AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100ನೇ ವರ್ಷದ ಹುಟ್ಟುಹಬ್ಬದಂದು 90 ವರ್ಷದ ಹೆಂಡತಿಯನ್ನು ಮರುಮದುವೆಯಾದ ವೃದ್ಧ

ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬ ತನ್ನ 100ನೇ ವರ್ಷದ ಜನ್ಮದಿನದ ಆಚರಣೆ ವೇಳೆ ತನ್ನ 90 ವರ್ಷದ ಹೆಂಡತಿಯನ್ನು ಮರು ಮದುವೆಯಾಗಿದ್ದಾರೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್​ ಆಗಿದೆ. 

100ನೇ ವರ್ಷದ ಹುಟ್ಟುಹಬ್ಬದಂದು 90 ವರ್ಷದ ಹೆಂಡತಿಯನ್ನು ಮರುಮದುವೆಯಾದ ವೃದ್ಧ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 18, 2022 | 5:18 PM

Share

ಒಬ್ಬ ಮನುಷ್ಯನಿಗೆ 100ನೇ ವರ್ಷದ ಜನ್ಮದಿನವನ್ನು ತನ್ನ ತುಂಬು ಕುಟುಂಬದೊಂದಿಗೆ ಆಚರಿಸಿಕೊಳ್ಳುವುದು ವಿಶೇಷವೇ ಆಗಿರುತ್ತದೆ.  ಒಂದು ಶತಮಾನದ ಏಳು ಬೀಳುಗಳನ್ನು ದಾಟಿ ಕುಟುಂಬವನ್ನು ಕಟ್ಟಿ ನಿಲ್ಲಿಸುವುದು ಸುಲಭದ ಮಾತಲ್ಲ. ಹೀಗಿದ್ದಾಗ ಪಶ್ಚಿಮ ಬಂಗಾಳದ (West Bengal) ವ್ಯಕ್ತಿಯೊಬ್ಬ ತನ್ನ 100ನೇ ವರ್ಷದ ಜನ್ಮದಿನದ ಆಚರಣೆ ವೇಳೆ ತನ್ನ 90 ವರ್ಷದ ಹೆಂಡತಿಯನ್ನು ಮರು ಮದುವೆಯಾಗಿದ್ದಾರೆ (Re-marriage).  100 ವರ್ಷದ ಬಿಸ್ವಂತ್​ ಸರ್ಕಾರ್​​ ತನ್ನ 90 ವರ್ಷದ ಪತ್ನಿ ಸೌರ್ಧವನಿ ಸರ್ಕಾರ್​ ಅವರನ್ನು ಅದ್ದೂರಿಯಾಗಿ ಮತ್ತೆ ಮದುವೆಯಾಗಿದ್ದಾರೆ. ಸದ್ಯ ಈ ಸುದ್ದಿ ಎಲ್ಲೆಡೆ ವೈರಲ್ (Viral)​ ಆಗಿದೆ.

ಬಿಸ್ವಂತ್​ ಸರ್ಕಾರ್​  6 ಮಕ್ಕಳು, 23 ಮೊಮ್ಮಕ್ಕಳು, 10 ಮಂದಿ ಮರಿ ಮೊಮ್ಮಕ್ಕಳ ಹಾಗೂ 6 ಮಂದಿ ಸೊಸೆಯಂದಿರನ್ನು ಹೊಂದಿದ್ದಾರೆ. ಬಿಸ್ವಂತ್​ ಅವರ ಮರು ಮದುವೆ ಮದುವೆ ಮತ್ತು 100ನೇ ವರ್ಷದ ಜನ್ಮದಿನವನ್ನು ಕುಟುಂಬ ಅದ್ದೂರಿಯಾಗಿ ಆಚರಿಸಿದೆ.  ಬಿಸ್ವಂತ್​ ಅವರ ಮಕ್ಕಳು ಮತ್ತು ಅವರ ಕುಟುಂಬ ಪಶ್ಚಿಮ ಬಂಗಾಳ ಬಿಟ್ಟು ಬೇರೆ ರಾಜ್ಯಗಳಲ್ಲಿ ನೆಲೆಸಿದ್ದು ಇ ವಿಶೇಷ ದಿನವನ್ನು ಆಚರಿಸಲು ಹಳ್ಳಿಗೆ ಮರಳಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ಇಂಡಿಯಾ.ಕಾಮ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ವಿಶೇಷ ಅಚರಣೆಯ ಕುರಿತು ಬಿಸ್ವಂತ್​ ಅವರ ಕುಟುಂಬ ಮಾತನಾಡಿದ್ದು, ನಿಜವಾದ ಮದುವೆಯಲ್ಲಿ ಹೇಗೆ ವಧು ಗಂಡನ ಮನೆಗೆ ಪ್ರವೇಶಿಸುತ್ತಾಳೋ ಅದೆ ರೀತಿ ಮದುವೆಯನ್ನು ಮಾಡಲಾಗಿದೆ.  ವರನ ಮನೆಯಿಂದ 5 ಕಿಮೀ ದೂರದಿಂದ ವಧುವನ್ನು ಕರೆದುಕೊಂಡು ಬರುವಂತೆ ಮಾಡಿ, ಎಲ್ಲಾ ರೀತಿಯ ಸಂಪ್ರದಾಯಗಳನ್ನು ಆಚರಣೆ ಮಾಡುವ ಮೂಲಕ ಮದುವೆಯನ್ನು ಮಾಡಲಾಗಿದೆ. ವರನನ್ನು ಕುದುರೆಗಾಡಿಯಲ್ಲಿ ಕರೆತಂದು, ಹಾರ ಬದಲಾಯಿಸಿಕೊಳ್ಳುವ ರೀತಿಯಲ್ಲಿಯೇ ಆಚರಿಸಲಾಗಿದೆ ಎಂದಿದ್ದಾರೆ. ಸದ್ಯ ಈ ವಿಚಾರ  ಎಲ್ಲೆಡೆ ವೈರಲ್​ ಆಗಿದೆ.

 ಇದನ್ನೂ ಓದಿ:

Viral Story: ಬುಟ್ಟಿಗಟ್ಟಲೆ ನಾಣ್ಯಗಳನ್ನು ನೀಡಿ ಸ್ಕೂಟರ್​ ಖರೀದಿಸಿದ ವ್ಯಕ್ತಿ

Published On - 5:11 pm, Fri, 18 February 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ