AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಧವೆ, ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್;‌ ಶ್ರೀಮಂತಿಕೆಯ ಆಸೆಗೆ 9 ವರ್ಷದಲ್ಲಿ 20 ಮದುವೆ

ಹಣದಾಸೆಗೆ ಬಿದ್ದು ಅಥವಾ ಬೇಗ ಶ್ರೀಮಂತನಾಗಬೇಕು ಎಂದು ಕೆಲವರು ಕಳ್ಳತನ ಇತ್ಯಾದಿ ಅಡ್ಡ ದಾರಿಗಳನ್ನು ಹಿಡಿಯುತ್ತಾರೆ. ಅದೇ ರೀತಿ ಇಲ್ಲೊಬ್ಬ ಸುಲಭ ದಾರಿಯಲ್ಲಿ ಹಣ ಗಳಿಸಲು ವಿಧವೆ ಮತ್ತು ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ, ಅವರನ್ನು ಮದುವೆಯಾಗಿ ಕೊನೆಗೆ ಚಿನ್ನ, ಹಣ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ. ಹೀಗೆ 9 ವರ್ಷದಲ್ಲಿ 20 ಮಹಿಳೆಯನ್ನು ಮದುವೆಯಾಗಿ ಯಾಮಾರಿಸಿದ ಈ ಖತರ್ನಾಕ್‌ ಇದೀಗ ಪೊಲೀಸರ ಅಥಿತಿಯಾಗಿದ್ದಾನೆ.

Viral: ವಿಧವೆ, ವಿಚ್ಛೇದಿತ ಮಹಿಳೆಯರೇ ಈತನ ಟಾರ್ಗೆಟ್;‌ ಶ್ರೀಮಂತಿಕೆಯ ಆಸೆಗೆ 9 ವರ್ಷದಲ್ಲಿ 20 ಮದುವೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 29, 2024 | 2:21 PM

Share

ಹಣದಾಸೆಗೆ ಬಿದ್ದು ಅಥವಾ ಸುಲಭ ದಾರಿಯಲ್ಲಿ ಶ್ರೀಮಂತಿಕೆಯನ್ನು ಗಳಿಸಲು ಈ ಕೆಲವೊಬ್ಬರು ಏನೂ ಬೇಕಾದರೂ ಮಾಡುತ್ತಾರೆ. ಕಳ್ಳತನ, ದರೋಡೆ ಸೇರಿದಂತೆ ಎಂತಹ ವಂಚನೆ ಮಾಡೋದಕ್ಕೂ ತಯಾರಿರುತ್ತಾರೆ. ಇತ್ತೀಚಿಗಷ್ಟೆ ಹಣದಾಸೆಗೆ ಬಿದ್ದ ಖತರ್ನಾಕ್‌ ಮಹಿಳೆಯೊಬ್ಬಳು ಬರೋಬ್ಬರಿ 50 ಜನರನ್ನು ಮದುವೆಯಾಗಿ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಳು. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಸುಲಭ ದಾರಿಯಲ್ಲಿ ಹಣ ಗಳಿಸಲು ವಿಧವೆ ಮತ್ತು ವಿಚ್ಛೇದಿತ ಮಹಿಳೆಯರನ್ನು ಟಾರ್ಗೆಟ್‌ ಮಾಡಿ, 9 ವರ್ಷದಲ್ಲಿ 20 ಮಹಿಳೆಯನ್ನು ಮದುವೆಯಾಗಿ ಯಾಮಾರಿಸಿದ್ದ ವ್ಯಕ್ತಿಯೊಬ್ಬ ಇದೀಗ ಪೊಲೀಸರ ಅಥಿತಿಯಾಗಿದ್ದಾನೆ.

ಈ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್‌ ಜಿಲ್ಲೆಯಲ್ಲಿ ನಡೆದಿದ್ದು, ಸುಲಭ ದಾರಿಯಲ್ಲಿ ಹಣ ಗಳಿಸಲು ವಿಧವೆ ಮತ್ತು ವಿಚ್ಛೇದಿತ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ, ಅವರನ್ನು ಮದುವೆಯಾಗಿ ಕೊನೆಗೆ ಚಿನ್ನ, ಹಣ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ ಆಸಾಮಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. 43 ವರ್ಷ ವಯಸ್ಸಿನ ಫಿರೋಜ್‌ ನಿಯಾಜ್‌ ಶೇಖ್‌ ಎಂಬಾತ ಮ್ಯಾಟ್ರಿಮೋನಿಯಲ್‌ ಸೈಟ್‌ಗಳಲ್ಲಿ ವಿಧವೆ ಮತ್ತು ವಿಚ್ಛೇದಿತ ಮಹಿಳೆಯರನ್ನು ಟಾರ್ಗೆಟ್‌ ಮಾಡಿ, ಅವರೊಂದಿಗೆ ಸ್ನೇಹ ಬೆಳೆಸಿ ಮದುವೆಯಾಗಿ, ಕೆಲ ದಿನಗಳ ಬಳಿಕ ಹಣ, ಚಿನ್ನ ಇತ್ಯಾದಿ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗುತ್ತಿದ್ದ. ಹೀಗೆ ಈತ 9 ವರ್ಷದಲ್ಲಿ 20 ಮಹಿಳೆಯರಿಗೆ ವಂಚನೆ ಮಾಡಿದ್ದಾನೆ.

ಇದನ್ನೂ ಓದಿ: ನವಜಾತ ಶಿಶುವನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಕಟ್ಟಿ ಪೊದೆಯಲ್ಲಿ ಎಸೆದು ಹೋದ ಹೆತ್ತಮ್ಮ

ಮಹಾರಾಷ್ಟ್ರದ ನಲಸೋಪಾರ ಮೂಲದ ಮಹಿಳೆಯೊಬ್ಬರಿಗೂ ಕೂಡಾ ಇದೇ ರೀತಿ ಈತ ವಂಚನೆ ಮಾಡಿದ್ದು, ಲಕ್ಷಾಂತರ ರೂಪಾಯಿ ಹಣ, ಲ್ಯಾಪ್‌ಟಾಪ್‌ ಮತ್ತು ಇತರೆ ಬೆಲೆಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ. ತನಗಾದ ವಂಚನೆಯ ಬಗ್ಗೆ ಆ ಮಹಿಳೆ ಪೊಲೀಸರಿಗೆ ದೂರನ್ನು ನೀಡಿದ್ದು, ದೂರಿನ ಆಧಾರದ ಮೇರೆಗೆ MBVV ಪೊಲೀಸರು ಆತನನ್ನು ಜುಲೈ 23 ರಂದು ಬಂಧಿಸಿದ್ದಾರೆ. ವಿಚಾರಣೆಯ ವೇಳೆ ಆತನ ಕಳ್ಳಾಟ ಬಯಲಾಗಿದ್ದು, ಆರೋಪಿಯಿಂದ ಲ್ಯಾಪ್‌ಟಾಪ್‌, ಮೊಬೈಲ್‌, ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌, ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ 2015 ರಿಂದ ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಗುಜರಾತ್‌ ಸೇರಿದಂತೆ ವಿವಿಧ ರಾಜ್ಯದ ಸುಮಾರು 20 ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದಾನೆ ಎಂಬುದು ತಿಳಿದು ಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ