AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ

45 ವರ್ಷವಾದರೂ ಇನ್ನೂ ಯಾಕೆ ಒಂಟಿಯಾಗಿದ್ದೀರಿ? ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ವೃದ್ದನನ್ನು ವ್ಯಕ್ತಿಯೊರ್ವ ಮರದ ದಿಮ್ಮಿಯಿಂದ ಹೊಡೆದು ಕೊಂದಿದ್ದಾನೆ. ಇನ್ನೂ ಮದುವೆಯಾಗದೇ ಒಂಟಿ ಜೀವನ ನಡೆಸುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ ಎಂದು ತನಿಖೆಯ ವೇಳೆ ತಿಳಿದುಬಂದಿದೆ.

ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ಪಕ್ಕದ ಮನೆಯ ವೃದ್ದನನ್ನೇ ಕೊಂದ ವ್ಯಕ್ತಿ
ಅಕ್ಷತಾ ವರ್ಕಾಡಿ
|

Updated on:Aug 04, 2024 | 6:17 PM

Share

ಇಂಡೋನೇಷ್ಯಾ: 45 ವರ್ಷವಾದರೂ ಇನ್ನೂ ಯಾಕೆ ಒಂಟಿಯಾಗಿದ್ದೀರಿ? ಯಾವಾಗ ಮದುವೆ ಎಂದು ಪದೇ ಪದೇ ಕೇಳುತ್ತಿದ್ದ ವೃದ್ದನನ್ನು ಕೊಂದಿರುವ ಘಟನೆ ಇಂಡೋನೇಷ್ಯಾದ ಉತ್ತರ ಸುಮಾತ್ರಾದಲ್ಲಿ ನಡೆದಿದೆ. ಕೋಪಗೊಂಡ ಅವಿವಾಹಿತ ವ್ಯಕ್ತಿ 60 ವರ್ಷದ ವೃದ್ಧನ ಮನೆಯೊಳಗೆ ನುಗ್ಗಿ ಮರದ ದಿಮ್ಮಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಜುಲೈ 29 ರಂದು ನಡೆದ ಘಟನೆ ನಡೆದಿದ್ದು, ಕೊಲೆಯಾದ ವೃದ್ಧ ಅಸ್ಗಿಮ್ ಇರಿಯಾಂಟೊ ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಸಹಾಯಕ ಪೊಲೀಸ್ ಕಮಿಷನರ್ (ಎಕೆಪಿ) ಮಾರಿಯಾ ಮಾರ್ಪಾಂಗ್ ಅವರಿಗೆ ನೀಡಿದ ಹೇಳಿಕೆಯ ಪ್ರಕಾರ, ಅವಿವಾಹಿತ ವ್ಯಕ್ತಿ ಮನೆಯ ಬಾಗಿಲು ಮುರಿದು ಬಂದು ತನ್ನ ಪತಿ ಅಸ್ಗಿಮ್ ಮೇಲೆ ಮರದ ದಿಮ್ಮಿಯಿಂದ ಹೊಡೆದು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

45 ವರ್ಷ ವಯಸ್ಸಾದರೂ ಒಂಟಿ ಜೀವನ ನಡೆಸುತ್ತಿದ್ದ ಈತ ಮಾನಸಿಕವಾಗಿ ನೊಂದಿದ್ದ. ಇದಲ್ಲದೇ ಪಕ್ಕದ ಮನೆಯ ವೃದ್ಧ ಪದೇ ಪದೇ ಮದುವೆ ಬಗ್ಗೆ ಕೇಳಿದ್ದರಿಂದ ಮತ್ತಷ್ಟು ನೋವು ಅನುಭವಿಸಿದ್ದ. ಕೊನೆಗೆ ಕೋಪ ತಡೆಯಲಾರದೇ ವೃದ್ದನನ್ನು ಕೊಂದಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:42 pm, Sun, 4 August 24

Follow Us
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ಅಪ್ಪು ಪುತ್ಥಳಿ ಅನಾವರಣ: ಅಶ್ವಿನಿ ಪುನೀತ್​​ರಾಜ್​ಕುಮಾರ್ ಮಾತು
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ವಾಹನ ಖರೀದಿದಾರರಿಗೆ ಶಾಕ್​! ಕಾರು, ಬೈಕ್ ಬೆಲೆಯಲ್ಲಿ ಏರಿಕೆ ಸಾಧ್ಯತೆ
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಪ್ರವಾಹದಿಂದ ಬಿಹಾರದ ವಿಕ್ರಮಶಿಲಾ ಸೇತುವೆಯ ಕಂಬಕ್ಕೆ ಹಾನಿ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!