AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ

ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

Viral Video: ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ? ಇದೀಗ ವೈರಲ್ ಆಗಿದೆ ಹೊಸ ರೆಸಿಪಿಯ ವಿಡಿಯೊ
ಮಸಾಲಾ ಸ್ಟ್ರಾಬೆರಿ
TV9 Web
| Updated By: shruti hegde|

Updated on:Nov 30, 2021 | 1:17 PM

Share

ಸಾಮಾಜಿಕ ಜಾಲತಾಣದಲ್ಲಿ ಹೊಸ ಹೊಸ ಖಾದ್ಯಗಳ ವಿಡಿಯೊ ಸಾಕಷ್ಟು ಹರಿದಾಡುತ್ತವೆ. ಅವುಗಳಲ್ಲಿ ಕೆಲವನ್ನು ಜನರು ಇಷ್ಟ ಪಟ್ಟಿದ್ದರೆ ಇನ್ನು ಕೆಲವು ವಿಲಕ್ಷಣ ಆಹಾರ ಸಂಯೋಜನೆಗಳು ಹೆಚ್ಚು ಇಷ್ಟವಾಗುವುದಿಲ್ಲ. ಇದೀಗ ಮತ್ತೊಂದು ಹೊಸ ತಿನಿಸಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದೆ. ಬಾಂಗ್ಲಾದೇಶದ ಸ್ಟ್ರೀಟ್​ನಲ್ಲಿ ವ್ಯಾಪಾರಸ್ಥ ಸ್ಟ್ರಾಬೆರಿ ಮಸಾಲಾ ತಯಾರಿಸಿ ಮಾರಾಟ ಮಾಡುತ್ತಿದ್ದಾನೆ. ನೀವು ಎಂದಾದರೂ ಮಸಾಲಾ ಸ್ಟ್ರಾಬೆರಿ ತಿಂದಿದ್ದೀರಾ?

ಮಸಾಲಾ ಸ್ಟ್ರಾಬೆರಿ ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊ ಸುಮಾರು 6.5 ಮಿಲಿಯನ್ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಈ ಹೊಸ ಶೈಲಿಯ ಆಹಾರ ತಯಾರಿಸಲು ವ್ಯಾಪಾರಸ್ಥನು ಮೊದಲಿಗೆ ಸ್ಟ್ರಾಬೆರಿಗಳನ್ನು ಕತ್ತರಿಸುತ್ತಾನೆ. ಬಳಿಕ ಉಪ್ಪು, ಮಸಾಲಾ ಸೇರಿಸಿ ಜಾರ್ ಮುಚ್ಚಳವನ್ನು ಮುಚ್ಚುತ್ತಾನೆ. ಅದನ್ನು ಸರಿಯಾಗಿ ಮಿಶ್ರಣ ಮಾಡಿ ಜನರಿಗೆ ನೀಡುತ್ತಿದ್ದಾನೆ.

ಈ ಹೊಸ ವಿಧಾನದ ವಿಲಕ್ಷಣ ಆಹಾರ ಸಂಯೋಜನೆಯನ್ನು ನೆಟ್ಟಿಗರು ಇಷ್ಟಪಟ್ಟಿಲ್ಲ. ಈ ತಿನಿಸು ನೋಡಿ ಹಲವರು ಅಸಾಮಾಧಾನ ಹೊರಹಾಕಿದ್ದಾರೆ. ತಮ್ಮ ಅನಿಸಿಕೆಗಳನ್ನು ಕಾಮೆಂಟ್ ವಿಭಾಗದಲ್ಲಿ ತಿಳಿಸಿದ್ದಾರೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದ್ದು, ಕೆಲವರು ಆ ಹೊಸ ತಿನಿಸು ರುಚಿಯಾಗಿರಬಹುದೇ? ಎಂದು ಪ್ರಶ್ನಿಸಿದ್ದಾರೆ, ಇನ್ನು ಕೆಲವರು ನಗುವ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ಹೊರಹಾಕಿದ್ದಾರೆ.

ಇದನ್ನೂ ಓದಿ:

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

Viral Video: ಕಲಾವಿದನ ಕೈಚಳಕದಿಂದ ಮೂಡಿದ ಕಣ್ಣಿನ ಚಿತ್ರ; ವಿಡಿಯೊ ವೈರಲ್​

Published On - 9:10 am, Tue, 30 November 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!