​ ಸಿಡಿಸಿದ ಫಿಲ್ ಸಾಲ್ಟ್
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ