AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವುದನ್ನು ಫಾಕ್ಸ್ ವರದಿ ಮಾಡಿದೆ.

ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:May 07, 2024 | 4:37 PM

Share

ಅಮೆರಿಕಾ: ಐಸಿಯುನಲ್ಲಿ ಮಲಗಿರುವ ತನ್ನ ಪತ್ನಿಯನ್ನೇ ಪತಿಯೊಬ್ಬ ಕತ್ತು ಹಿಸುಕಿ ಕೊಂದಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಆರೋಪಿ ರೋನಿ ವಿಗ್ಸ್ ಅನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಆಸ್ಪತ್ರೆಯ ಬಿಲ್​​ ಪಾವತಿಸಲು ದುಡ್ಡಿಲ್ಲದ ಕಾರಣ ಪತ್ನಿಯನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಿಸೌರಿಯ ಇಂಡಿಪೆಂಡೆನ್ಸ್‌ನಲ್ಲಿರುವ ಸೆಂಟರ್‌ಪಾಯಿಂಟ್ ಮೆಡಿಕಲ್ ಸೆಂಟರ್‌ನಲ್ಲಿ ಶುಕ್ರವಾರ ರಾತ್ರಿ 11:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಐಸಿಯುನಲ್ಲಿದ್ದ ರೋಗಿಯನ್ನು ಕೊಲ್ಲಲು ಪ್ರಯತ್ನಿಸಿರುವುದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿಗಳು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಅದಾಗಲೇ ಮಹಿಳೆಯ ಪ್ರಾಣ ಪಕ್ಷಿ ಹಾರಿ ಹೋಗಿದ್ದು, ಆಸ್ಪತ್ರೆಯ ಸಿಬ್ಬಂದಿ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿ ಮೃತ ಮಹಿಳೆಯ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವುದಾಗಿ ಫಾಕ್ಸ್ ವರದಿ ಮಾಡಿದೆ. ವಿಗ್ಸ್ ಈ ಹಿಂದೆ ಹಿಂದಿನ ಆಸ್ಪತ್ರೆಯಲ್ಲೂ ಅವಳನ್ನು ಎರಡು ಬಾರಿ ಕೊಲ್ಲಲು ಪ್ರಯತ್ನಿಸಿದ್ದ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:37 pm, Tue, 7 May 24

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?