AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಕ್ಸಿನೇಷನ್​ ಉತ್ತೇಜಿಸಲು 700 ಕುರಿಗಳನ್ನು ಸಿರಿಂಜ್​ ಆಕಾರದಲ್ಲಿ ನಿಲ್ಲಿಸಿ ಸಂದೇಶ ಸಾರಿದ ವ್ಯಕ್ತಿ

ಜರ್ಮನಿಯ ಕ್ಯಾಂಪೇನರ್​ ಒಬ್ಬರು 700 ಕುರಿಗಳನ್ನು ಸಿರಿಂಜ್​ ಆಕೃತಿಯಲ್ಲಿ ನಿಲ್ಲಿಸಿ ವ್ಯಾಕ್ಸಿನ್​ ತೆಗೆದುಕೊಳ್ಳುವಂತೆ ಜನರನ್ನು ಉತ್ತೇಜಿಸಿದ್ದಾರೆ. ಅದರ ಫೋಟೋಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವ್ಯಾಕ್ಸಿನೇಷನ್​ ಉತ್ತೇಜಿಸಲು 700 ಕುರಿಗಳನ್ನು ಸಿರಿಂಜ್​ ಆಕಾರದಲ್ಲಿ ನಿಲ್ಲಿಸಿ ಸಂದೇಶ ಸಾರಿದ ವ್ಯಕ್ತಿ
ಕುರಿಗಳು
TV9 Web
| Edited By: |

Updated on:Jan 07, 2022 | 10:33 AM

Share

ಕೊರೋನಾ ಸಾಂಕ್ರಾಮಿಕ ಜಗತ್ತಿನೆಲ್ಲೆಡೆ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಹಿನ್ನಲೆಯಲ್ಲಿ ವ್ಯಾಕ್ಸಿನೇಷನ್​ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಆದರೆ ಹಲವು ರಾಷ್ಟ್ರಗಳಲ್ಲಿ ವ್ಯಾಕ್ಸಿನ್​ ತೆಗೆದುಕೊಳ್ಳಲು ಜನ ಇನ್ನೂ  ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜರ್ಮನಿಯ ಕ್ಯಾಂಪೇನರ್​ ಒಬ್ಬರು 700 ಕುರಿಗಳನ್ನು ಸಿರಿಂಜ್​ ಆಕೃತಿಯಲ್ಲಿ ನಿಲ್ಲಿಸಿ ವ್ಯಾಕ್ಸಿನ್​ ತೆಗೆದುಕೊಳ್ಳುವಂತೆ ಜನರನ್ನು ಉತ್ತೇಜಿಸಿದ್ದಾರೆ. ಅದರ ಫೋಟೋಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜರ್ಮನಿಯಲ್ಲಿ ಕೊರೋನಾದಿಂದ ಲಕ್ಷಾಂತರ ಸಾವುಗಳು ಸಂಭವಿಸಿವೆ. ದಿನನಿತ್ಯದ ಪ್ರಕರಣಗಳೂ ಕೂಡ ಏರಿಕೆಯಲ್ಲೇ ಇವೆ. ಹೀಗಿದ್ದರೂ ಜನ ವ್ಯಾಕ್ಸಿನ್​ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.  ಜರ್ಮನಿಯಲ್ಲಿ ಕುರಿಗಳ ಬಗ್ಗೆ ಅಪಾರ ನಂಬಿಕೆಯಿದೆ. ಧನಾತ್ಮಕ ದೃಷ್ಟಿಕೋನದಲ್ಲಿ ಕುರಿಗಳನ್ನು ಜರ್ಮನಿಯ ಜನ ನೋಡುತ್ತಾರೆ ಈ ಹಿನ್ನಲೆಯಲ್ಲಿ ಎಟ್ಜೋಲ್ಡ್​ ಎನ್ನುವ ವ್ಯಕ್ತಿ ಜರ್ಮನ್ ಪಟ್ಟಣವಾದ ಷ್ನೆವರ್ಡಿಂಗನ್‌ನಲ್ಲಿ ತನ್ನದೇ ತಂಡವನ್ನು ಕಟ್ಟಿಕೊಂಡು ಕುರಿಗಳ ಮೂಲಕ ವ್ಯಾಕ್ಸಿನ್​ ತೆಗೆದುಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ. 100 ಮೀ ಉದ್ದದ ಸಿರಿಂಜ್​ ಆಕೃತಿಯನ್ನು 700 ಕುರಿಗಳ ಮೂಲಕ ನಿರ್ಮಿಸಿದ್ದಾರೆ. ಈ ಕುರಿತು ರಾಯಿಟರ್ಸ್​ ವರದಿ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜರ್ಮನ್​ನಲ್ಲಿ ಶೇ.71.3 ರಷ್ಟು ಜನ ಮಾತ್ರ ಕೊರೋನಾ ಲಸಿಕೆಯ ಎರಡೂ ಡೋಸ್​ನ್ನು ಪಡೆದಿದ್ದಾರೆ  ಹಾಗೂ 39.3 ಪ್ರತಿಶತದಷ್ಟು ಜನರು ಕಳೆದ ಎರಡು ದಿನಗಳ ಹಿಂದೆ ವ್ಯಕ್ಸಿನ್ ಪಡೆದಿದ್ದಾರೆ ಎಂದು ಜರ್ಮನ್ ರಾಬರ್ಟ್ ಕೋಚ್ ಇನ್ಸ್ಟಿಟ್ಯೂಟ್ ಫಾರ್ ಇನ್ಫೆಕ್ಷನ್​ ಡಿಸೀಸ್​ ಸಂಸ್ಥೆ ವರದಿ ತಿಳಿಸಿದೆ. ಜತೆಗೆ ಶೇ5 ರಿಂದ 10 ಜನರು ವ್ಯಾಕ್ಸಿನ್​ ಪಡೆಯಲು ನಿರಾಕರಿಸುತ್ತಿದ್ದಾರೆ. ಯುರೋಪಿಯನ್​ ದೇಶಗಳಲ್ಲಿ ಜರ್ಮನಿಯಲ್ಲಿ ಅತೀ ಕಡಿಮೆ ಜನರು ವ್ಯಾಕ್ಸಿನೇಷನ್ ಪಡೆದುಕೊಂಡಿದ್ದಾರೆ​ ಎಂದು ಸಂಸ್ಥೆ ವರದಿ ತಿಳಿಸಿದೆ.

ಇದನ್ನೂ ಓದಿ:

Viral Video: ಮದುವೆಯಲ್ಲಿ ವರನನ್ನು ಪದೇಪದೆ ತಬ್ಬಿಕೊಂಡ ಬುರ್ಖಾಧಾರಿ ಮಹಿಳೆ; ಅಸಲಿ ವಿಚಾರ ತಿಳಿದು ಶಾಕ್ ಆದ ವಧು!

Published On - 9:40 am, Fri, 7 January 22

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ