AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಏನ್‌ ಧೈರ್ಯ ನೋಡಿ… ಹೆಗಲ ಮೇಲೆ ದೈತ್ಯ ಅನಕೊಂಡವನ್ನು ಹೊತ್ತ ಎಂಟೆದೆ ಭಂಟ

ಪುಟ್ಟ ಹಾವುಗಳನ್ನು ನೋಡಿದ್ರೂ ಸಾಕು ಹೆಚ್ಚಿನವರು ಎದ್ವೋ ಬಿದ್ವೋ ಅಂತ ಓಡಿ ಹೋಗ್ತಾರೆ. ಅದ್ರಲ್ಲೂ ದೈತ್ಯ ಹಾವುಗಳು ಕಣ್ಣಿಗೆ ಬಿದ್ದರಂತೂ ಎದೆ ಬಡಿತವೇ ನಿಂತಂತಾಗುತ್ತದೆ. ಆದ್ರೆ ಇಲ್ಲೊಬ್ಬ ಎಂಟೆದೆ ಭಂಟ ಯಾವುದೇ ಭಯವಿಲ್ಲದೆ ಸಲೀಸಾಗಿ 20 ಅಡಿ ಉದ್ದದ ಹಸಿರು ಅನಕೊಂಡವನ್ನು ಹೆಗಲ ಮೇಲೆ ಹೊತ್ತು ಪೋಸ್‌ ಕೊಟ್ಟಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಈತನ ಈ ಭಂಡ ಧೈರ್ಯವನ್ನು ಕಂಡು ನೋಡುಗರು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

Viral: ಏನ್‌ ಧೈರ್ಯ ನೋಡಿ… ಹೆಗಲ ಮೇಲೆ ದೈತ್ಯ ಅನಕೊಂಡವನ್ನು ಹೊತ್ತ ಎಂಟೆದೆ ಭಂಟ
ವೈರಲ್​​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Nov 15, 2024 | 11:12 AM

Share

ದೈತ್ಯಾಕಾರದ ಹೆಬ್ಬಾವುಗಳು, ಅನಕೊಂಡಗಳು ಇತರೆ ಪ್ರಾಣಿಗಳು ಮಾತ್ರವಲ್ಲದೆ ಮನುಷ್ಯನನ್ನು ಕೂಡಾ ಜೀವಂತವಾಗಿ ನುಂಗಿ ಬಿಡುತ್ತವೆ. ಅದರಲ್ಲೂ ಹೆಚ್ಚಾಗಿ ದಕ್ಷಿಣ ಅಮೆರಿಕದಲ್ಲಿ ಕಂಡು ಬರುವ ಅನಕೊಂಡ ಹಾವುಗಳು ತುಂಬಾನೇ ಅಪಾಯಕಾರಿ. ಹೌದು ಈ ಹಾವುಗಳು ಕ್ಷಣ ಮಾತ್ರದಲ್ಲಿ ಎಂತಹದ್ದೇ ದೊಡ್ಡ ಜೀವಿಯನ್ನು ಸಹ ನುಂಗಬಲ್ಲವು. ಇದೇ ಕಾರಣಕ್ಕೆ ಈ ದೈತ್ಯ ಹಾವುಗಳನ್ನು ಕಂಡರೆ ಬಹುತೇಕ ಎಲ್ಲರೂ ಭಯ ಬೀಳುತ್ತಾರೆ. ಆದ್ರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ನನಗೆ ಯಾವುದೇ ಭಯವಿಲ್ಲ ಎನ್ನುತ್ತಾ ತನ್ನ ಭಂಡ ಧೈರ್ಯದಿಂದ 20 ಅಡಿ ಉದ್ದದ ದೈತ್ಯ ಹಸಿರು ಅನಕೊಂಡವನ್ನು ಹೆಗಲ ಮೇಲೆ ಹೊತ್ತು ಪೋಸ್‌ ಕೊಟ್ಟಿದ್ದಾನೆ. ಈ ವಿಡಿಯೋ ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಈತನ ಈ ಭಂಡ ಧೈರ್ಯವನ್ನು ಕಂಡು ನೋಡುಗರು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

ಪ್ರಾಣಿ ಪ್ರಿಯ ಮೈಕ್‌ ಹೋಲ್‌ಸ್ಟನ್‌ ಅವರು ಯಾವುದೇ ಭಯವಿಲ್ಲದೆ 20 ಅಡಿ ಉದ್ದವಿರುವ ಜಗತ್ತಿನ ದೈತ್ಯ ಹಸಿರು ಅನಕೊಂಡವನ್ನು ತನ್ನ ಹೆಗಲ ಮೇಲೆ ಹೊತ್ತು ಕ್ಯಾಮೆರಾಗೆ ಪೋಸ್‌ ಕೊಟ್ಟಿದ್ದಾರೆ. ಈ ಕುರಿತ ವಿಡಿಯೋವನ್ನು ಹೋಲ್‌ಸ್ಟನ್‌ therealtarzann ಹೆಸರಿನ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಹೋಲ್‌ಸ್ಟನ್‌ ಜಗತ್ತಿನ ದೈತ್ಯ ಹಾಗೂ ಭರವಾದ 20 ಅಡಿ ಉದ್ದವಿರುವ ಹಸಿರು ಹೆಬ್ಬಾವನ್ನು ತನ್ನ ಹೆಗಲ ಮೇಲೆ ಹೊತ್ತಿರುವ ಶಾಕಿಂಗ್‌ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ : ಜಮ್ಮು-ಕಾಶ್ಮೀರ ವಿಧಾನಸಭೆಯಲ್ಲಿ ಭಾರತ್ ಮಾತಾ ಕೀ ಜೈ ಹೇಳಿದ್ದಕ್ಕೆ ಬಿಜೆಪಿ ಶಾಸಕರನ್ನು ಹೊರಹಾಕಿದ್ದು ನಿಜವೇ?

ನವೆಂಬರ್‌ 4 ರಂದು ಹಂಚಿಕೊಳ್ಳಲಾದ ಈ ವಿಡಿಯೋ 2.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಅಬ್ಬಬ್ಬಾ ಈ ಹಾವು ತುಂಬಾನೇ ಭಯವಿರುವಂತೆ ಕಾಣುತ್ತಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆ ಹಾವು ನಿಮ್ಮ ಮೇಲೆ ದಾಳಿ ನಡೆಸದೆ ಕೂಲ್‌ ಆಗಿ ಇರುವುದನ್ನು ಕಂಡು ನನಗೆ ಆಶ್ಚರ್ಯವಾಯಿತುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ