AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ

ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ
ಮಸಾಲಾ ಸ್ಟ್ರಾಬೆರಿ
TV9 Web
| Edited By: |

Updated on:Nov 30, 2021 | 1:17 PM

Share

ಸಾಮಾಜಿಕ ಜಾಲತಾಣದಲ್ಲಿ ಹೊಸ ಹೊಸ ಖಾದ್ಯಗಳ ವಿಡಿಯೊ ಸಾಕಷ್ಟು ಹರಿದಾಡುತ್ತವೆ. ಅವುಗಳಲ್ಲಿ ಕೆಲವನ್ನು ಜನರು ಇಷ್ಟ ಪಟ್ಟಿದ್ದರೆ ಇನ್ನು ಕೆಲವು ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಬಾಂಗ್ಲಾದೇಶದ ಸ್ಟ್ರೀಟ್​ನಲ್ಲಿ ವ್ಯಾಪಾರಸ್ಥ ಸ್ಟ್ರಾಬೆರಿ ಮಸಾಲಾ ತಯಾರಿಸಿ ಮಾರಾಟ ಮಾಡುತ್ತಿದ್ದಾನೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

ಮಸಾಲಾ ಸ್ಟ್ರಾಬೆರಿ ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊ ಸುಮಾರು 6.5 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಈ ಹೊಸ ಶೈಲಿಯ ಆಹಾರ ತಯಾರಿಸಲು ವ್ಯಾಪಾರಸ್ಥನು ಮೊದಲಿಗೆ ಸ್ಟ್ರಾಬೆರಿಗಳನ್ನು ಕತ್ತರಿಸುತ್ತಾನೆ. ಬಳಿಕ ಉಪ್ಪು, ಮಸಾಲಾ ಸೇರಿಸಿ ಜಾರ್ ಮುಚ್ಚಳವನ್ನು ಮುಚ್ಚುತ್ತಾನೆ. ಅದನ್ನು ಸರಿಯಾಗಿ ಮಿಶ್ರಣ ಮಾಡಿ ಜನರಿಗೆ ನೀಡುತ್ತಿದ್ದಾನೆ.

ಈ ಹೊಸ ವಿಧಾನದ ವಿಲಕ್ಷಣ ಆಹಾರ ಸಂಯೋಜನೆಯನ್ನು ನೆಟ್ಟಿಗರು ಇಷ್ಟಪಟ್ಟಿಲ್ಲ. ಈ ತಿನಿಸು ನೋಡಿ ಹಲವರು ಅಸಾಮಾಧಾನ ಹೊರಹಾಕಿದ್ದಾರೆ. ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ತಿಳಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದ್ದು, ಕೆಲವರು ಆ ಹೊಸ ತಿನಿಸು ರುಚಿಯಾಗಿರಬಹುದೇ? ಎಂದು ಪ್ರಶ್ನಿಸಿದ್ದಾರೆ, ಇನ್ನು ಕೆಲವರು ನಗುವ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ಹೊರಹಾಕಿದ್ದಾರೆ.

ಇದನ್ನೂ ಓದಿ:

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

Viral Video: ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ; ವಿಡಿಯೊ ವೈರಲ್​

Published On - 9:10 am, Tue, 30 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ