AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಐಐಟಿ ಪ್ರವೇಶ ಪಡೆದರೆ ಮಗನಿಗೆ ಸಂಬಳದ 40% ಕೊಡುವುದಾಗಿ ಭರವಸೆ ನೀಡಿದ ತಂದೆ

ಮಕ್ಕಳಿಗಾಗಿ ತಂದೆ ತಾಯಿ ಏನು ಬೇಕಾದರೂ ಮಾಡಲು ಸಿದ್ಧವಿರುತ್ತಾರೆ, ಇಲ್ಲೊಬ್ಬ ತಂದೆ ತನ್ನ ಮಗನಿಗೆ ವಿಚಿತ್ರವಾದ ಭರವಸೆಯನ್ನು ನೀಡಿದ್ದಾನೆ. ತಮ್ಮ ಮಗ ಈ ಷರತ್ತನ್ನು ಪೂರೈಸಿದರೆ, ನಿವೃತ್ತಿಯವರೆಗೆ ತನ್ನ ಸಂಬಳದ 40 ಪ್ರತಿಶತವನ್ನು ನೀಡುವುದಾಗಿ ಒಪ್ಪಂದ ಮಾಡಿಕೊಂಡಿದ್ದಾರೆ. ಕೈ ಬರಹದಲ್ಲೇ ಮಾಡಿಕೊಂಡ ಒಪ್ಪಂದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಂತೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

Viral : ಐಐಟಿ ಪ್ರವೇಶ ಪಡೆದರೆ ಮಗನಿಗೆ ಸಂಬಳದ 40% ಕೊಡುವುದಾಗಿ ಭರವಸೆ ನೀಡಿದ ತಂದೆ
ಸಂಬಳ
ಸಾಯಿನಂದಾ
| Edited By: |

Updated on: Feb 23, 2025 | 12:03 PM

Share

ಮಕ್ಕಳಿಗೆ ಒಂದೊಳ್ಳೆ ಭವಿಷ್ಯ ಕಟ್ಟಿಕೊಡಬೇಕೆನ್ನುವುದು ಪ್ರತಿಯೊಬ್ಬರ ತಂದೆ ತಾಯಿಯ ಕನಸಾಗಿರುತ್ತದೆ. ಹೀಗಾಗಿ ಉತ್ತಮ ಶಿಕ್ಷಣ ಮತ್ತು ಅತ್ಯುತ್ತಮ ಅಂಕ ಪಡೆಯಲು ಪೋಷಕರು ತಮ್ಮ ಮಕ್ಕಳ ಮೇಲೆ ವಿವಿಧ ಷರತ್ತುಗಳನ್ನು ವಿಧಿಸುವುದನ್ನು ಕಾಣಬಹುದು. ಮಕ್ಕಳು ಉತ್ತಮ ಅಂಕಗಳನ್ನು ಗಳಿಸಿದರೆ ಅವರಿಗೆ ಉಡುಗೊರೆಯನ್ನು ನೀಡುವುದಾಗಿ ಪೋಷಕರು ಭರವಸೆ ನೀಡುತ್ತಾರೆ. ಇದೀಗ ತಂದೆಯೊಬ್ಬನು, ಐಐಟಿಗೆ ಪ್ರವೇಶ ಪಡೆದರೆ ತನ್ನ ಸಂಬಳದ 40% ರಷ್ಟನ್ನು ಮಗನಿಗೆ ನೀಡುವುದಾಗಿ ಭರವಸೆ ನೀಡಿರುವ ಪೋಸ್ಟ್ ವೊಂದು ವೈರಲ್ ಆಗಿದೆ.

Upset_Design_8656 ಎಂಬ ಬಳಕೆದಾರನು, ತಂದೆಯ ಕೈ ಬರಹದ ಪತ್ರದ ಫೋಟೋವನ್ನು ರೆಡ್ಡಿಟ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದರಲ್ಲಿ ಕಾಲೇಜು ಪ್ರವೇಶದ ಕುರಿತು ತಂದೆಯೊಬ್ಬರು ತಮ್ಮ ಮಗನೊಂದಿಗೆ ಮಾಡಿಕೊಂಡಿರುವ ವಿಚಿತ್ರ ಒಪ್ಪಂದದ ಕುರಿತು ನೋಡಬಹುದು. ಈ ಪೋಸ್ಟ್ ನೊಂದಿಗೆ ಮಗನು, ‘ನನ್ನ ತಂದೆ ಒಂದು ಘೋಷಣೆ ಮಾಡಿದ್ದಾರೆ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾನೆ.

ಈ ಪೋಸ್ಟ್ ನಲ್ಲಿ ಆತ ಐಐಟಿ, ಎನ್‌ಐಟಿ, ಐಐಐಟಿ ಅಥವಾ ಬಿಟ್ಸ್ ಪಿಲಾನಿಯಂತಹ ಉನ್ನತ ಶ್ರೇಣಿಯ ಇನ್‌ಸ್ಟಿಟ್ಯೂಟ್‌ನಲ್ಲಿ ಪ್ರವೇಶ ಪಡೆದರೆ ತಂದೆಯೂ ನಿವೃತ್ತಿಯಾಗುವವರೆಗೆ ಪ್ರತಿ ತಿಂಗಳು ತಮ್ಮ ಸಂಬಳದ 40% ರಷ್ಟು ಹಣವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಒಂದು ವೇಳೆ ಸೆಕೆಂಡ್‌ ಅಥವಾ ಮೂರನೇ ಹಂತದ ಕಾಲೇಜಿನಲ್ಲಿ ಪ್ರವೇಶ ಪಡೆದರೆ, ತನ್ನ ನಿವೃತ್ತಿಯವರೆಗೂ ಸಂಬಳದ 100% ಹಣವನ್ನು ಮಗನು ತಂದೆಗೆ ನೀಡಬೇಕು ಎಂದು ಒಪ್ಪಂದ ಮಾಡಿಕೊಂಡಿದ್ದಾರೆ.

ಮತ್ತಷ್ಟು ಓದಿ: Viral: ನಿಮ್ಮ ಬಳಿ ಈ 2 ರೂಪಾಯಿ ಹಳೆಯ ನೋಟು ಇದ್ರೆ ನೀವು ಗಳಿಸಬಹುದು ಬರೋಬ್ಬರಿ 5 ಲಕ್ಷ ರೂ.; ಹೇಗೆ ಇಲ್ಲಿದೆ ಮಾಹಿತಿ

ಈ ಪೋಸ್ಟ್ ವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ. ಬಳಕೆದಾರರೊಬ್ಬರು, ‘ನಿಮ್ಮ ತಂದೆ ಎಲ್‌ಐಸಿ ಏಜೆಂಟಾ?.. ಎಂಥಾ ಖತರ್ನಾಕ್‌ ಸ್ಕೀಮ್‌ ತಂದಿದ್ದಾರೆ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, ‘ತಂದೆ ಮತ್ತೆ ಮಗನ ಫೀಸ್‌ಗೇ ಶೇಕಡಾ 40ರಷ್ಟು ಹಣ ಖರ್ಚಾಯಿತು ಎಂದು ನೆಪ ಹೇಳುತ್ತಾರೆ’ ಎಂದು ಕಾಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು