AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲದಲ್ಲಿ 6 ಭಾವಚಿತ್ರಗಳನ್ನು ಬಿಡಿಸಿ ನೆಟ್ಟಿಗರ ಗಮನ ಸೆಳೆದ ಕಲಾವಿದ: ವಿಡಿಯೋ ವೈರಲ್​

38 ಸೆಕೆಂಡ್​ಗಳ ವಿಡಿಯೋದಲ್ಲಿ ವಿಭಿನ್ನ ರೀತಿಯ ಉಪಕರಣಗಳನ್ನು ಬಳಸಿಕೊಂಡು ಯುವಕ ಎರಡೂ ಕಾಲಿನಲ್ಲಿ ಮತ್ತು ಎರಡೂ ಕೈಗಳಲ್ಲಿ ಪೆನ್ ಹಿಡಿದುಕೊಂಡು ಚಿತ್ರವನ್ನು ಬಿಡಿಸಿರುವುದನ್ನು ಕಾಣಬಹುದು.

ಏಕಕಾಲದಲ್ಲಿ 6 ಭಾವಚಿತ್ರಗಳನ್ನು ಬಿಡಿಸಿ ನೆಟ್ಟಿಗರ ಗಮನ ಸೆಳೆದ ಕಲಾವಿದ: ವಿಡಿಯೋ ವೈರಲ್​
ಭಾವಚಿತ್ರಗಳು
TV9 Web
| Edited By: |

Updated on:Jan 21, 2022 | 10:46 AM

Share

ಪ್ರತಿಯೊಬ್ಬರಲ್ಲೂ ಒಂದೊಂದು ವಿಶೇಷ ಕಲೆ, ಅಭಿರುಚಿ ಇರುತ್ತದೆ. ಅದನ್ನು ಗುರುತಿಸಿಕೊಂಡು ಮುಂದುವರೆದರೆ ಯಶಸ್ಸಿನ ಹಾದಿ ಸನಿಹವಾಗುತ್ತದೆ. ಪ್ರಾಮಾಣಿಕ ಶ್ರದ್ಧೆ, ನಿರಂತರ ಅಭ್ಯಾಸದಿಂದ ಎಂತಹ ಕಲೆಗಳನ್ನು ಬೇಕಾದರೂ ಕರಗತ ಮಾಡಿಕೊಳ್ಳಬಹುದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ಒಂದೇ ಸಲಕ್ಕೆ 6 ಭಾವಚಿತ್ರಗಳನ್ನು ಬಿಡಿಸಿರುವ ವಿಡಿಯೋ ವೈರಲ್​ ಆಗಿದೆ. ಲಿಬಿಯಾ ದೇಶದ ಈ ಯುವಕನ ಪ್ರತಿಭೆಗೆ ಜಗತ್ತಿನಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.  ಒಂದೇ ಸಲಕ್ಕೆ 6 ಪೋಟ್ರೈಟ್​​ ಚಿತ್ರವನ್ನು ಬಿಡಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಅಮೆಡೋ ಎನ್ನುವ ಯುವಕ ಈ ಅಧ್ಬುತ ಚಿತ್ರವನ್ನು ಬಿಡಿಸಿ ನೆಟ್ಟಿಗರ ಗಮನ ಸೆಳೆದಿದ್ದಾರೆ.

ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಪ್ರಕಾರ, 38 ಸೆಕೆಂಡ್​ಗಳ ವಿಡಿಯೋದಲ್ಲಿ ವಿಭಿನ್ನ ರೀತಿಯ ಉಪಕರಣಗಳನ್ನು ಬಳಸಿಕೊಂಡು ಯುವಕ ಎರಡೂ ಕಾಲಿನಲ್ಲಿ ಮತ್ತು ಎರಡೂ ಕೈಗಳಲ್ಲಿ ಪೆನ್ ಹಿಡಿದುಕೊಂಡು ಚಿತ್ರವನ್ನು ಬಿಡಿಸಿರುವುದನ್ನು ಕಾಣಬಹುದು. ವಿಡಿಯೋ ಹಂಚಿಕೊಂಡ ಅಮೆಡೋ ಅರೇಬಿಕ್​ನಲ್ಲಿ 8 ದಿನಗಳ ಸತತ ಪ್ರಯತ್ನಗಳ ಬಳಿಕ ಒಂದಷ್ಟು ಸೋಲುಗಳ ನಂತರ ಈ ಚಿತ್ರವನ್ನು ಬಿಡಿಸಿದ್ದೇನೆ. ನೀವೆಲ್ಲರೂ ಎಂಜಾಯ್​ ಮಾಡುತ್ತೀರಿ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಮೆಡೋ ಲಿಬಿಯಾದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಈ ಹಿಂದೆ ಒಂದೇ ಬಾರಿಗೆ 4 ಚಿತ್ರಗಳನ್ನು ಬಿಡಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ನಂತರ ಸ್ವತಃ ಚಾಲೆಂಜ್​ ತೆಗೆದುಕೊಂಡು ಒಂದೇ ಬಾರಿಗೆ 6 ಚಿತ್ರಗಳನ್ನು ಬಿಡಿಸಲು ನಿರ್ಧರಿಸಿ, ಪ್ರಯತ್ನದಲ್ಲಿ ಯಶಸ್ಸನ್ನು ಕೂಡ ಗಳಿಸಿದ್ದಾರೆ. 2018ರಲ್ಲಿ ಈ ವಿಭಿನ್ನ ಕಲೆಯ ಅಭ್ಯಾಸವನ್ನು ಅಮೆಡೋ ಆರಂಭಿಸಿದ್ದು, ಸತತ ಪ್ರಯತ್ನದಿಂದ ಕಡಿಮೆ ಸಮಯದಲ್ಲಿ ಅಂತಾರಾಷ್ಟ್ರೀಯ ಕಲಾವಿದ ಎನಿಸಿಕೊಂಡಿದ್ದಾರೆ. ಸದ್ಯ ಅಮೆಡೋ ಚಿತ್ರ ಬಿಡಿಸುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

Published On - 10:45 am, Fri, 21 January 22

Follow Us
Web contact
Web contact

TV9 Kannada

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು