AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವುದನ್ನು ಫಾಕ್ಸ್ ವರದಿ ಮಾಡಿದೆ.

ಆಸ್ಪತ್ರೆಯ ಬಿಲ್​​ ಪಾವತಿಸಲಾಗದೇ ಪತ್ನಿಯನ್ನೇ ಕೊಂದ ಪತಿ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:May 07, 2024 | 4:37 PM

Share

ಅಮೆರಿಕಾ: ಐಸಿಯುನಲ್ಲಿ ಮಲಗಿರುವ ತನ್ನ ಪತ್ನಿಯನ್ನೇ ಪತಿಯೊಬ್ಬ ಕತ್ತು ಹಿಸುಕಿ ಕೊಂದಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಆರೋಪಿ ರೋನಿ ವಿಗ್ಸ್ ಅನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಆಸ್ಪತ್ರೆಯ ಬಿಲ್​​ ಪಾವತಿಸಲು ದುಡ್ಡಿಲ್ಲದ ಕಾರಣ ಪತ್ನಿಯನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮಿಸೌರಿಯ ಇಂಡಿಪೆಂಡೆನ್ಸ್‌ನಲ್ಲಿರುವ ಸೆಂಟರ್‌ಪಾಯಿಂಟ್ ಮೆಡಿಕಲ್ ಸೆಂಟರ್‌ನಲ್ಲಿ ಶುಕ್ರವಾರ ರಾತ್ರಿ 11:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಐಸಿಯುನಲ್ಲಿದ್ದ ರೋಗಿಯನ್ನು ಕೊಲ್ಲಲು ಪ್ರಯತ್ನಿಸಿರುವುದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿಗಳು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಅದಾಗಲೇ ಮಹಿಳೆಯ ಪ್ರಾಣ ಪಕ್ಷಿ ಹಾರಿ ಹೋಗಿದ್ದು, ಆಸ್ಪತ್ರೆಯ ಸಿಬ್ಬಂದಿ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿ ಮೃತ ಮಹಿಳೆಯ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ವಿಧವೆಯರ ಗ್ರಾಮ;ಮದುವೆಯಾದ ಕೆಲವೇ ದಿನಗಳಲ್ಲಿ ಇಲ್ಲಿ ಪುರುಷರು ಸಾಯುತ್ತಾರೆ!

ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ ದಿನದಿಂದ ಆರ್ಥಿಕವಾಗಿ ಕಷ್ಟದಲ್ಲಿದ್ದೇನೆ ಹಾಗೂ ಮಾನಸಿಕವಾಗಿ ನೊಂದಿದ್ದೇನೆ. ಈ ಕಾರಣದಿಂದಲೇ ತನ್ನ ಪತ್ನಿಯನ್ನು ಕೊಲ್ಲಲು ನಿರ್ಧರಿಸಿದೆ ಎಂದು ಪತಿ ಪೊಲೀಸರ ಮುಂದೆ ಒಪ್ಪಿಕೊಂಡಿರುವುದಾಗಿ ಫಾಕ್ಸ್ ವರದಿ ಮಾಡಿದೆ. ವಿಗ್ಸ್ ಈ ಹಿಂದೆ ಹಿಂದಿನ ಆಸ್ಪತ್ರೆಯಲ್ಲೂ ಅವಳನ್ನು ಎರಡು ಬಾರಿ ಕೊಲ್ಲಲು ಪ್ರಯತ್ನಿಸಿದ್ದ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:37 pm, Tue, 7 May 24

Follow Us
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ