AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಕ್ಸಿನೇಷನ್​ ಉತ್ತೇಜಿಸಲು 700 ಕುರಿಗಳನ್ನು ಸಿರಿಂಜ್​ ಆಕಾರದಲ್ಲಿ ನಿಲ್ಲಿಸಿ ಸಂದೇಶ ಸಾರಿದ ವ್ಯಕ್ತಿ

ಜರ್ಮನಿಯ ಕ್ಯಾಂಪೇನರ್​ ಒಬ್ಬರು 700 ಕುರಿಗಳನ್ನು ಸಿರಿಂಜ್​ ಆಕೃತಿಯಲ್ಲಿ ನಿಲ್ಲಿಸಿ ವ್ಯಾಕ್ಸಿನ್​ ತೆಗೆದುಕೊಳ್ಳುವಂತೆ ಜನರನ್ನು ಉತ್ತೇಜಿಸಿದ್ದಾರೆ. ಅದರ ಫೋಟೋಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ವ್ಯಾಕ್ಸಿನೇಷನ್​ ಉತ್ತೇಜಿಸಲು 700 ಕುರಿಗಳನ್ನು ಸಿರಿಂಜ್​ ಆಕಾರದಲ್ಲಿ ನಿಲ್ಲಿಸಿ ಸಂದೇಶ ಸಾರಿದ ವ್ಯಕ್ತಿ
ಕುರಿಗಳು
TV9 Web
| Edited By: |

Updated on:Jan 07, 2022 | 10:33 AM

Share

ಕೊರೋನಾ ಸಾಂಕ್ರಾಮಿಕ ಜಗತ್ತಿನೆಲ್ಲೆಡೆ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಹಿನ್ನಲೆಯಲ್ಲಿ ವ್ಯಾಕ್ಸಿನೇಷನ್​ ತೆಗೆದುಕೊಳ್ಳುವುದು ಅನಿವಾರ್ಯವಾಗಿದೆ. ಆದರೆ ಹಲವು ರಾಷ್ಟ್ರಗಳಲ್ಲಿ ವ್ಯಾಕ್ಸಿನ್​ ತೆಗೆದುಕೊಳ್ಳಲು ಜನ ಇನ್ನೂ  ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜರ್ಮನಿಯ ಕ್ಯಾಂಪೇನರ್​ ಒಬ್ಬರು 700 ಕುರಿಗಳನ್ನು ಸಿರಿಂಜ್​ ಆಕೃತಿಯಲ್ಲಿ ನಿಲ್ಲಿಸಿ ವ್ಯಾಕ್ಸಿನ್​ ತೆಗೆದುಕೊಳ್ಳುವಂತೆ ಜನರನ್ನು ಉತ್ತೇಜಿಸಿದ್ದಾರೆ. ಅದರ ಫೋಟೋಗಳು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜರ್ಮನಿಯಲ್ಲಿ ಕೊರೋನಾದಿಂದ ಲಕ್ಷಾಂತರ ಸಾವುಗಳು ಸಂಭವಿಸಿವೆ. ದಿನನಿತ್ಯದ ಪ್ರಕರಣಗಳೂ ಕೂಡ ಏರಿಕೆಯಲ್ಲೇ ಇವೆ. ಹೀಗಿದ್ದರೂ ಜನ ವ್ಯಾಕ್ಸಿನ್​ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.  ಜರ್ಮನಿಯಲ್ಲಿ ಕುರಿಗಳ ಬಗ್ಗೆ ಅಪಾರ ನಂಬಿಕೆಯಿದೆ. ಧನಾತ್ಮಕ ದೃಷ್ಟಿಕೋನದಲ್ಲಿ ಕುರಿಗಳನ್ನು ಜರ್ಮನಿಯ ಜನ ನೋಡುತ್ತಾರೆ ಈ ಹಿನ್ನಲೆಯಲ್ಲಿ ಎಟ್ಜೋಲ್ಡ್​ ಎನ್ನುವ ವ್ಯಕ್ತಿ ಜರ್ಮನ್ ಪಟ್ಟಣವಾದ ಷ್ನೆವರ್ಡಿಂಗನ್‌ನಲ್ಲಿ ತನ್ನದೇ ತಂಡವನ್ನು ಕಟ್ಟಿಕೊಂಡು ಕುರಿಗಳ ಮೂಲಕ ವ್ಯಾಕ್ಸಿನ್​ ತೆಗೆದುಕೊಳ್ಳುವಂತೆ ಜನರನ್ನು ಪ್ರೋತ್ಸಾಹಿಸುತ್ತಿದ್ದಾರೆ. 100 ಮೀ ಉದ್ದದ ಸಿರಿಂಜ್​ ಆಕೃತಿಯನ್ನು 700 ಕುರಿಗಳ ಮೂಲಕ ನಿರ್ಮಿಸಿದ್ದಾರೆ. ಈ ಕುರಿತು ರಾಯಿಟರ್ಸ್​ ವರದಿ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಜರ್ಮನ್​ನಲ್ಲಿ ಶೇ.71.3 ರಷ್ಟು ಜನ ಮಾತ್ರ ಕೊರೋನಾ ಲಸಿಕೆಯ ಎರಡೂ ಡೋಸ್​ನ್ನು ಪಡೆದಿದ್ದಾರೆ  ಹಾಗೂ 39.3 ಪ್ರತಿಶತದಷ್ಟು ಜನರು ಕಳೆದ ಎರಡು ದಿನಗಳ ಹಿಂದೆ ವ್ಯಕ್ಸಿನ್ ಪಡೆದಿದ್ದಾರೆ ಎಂದು ಜರ್ಮನ್ ರಾಬರ್ಟ್ ಕೋಚ್ ಇನ್ಸ್ಟಿಟ್ಯೂಟ್ ಫಾರ್ ಇನ್ಫೆಕ್ಷನ್​ ಡಿಸೀಸ್​ ಸಂಸ್ಥೆ ವರದಿ ತಿಳಿಸಿದೆ. ಜತೆಗೆ ಶೇ5 ರಿಂದ 10 ಜನರು ವ್ಯಾಕ್ಸಿನ್​ ಪಡೆಯಲು ನಿರಾಕರಿಸುತ್ತಿದ್ದಾರೆ. ಯುರೋಪಿಯನ್​ ದೇಶಗಳಲ್ಲಿ ಜರ್ಮನಿಯಲ್ಲಿ ಅತೀ ಕಡಿಮೆ ಜನರು ವ್ಯಾಕ್ಸಿನೇಷನ್ ಪಡೆದುಕೊಂಡಿದ್ದಾರೆ​ ಎಂದು ಸಂಸ್ಥೆ ವರದಿ ತಿಳಿಸಿದೆ.

ಇದನ್ನೂ ಓದಿ:

Viral Video: ಮದುವೆಯಲ್ಲಿ ವರನನ್ನು ಪದೇಪದೆ ತಬ್ಬಿಕೊಂಡ ಬುರ್ಖಾಧಾರಿ ಮಹಿಳೆ; ಅಸಲಿ ವಿಚಾರ ತಿಳಿದು ಶಾಕ್ ಆದ ವಧು!

Published On - 9:40 am, Fri, 7 January 22

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ