AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿದ್ದ ವ್ಯಕ್ತಿ ಎಸ್ಕೇಪ್​! ಬೆಡ್​ಶೀಟ್​ನಿಂದ ಹಗ್ಗ ತಯಾರಿಸಿ 4ನೇ ಮಹಡಿಯಿಂದ ಇಳಿದು ಪರಾರಿ

ರೂಮಿನಲ್ಲಿದ್ದ ಬೆಡ್​ಶೀಟ್​ಗಳನ್ನೆಲ್ಲಾ ಜೋಡಿಸಿ, ಬಿಗಿಯಾದ ಗಂಟು ಕಟ್ಟಿ ಹಗ್ಗ ತಯಾರಿಸಿ ಕಿಟಕಿಯಿಂದ ಇಳಿದಿದ್ದಾನೆ. ಆತನಿದ್ದ 4ನೇ ಮಹಡಿಯಿಂದ ಕೆಳಗಿಳಿದಿದ್ದಾನೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

Viral News: ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿದ್ದ ವ್ಯಕ್ತಿ ಎಸ್ಕೇಪ್​! ಬೆಡ್​ಶೀಟ್​ನಿಂದ ಹಗ್ಗ ತಯಾರಿಸಿ 4ನೇ ಮಹಡಿಯಿಂದ ಇಳಿದು ಪರಾರಿ
ಹೋಟೆಲ್​ನಲ್ಲಿ ಕ್ವಾರಂಟೈನ್​ ಆಗಿದ್ದ ವ್ಯಕ್ತಿ ಎಸ್ಕೇಪ್​!
TV9 Web
| Edited By: |

Updated on:Jul 22, 2021 | 9:58 AM

Share

ಕೊವಿಡ್​19 ಸಾಂಕ್ರಾಮಿಕ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಸ್ಬೇನ್​ನಿಂದ ಆಸ್ಟ್ರೇಲಿಯಾಕ್ಕೆ ಬಂದಿಳಿದ ಪ್ರಯಾಣಿಕರಿಗೆ ಹೋಟೆಲ್​ನಲ್ಲಿ ಕ್ವಾರಂಟೈನ್​ ವ್ಯವಸ್ಥೆ ಮಾಡಲಾಗಿತ್ತು. ಆದರೆ ಓರ್ವ ವ್ಯಕ್ತಿ ಹೋಟೆಲ್​ನಿಂದ ತಪ್ಪಿಸಿಕೊಂಡಿದ್ದು ಇದೀಗ ಪೊಲೀಸರು ಆತನ್ನು ಬಂಧಿಸಿದ್ದಾರೆ. ವ್ಯವಸ್ಥೆ ಮಾಡಲಾಗಿದ್ದ ಹೋಟೆಲ್​ ರೂಮಿನ ಕಿಟಕಿಯಿಂದ ವ್ಯಕ್ತಿ ಪರಾರಿಯಾಗಿದ್ದಾನೆ. ರೂಮಿನಲ್ಲಿದ್ದ ಬೆಡ್​ಶೀಟ್​ಗಳನ್ನೆಲ್ಲಾ ಜೋಡಿಸಿ, ಬಿಗಿಯಾದ ಗಂಟು ಕಟ್ಟಿ ಹಗ್ಗ ತಯಾರಿಸಿ ಕಿಟಕಿಯಿಂದ ಇಳಿದಿದ್ದಾನೆ. ಆತನಿದ್ದ 4ನೇ ಮಹಡಿಯಿಂದ ಕೆಳಗಿಳಿದಿದ್ದಾನೆ ಎಂಬುದು ವರದಿಗಳಿಂದ ತಿಳಿದು ಬಂದಿದೆ.

ಆತನು ಕೊವಿಡ್​ 19 ಪರೀಕ್ಷೆಗೆ ಒಳಗಾಗಿದ್ದು ನೆಗೆಟಿವ್​ ರಿಪೋರ್ಟ್​ ಬಂದಿದೆ. ಬಳಿಕ ಪೊಲೀಸರು ತನಿಖೆ ನಡೆಸಿ ಆತನನ್ನು ಬಂಧಿಸಿದ್ದಾರೆ. ಫೇಸ್​ಬುಕ್​ನಲ್ಲಿ ಫೋಟೋಗಳನ್ನು ಹಂಚಿಕೊಳ್ಳಲಾಗಿದ್ದು, ಕ್ವಾರಂಟೈನ್​ನಲ್ಲಿದ್ದ 39 ವರ್ಷದ ವ್ಯಕ್ತಿ ತಪ್ಪಿಸಿಕೊಂಡಿದ್ದು, ಬಳಿಕ ಆತನ್ನು ಬಂಧಿಸಲಾಗಿದೆ. ಇದೇ ತಿಂಗಳು 19ನೇ ತಾರೀಕು ಸೋಮವಾರ ಸಂಜೆ 4.15ರ ವೇಳೆಗೆ ವ್ಯಕ್ತಿ ಬ್ರಿಸ್ಬೇನ್​ನಿಂದ ವಿಮಾನದಲ್ಲಿ ಬಂದಿಳಿದಿದ್ದ. ಕ್ವಾರಂಟೈನ್​ಗಾಗಿ ಹೋಟೆಲ್​​ವೊಂದರಲ್ಲಿ ವ್ಯವಸ್ಥೆ ಮಾಡಲಾಯಿತು. ಆದರೆ ಜುಲೈ 20ರ ಬೆಳಗ್ಗಿನ ಜಾವ ಸುಮಾರು 12.45ರ ಸರಿಸುಮಾರಿಗೆ ಹೋಟೆಲ್​ ಕಿಟಕಿಯಿಂದ ಆಚೆ ಇಳಿದು ಪರಾರಿಯಾಗಿದ್ದಾನೆ. ಆತನಿರುವ ಜಾಗವನ್ನು ಪತ್ತೆ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊರೊನಾ ವೈರಸ್​ ಹರಡುವಿಕೆಯಿಂದ 2020ರಿಂದ ಆಸ್ಟ್ರೇಲಿಯಾ ಗಡಿಗಳನ್ನು ಮುಚ್ಚಲಾಗಿದೆ. ದೇಶಕ್ಕೆ ಪ್ರವೇಶಿಸಲು ಅನುಮತಿ ಪಡೆದವರು ಎರಡು ವಾರಗಳ ಕಾಲ ಕ್ವಾರಂಟೈನ್​ ಆಗಬೇಕು. ಆಸ್ಟ್ರೇಲಿಯಾದಲ್ಲಿ ಡೆಲ್ಟಾ ರೂಪಾಂತರದಿಂದಾಗಿ ನಿಯಂತ್ರಣಕ್ಕಾಗಿ ಹೆಣಗಾಡುವ ಪರಿಸ್ಥಿತಿ ಎದುರಾಗಿದೆ. ವಿಕ್ಟೋರಿಯಾ ಮತ್ತು ದಕ್ಷಿಣ ಆಸ್ಟ್ರೇಲಿಯಾ ಕೂಡಾ ನೂರಾರು ಕೊವಿಡ್​ ಪ್ರಕರಣಗಳನ್ನು ವರದಿ ಮಾಡುತ್ತಲೇ ಇದೆ.

ಇದನ್ನೂ ಓದಿ:

Rekha Kadiresh ರೇಖಾ ಕೊಲೆ ಬಳಿಕ ಎಸ್ಕೇಪ್ ಆಗಲು ಆರೋಪಿಗಳು ರೂಪಿಸಿದ್ದ ಪ್ಲ್ಯಾನ್ ಹೇಗಿತ್ತು? ಇಲ್ಲಿದೆ ಡಿಟೈಲ್ಸ್

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Published On - 9:49 am, Thu, 22 July 21

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?