AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100ನೇ ವರ್ಷದ ಹುಟ್ಟುಹಬ್ಬದಂದು 90 ವರ್ಷದ ಹೆಂಡತಿಯನ್ನು ಮರುಮದುವೆಯಾದ ವೃದ್ಧ

ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬ ತನ್ನ 100ನೇ ವರ್ಷದ ಜನ್ಮದಿನದ ಆಚರಣೆ ವೇಳೆ ತನ್ನ 90 ವರ್ಷದ ಹೆಂಡತಿಯನ್ನು ಮರು ಮದುವೆಯಾಗಿದ್ದಾರೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

100ನೇ ವರ್ಷದ ಹುಟ್ಟುಹಬ್ಬದಂದು 90 ವರ್ಷದ ಹೆಂಡತಿಯನ್ನು ಮರುಮದುವೆಯಾದ ವೃದ್ಧ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on:Feb 18, 2022 | 5:18 PM

ಒಬ್ಬ ಮನುಷ್ಯನಿಗೆ 100ನೇ ವರ್ಷದ ಜನ್ಮದಿನವನ್ನು ತನ್ನ ತುಂಬು ಕುಟುಂಬದೊಂದಿಗೆ ಆಚರಿಸಿಕೊಳ್ಳುವುದು ವಿಶೇಷವೇ ಆಗಿರುತ್ತದೆ.  ಒಂದು ಶತಮಾನದ ಏಳು ಬೀಳುಗಳನ್ನು ದಾಟಿ ಕುಟುಂಬವನ್ನು ಕಟ್ಟಿ ನಿಲ್ಲಿಸುವುದು ಸುಲಭದ ಮಾತಲ್ಲ. ಹೀಗಿದ್ದಾಗ ಪಶ್ಚಿಮ ಬಂಗಾಳದ (West Bengal) ವ್ಯಕ್ತಿಯೊಬ್ಬ ತನ್ನ 100ನೇ ವರ್ಷದ ಜನ್ಮದಿನದ ಆಚರಣೆ ವೇಳೆ ತನ್ನ 90 ವರ್ಷದ ಹೆಂಡತಿಯನ್ನು ಮರು ಮದುವೆಯಾಗಿದ್ದಾರೆ (Re-marriage).  100 ವರ್ಷದ ಬಿಸ್ವಂತ್​ ಸರ್ಕಾರ್​​ ತನ್ನ 90 ವರ್ಷದ ಪತ್ನಿ ಸೌರ್ಧವನಿ ಸರ್ಕಾರ್​ ಅವರನ್ನು ಅದ್ದೂರಿಯಾಗಿ ಮತ್ತೆ ಮದುವೆಯಾಗಿದ್ದಾರೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್ (Viral)​ ಆಗಿದೆ.

ಬಿಸ್ವಂತ್​ ಸರ್ಕಾರ್​  6 ಮಕ್ಕಳು, 23 ಮೊಮ್ಮಕ್ಕಳು, 10 ಮಂದಿ ಮರಿ ಮೊಮ್ಮಕ್ಕಳ ಹಾಗೂ 6 ಮಂದಿ ಸೊಸೆಯಂದಿರನ್ನು ಹೊಂದಿದ್ದಾರೆ. ಬಿಸ್ವಂತ್​ ಅವರ ಮರು ಮದುವೆ ಮದುವೆ ಮತ್ತು 100ನೇ ವರ್ಷದ ಜನ್ಮದಿನವನ್ನು ಕುಟುಂಬ ಅದ್ದೂರಿಯಾಗಿ ಆಚರಿಸಿದೆ.  ಬಿಸ್ವಂತ್​ ಅವರ ಮಕ್ಕಳು ಮತ್ತು ಅವರ ಕುಟುಂಬ ಪಶ್ಚಿಮ ಬಂಗಾಳ ಬಿಟ್ಟು ಬೇರೆ ರಾಜ್ಯಗಳಲ್ಲಿ ನೆಲೆಸಿದ್ದು ಇ ವಿಶೇಷ ದಿನವನ್ನು ಆಚರಿಸಲು ಹಳ್ಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಇಂಡಿಯಾ.ಕಾಮ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಿಶೇಷ ಅಚರಣೆಯ ಕುರಿತು ಬಿಸ್ವಂತ್​ ಅವರ ಕುಟುಂಬ ಮಾತನಾಡಿದ್ದು, ನಿಜವಾದ ಮದುವೆಯಲ್ಲಿ ಹೇಗೆ ವಧು ಗಂಡನ ಮನೆಗೆ ಪ್ರವೇಶಿಸುತ್ತಾಳೋ ಅದೆ ರೀತಿ ಮದುವೆಯನ್ನು ಮಾಡಲಾಗಿದೆ.  ವರನ ಮನೆಯಿಂದ 5 ಕಿಮೀ ದೂರದಿಂದ ವಧುವನ್ನು ಕರೆದುಕೊಂಡು ಬರುವಂತೆ ಮಾಡಿ, ಎಲ್ಲಾ ರೀತಿಯ ಸಂಪ್ರದಾಯಗಳನ್ನು ಆಚರಣೆ ಮಾಡುವ ಮೂಲಕ ಮದುವೆಯನ್ನು ಮಾಡಲಾಗಿದೆ. ವರನನ್ನು ಕುದುರೆಗಾಡಿಯಲ್ಲಿ ಕರೆತಂದು, ಹಾರ ಬದಲಾಯಿಸಿಕೊಳ್ಳುವ ರೀತಿಯಲ್ಲಿಯೇ ಆಚರಿಸಲಾಗಿದೆ ಎಂದಿದ್ದಾರೆ. ಸದ್ಯ ಈ ವಿಚಾರ  ಎಲ್ಲೆಡೆ ವೈರಲ್​ ಆಗಿದೆ.

 ಇದನ್ನೂ ಓದಿ:

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ

Published On - 5:11 pm, Fri, 18 February 22

ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಸಿಂಧೂರದ ಮಹತ್ವ ಹಾಗೂ ಇದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಇಂದಿನ ದ್ವಾದಶ ರಾಶಿಗಳ ಫಲಾನುಫಲಗಳ ಬಗ್ಗೆ ಸಂಕ್ಷಿಪ್ತ ವಿವರ ಇಲ್ಲಿದೆ
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ