AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಕಾಲದಲ್ಲಿ 6 ಭಾವಚಿತ್ರಗಳನ್ನು ಬಿಡಿಸಿ ನೆಟ್ಟಿಗರ ಗಮನ ಸೆಳೆದ ಕಲಾವಿದ: ವಿಡಿಯೋ ವೈರಲ್​

38 ಸೆಕೆಂಡ್​ಗಳ ವಿಡಿಯೋದಲ್ಲಿ ವಿಭಿನ್ನ ರೀತಿಯ ಉಪಕರಣಗಳನ್ನು ಬಳಸಿಕೊಂಡು ಯುವಕ ಎರಡೂ ಕಾಲಿನಲ್ಲಿ ಮತ್ತು ಎರಡೂ ಕೈಗಳಲ್ಲಿ ಪೆನ್ ಹಿಡಿದುಕೊಂಡು ಚಿತ್ರವನ್ನು ಬಿಡಿಸಿರುವುದನ್ನು ಕಾಣಬಹುದು.

ಏಕಕಾಲದಲ್ಲಿ 6 ಭಾವಚಿತ್ರಗಳನ್ನು ಬಿಡಿಸಿ ನೆಟ್ಟಿಗರ ಗಮನ ಸೆಳೆದ ಕಲಾವಿದ: ವಿಡಿಯೋ ವೈರಲ್​
ಭಾವಚಿತ್ರಗಳು
TV9 Web
| Updated By: Pavitra Bhat Jigalemane|

Updated on:Jan 21, 2022 | 10:46 AM

Share

ಪ್ರತಿಯೊಬ್ಬರಲ್ಲೂ ಒಂದೊಂದು ವಿಶೇಷ ಕಲೆ, ಅಭಿರುಚಿ ಇರುತ್ತದೆ. ಅದನ್ನು ಗುರುತಿಸಿಕೊಂಡು ಮುಂದುವರೆದರೆ ಯಶಸ್ಸಿನ ಹಾದಿ ಸನಿಹವಾಗುತ್ತದೆ. ಪ್ರಾಮಾಣಿಕ ಶ್ರದ್ಧೆ, ನಿರಂತರ ಅಭ್ಯಾಸದಿಂದ ಎಂತಹ ಕಲೆಗಳನ್ನು ಬೇಕಾದರೂ ಕರಗತ ಮಾಡಿಕೊಳ್ಳಬಹುದು. ಇದೀಗ ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ಒಂದೇ ಸಲಕ್ಕೆ 6 ಭಾವಚಿತ್ರಗಳನ್ನು ಬಿಡಿಸಿರುವ ವಿಡಿಯೋ ವೈರಲ್​ ಆಗಿದೆ. ಲಿಬಿಯಾ ದೇಶದ ಈ ಯುವಕನ ಪ್ರತಿಭೆಗೆ ಜಗತ್ತಿನಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.  ಒಂದೇ ಸಲಕ್ಕೆ 6 ಪೋಟ್ರೈಟ್​​ ಚಿತ್ರವನ್ನು ಬಿಡಿಸುತ್ತಿರುವ ವಿಡಿಯೋ ವೈರಲ್​ ಆಗಿದೆ. ಅಮೆಡೋ ಎನ್ನುವ ಯುವಕ ಈ ಅಧ್ಬುತ ಚಿತ್ರವನ್ನು ಬಿಡಿಸಿ ನೆಟ್ಟಿಗರ ಗಮನ ಸೆಳೆದಿದ್ದಾರೆ.

ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಪ್ರಕಾರ, 38 ಸೆಕೆಂಡ್​ಗಳ ವಿಡಿಯೋದಲ್ಲಿ ವಿಭಿನ್ನ ರೀತಿಯ ಉಪಕರಣಗಳನ್ನು ಬಳಸಿಕೊಂಡು ಯುವಕ ಎರಡೂ ಕಾಲಿನಲ್ಲಿ ಮತ್ತು ಎರಡೂ ಕೈಗಳಲ್ಲಿ ಪೆನ್ ಹಿಡಿದುಕೊಂಡು ಚಿತ್ರವನ್ನು ಬಿಡಿಸಿರುವುದನ್ನು ಕಾಣಬಹುದು. ವಿಡಿಯೋ ಹಂಚಿಕೊಂಡ ಅಮೆಡೋ ಅರೇಬಿಕ್​ನಲ್ಲಿ 8 ದಿನಗಳ ಸತತ ಪ್ರಯತ್ನಗಳ ಬಳಿಕ ಒಂದಷ್ಟು ಸೋಲುಗಳ ನಂತರ ಈ ಚಿತ್ರವನ್ನು ಬಿಡಿಸಿದ್ದೇನೆ. ನೀವೆಲ್ಲರೂ ಎಂಜಾಯ್​ ಮಾಡುತ್ತೀರಿ ಎಂದು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಮೆಡೋ ಲಿಬಿಯಾದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಈ ಹಿಂದೆ ಒಂದೇ ಬಾರಿಗೆ 4 ಚಿತ್ರಗಳನ್ನು ಬಿಡಿಸುತ್ತಿರುವ ವಿಡಿಯೋ ಹಂಚಿಕೊಂಡಿದ್ದರು. ನಂತರ ಸ್ವತಃ ಚಾಲೆಂಜ್​ ತೆಗೆದುಕೊಂಡು ಒಂದೇ ಬಾರಿಗೆ 6 ಚಿತ್ರಗಳನ್ನು ಬಿಡಿಸಲು ನಿರ್ಧರಿಸಿ, ಪ್ರಯತ್ನದಲ್ಲಿ ಯಶಸ್ಸನ್ನು ಕೂಡ ಗಳಿಸಿದ್ದಾರೆ. 2018ರಲ್ಲಿ ಈ ವಿಭಿನ್ನ ಕಲೆಯ ಅಭ್ಯಾಸವನ್ನು ಅಮೆಡೋ ಆರಂಭಿಸಿದ್ದು, ಸತತ ಪ್ರಯತ್ನದಿಂದ ಕಡಿಮೆ ಸಮಯದಲ್ಲಿ ಅಂತಾರಾಷ್ಟ್ರೀಯ ಕಲಾವಿದ ಎನಿಸಿಕೊಂಡಿದ್ದಾರೆ. ಸದ್ಯ ಅಮೆಡೋ ಚಿತ್ರ ಬಿಡಿಸುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ:

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

Published On - 10:45 am, Fri, 21 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?