AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 6 ವರ್ಷಗಳಿಂದ ಮೊಸಳೆಯ ಕುತ್ತಿಗೆಯಲ್ಲಿ ಸಿಲುಕಿದ್ದ ​ಟೈರ್​ ಹೊರತೆಗೆದ ವ್ಯಕ್ತಿ

ಮೊಸಳೆಯ ಕುತ್ತಿಗೆ ಸಿಲಿಕಿದ್ದ ಬೈಕ್​ನ ಟೈರ್​ಅನ್ನು ಬರೋಬ್ಬರಿ 6 ವರ್ಷಗಳ ಬಳಿಕ ಹೊರತೆಗೆದು ಮೊಸಳೆಯನ್ನು ರಕ್ಷಿಸಲಾಗಿದೆ. ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.

ಬರೋಬ್ಬರಿ 6 ವರ್ಷಗಳಿಂದ ಮೊಸಳೆಯ ಕುತ್ತಿಗೆಯಲ್ಲಿ ಸಿಲುಕಿದ್ದ ​ಟೈರ್​ ಹೊರತೆಗೆದ ವ್ಯಕ್ತಿ
ಮೊಸಳೆ
TV9 Web
| Edited By: |

Updated on: Feb 09, 2022 | 12:09 PM

Share

ಪ್ರಾಣಿಗಳು ಅದೆಷ್ಟೇ ಭಯಾನಕವಾಗಿದ್ದರೂ ಕೆಲವೊಮ್ಮೆ ಜೀವಸಂಕಟಕ್ಕೆ ಒಳಗಾಗಿಬಿಡುತ್ತವೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ರಕ್ಷಿಸುವುದು ಮಾನವರ ಹೊಣೆಯಾಗಿರುತ್ತದೆ. ಇದೀಗ ಮೊಸಳೆಯ (Crocodile)ಕುತ್ತಿಗೆ ಸಿಲಿಕಿದ್ದ ಬೈಕ್​ನ ಟೈರ್​ಅನ್ನು (Tyre) ಬರೋಬ್ಬರಿ 6 ವರ್ಷಗಳ ಬಳಿಕ ಹೊರತೆಗೆದು ಮೊಸಳೆಯನ್ನು ರಕ್ಷಿಸಲಾಗಿದೆ. ಈ ಘಟನೆ ಇಂಡೋನೇಷ್ಯಾದಲ್ಲಿ (Indonesia)ನಡೆದಿದೆ. ವ್ಯಕ್ತಿಯೊಬ್ಬರು ಮೊಸಳೆಯನ್ನು ಹಿಡಿದು ಟೈರ್​ಅನ್ನು ಹೊರತೆಗೆದಿದ್ದಾರೆ. ವ್ಯಕ್ತಿಯ ಧೈರ್ಯಕ್ಕೆ  ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಇಂಡೋನೇಷ್ಯಾದ ತಿಲಿ ಎನ್ನುವ 35 ವರ್ಷದ ಪ್ರಾಣಿ ಪ್ರಿಯ ವ್ಯಕ್ತಿ ಮೊಸಳೆಯ ಕುತ್ತಿಗೆಗೆ ಸಿಲುಕಿದ್ದ ಟೈರ್​​ಅನ್ನು ಹೊರತೆಗೆದಿದ್ದಾರೆ. 2018ರಲ್ಲಿ ಮೊಸಳೆಯ ಕುತ್ತಿಗೆಗೆ ಟೈರ್​ ಸಿಲುಕಿಕೊಂಡಿತ್ತು ಎನ್ನಲಾಗಿದೆ. ಈ ಹಿಂದೆ ಹಲವರು ಮೊಸಳೆಯನ್ನು ಟೈರ್​ನಿಂದ ಮುಕ್ತಿಗೊಳಿಸಲು ಯತ್ನಿಸಿದ್ದು, ವಿಫಲರಾಗಿದ್ದಾರೆ ಎನ್ನಲಾಗಿದೆ. ಇದೀಗ 35 ವರ್ಷದ ತಿಲಿ ಎನ್ನುವ ವ್ಯಕ್ತಿ ಮರದ ದಿಮ್ಮಿಯ ಮೂಲಕ ಮೊಸಳೆಯನ್ನು ಸೆರೆಹಿಡಿದು, ಕಣ್ಣಿಗೆ ಬಟ್ಟೆಯನ್ನು ಸುತ್ತಿ, ಗರಗಸದ ಮೂಲಕ ಟೈರ್​ಅನ್ನು ಹೊರತಗೆದಿದ್ದಾರೆ.

ಈ ಕುರಿತು ತಿಲಿ ಮಾತನಾಡಿ. ನಾನು ಒಬ್ಬನೇ ಮೊಸಳೆಯನ್ನು ಸೆರೆ ಹಿಡಿದೆ. ಸ್ಥಳೀಯರನ್ನು ಸಹಾಯ ಕೇಳಿದರೂ ಅವರು ಭಯಗೊಂಡು ಸಹಾಯಕ್ಕೆ ಮುಂದಾಗಲಿಲ್ಲ ಹೀಗಾಗಿ ಮರದ ದಿಮ್ಮಿಗಳನ್ನು ಅಳವಡಿಸಿಕೊಂಡು ಮೊಸಳೆಯನ್ನು ಸೆರೆಹಿಡಿದು ರಕ್ಷಿಸಲಾಗಿದೆ ಎಂದಿದ್ದಾರೆ.  ಮೊಸಳೆಯ ಕುತ್ತಿಗೆಯಿಂದ ಟೈರ್​ಅನ್ನು ತೆಗೆದ ಬಳಿಕ ಮತ್ತೆ ನೀರಿಗೆ ಬಿಡಲಾಗಿದೆ ಎಂದು ವರದಿ ತಿಳಿಸಿದೆ. ಈ ಹಿಂದೆ ನ್ಯಾಷನಲ್​ ಜಿಯೋಗ್ರಫಿಯ ಆ್ಯಂಕರ್​ ಒಬ್ಬರು ಮೊಸಳೆಯನ್ನು ರಕ್ಷಿಸಲು ಯತ್ನಿಸಿದ್ದರು. ಆದರೆ ಮೊಸಳೆ ಹಲವು ಬಾರಿ ಕಣ್ಮರೆಯಾಗಿದ್ದು, ಟೈರ್​ಅನ್ನು ಹೊರತೆಗೆಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ:

Viral News: ಉದ್ಯೋಗಿಗಳಿಗೆ ಧನ್ಯವಾದ ಹೇಳಲು 1 ಕೋಟಿ ರೂ.ಗಳ ಟೂರ್​ ಪ್ಯಾಕೇಜ್​ ನೀಡಿದ ಕಂಪನಿ

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!