AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 6 ವರ್ಷಗಳಿಂದ ಮೊಸಳೆಯ ಕುತ್ತಿಗೆಯಲ್ಲಿ ಸಿಲುಕಿದ್ದ ​ಟೈರ್​ ಹೊರತೆಗೆದ ವ್ಯಕ್ತಿ

ಮೊಸಳೆಯ ಕುತ್ತಿಗೆ ಸಿಲಿಕಿದ್ದ ಬೈಕ್​ನ ಟೈರ್​ಅನ್ನು ಬರೋಬ್ಬರಿ 6 ವರ್ಷಗಳ ಬಳಿಕ ಹೊರತೆಗೆದು ಮೊಸಳೆಯನ್ನು ರಕ್ಷಿಸಲಾಗಿದೆ. ಈ ಘಟನೆ ಇಂಡೋನೇಷ್ಯಾದಲ್ಲಿ ನಡೆದಿದೆ.

ಬರೋಬ್ಬರಿ 6 ವರ್ಷಗಳಿಂದ ಮೊಸಳೆಯ ಕುತ್ತಿಗೆಯಲ್ಲಿ ಸಿಲುಕಿದ್ದ ​ಟೈರ್​ ಹೊರತೆಗೆದ ವ್ಯಕ್ತಿ
ಮೊಸಳೆ
TV9 Web
| Edited By: |

Updated on: Feb 09, 2022 | 12:09 PM

Share

ಪ್ರಾಣಿಗಳು ಅದೆಷ್ಟೇ ಭಯಾನಕವಾಗಿದ್ದರೂ ಕೆಲವೊಮ್ಮೆ ಜೀವಸಂಕಟಕ್ಕೆ ಒಳಗಾಗಿಬಿಡುತ್ತವೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ರಕ್ಷಿಸುವುದು ಮಾನವರ ಹೊಣೆಯಾಗಿರುತ್ತದೆ. ಇದೀಗ ಮೊಸಳೆಯ (Crocodile)ಕುತ್ತಿಗೆ ಸಿಲಿಕಿದ್ದ ಬೈಕ್​ನ ಟೈರ್​ಅನ್ನು (Tyre) ಬರೋಬ್ಬರಿ 6 ವರ್ಷಗಳ ಬಳಿಕ ಹೊರತೆಗೆದು ಮೊಸಳೆಯನ್ನು ರಕ್ಷಿಸಲಾಗಿದೆ. ಈ ಘಟನೆ ಇಂಡೋನೇಷ್ಯಾದಲ್ಲಿ (Indonesia)ನಡೆದಿದೆ. ವ್ಯಕ್ತಿಯೊಬ್ಬರು ಮೊಸಳೆಯನ್ನು ಹಿಡಿದು ಟೈರ್​ಅನ್ನು ಹೊರತೆಗೆದಿದ್ದಾರೆ. ವ್ಯಕ್ತಿಯ ಧೈರ್ಯಕ್ಕೆ  ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

ಇಂಡೋನೇಷ್ಯಾದ ತಿಲಿ ಎನ್ನುವ 35 ವರ್ಷದ ಪ್ರಾಣಿ ಪ್ರಿಯ ವ್ಯಕ್ತಿ ಮೊಸಳೆಯ ಕುತ್ತಿಗೆಗೆ ಸಿಲುಕಿದ್ದ ಟೈರ್​​ಅನ್ನು ಹೊರತೆಗೆದಿದ್ದಾರೆ. 2018ರಲ್ಲಿ ಮೊಸಳೆಯ ಕುತ್ತಿಗೆಗೆ ಟೈರ್​ ಸಿಲುಕಿಕೊಂಡಿತ್ತು ಎನ್ನಲಾಗಿದೆ. ಈ ಹಿಂದೆ ಹಲವರು ಮೊಸಳೆಯನ್ನು ಟೈರ್​ನಿಂದ ಮುಕ್ತಿಗೊಳಿಸಲು ಯತ್ನಿಸಿದ್ದು, ವಿಫಲರಾಗಿದ್ದಾರೆ ಎನ್ನಲಾಗಿದೆ. ಇದೀಗ 35 ವರ್ಷದ ತಿಲಿ ಎನ್ನುವ ವ್ಯಕ್ತಿ ಮರದ ದಿಮ್ಮಿಯ ಮೂಲಕ ಮೊಸಳೆಯನ್ನು ಸೆರೆಹಿಡಿದು, ಕಣ್ಣಿಗೆ ಬಟ್ಟೆಯನ್ನು ಸುತ್ತಿ, ಗರಗಸದ ಮೂಲಕ ಟೈರ್​ಅನ್ನು ಹೊರತಗೆದಿದ್ದಾರೆ.

ಈ ಕುರಿತು ತಿಲಿ ಮಾತನಾಡಿ. ನಾನು ಒಬ್ಬನೇ ಮೊಸಳೆಯನ್ನು ಸೆರೆ ಹಿಡಿದೆ. ಸ್ಥಳೀಯರನ್ನು ಸಹಾಯ ಕೇಳಿದರೂ ಅವರು ಭಯಗೊಂಡು ಸಹಾಯಕ್ಕೆ ಮುಂದಾಗಲಿಲ್ಲ ಹೀಗಾಗಿ ಮರದ ದಿಮ್ಮಿಗಳನ್ನು ಅಳವಡಿಸಿಕೊಂಡು ಮೊಸಳೆಯನ್ನು ಸೆರೆಹಿಡಿದು ರಕ್ಷಿಸಲಾಗಿದೆ ಎಂದಿದ್ದಾರೆ.  ಮೊಸಳೆಯ ಕುತ್ತಿಗೆಯಿಂದ ಟೈರ್​ಅನ್ನು ತೆಗೆದ ಬಳಿಕ ಮತ್ತೆ ನೀರಿಗೆ ಬಿಡಲಾಗಿದೆ ಎಂದು ವರದಿ ತಿಳಿಸಿದೆ. ಈ ಹಿಂದೆ ನ್ಯಾಷನಲ್​ ಜಿಯೋಗ್ರಫಿಯ ಆ್ಯಂಕರ್​ ಒಬ್ಬರು ಮೊಸಳೆಯನ್ನು ರಕ್ಷಿಸಲು ಯತ್ನಿಸಿದ್ದರು. ಆದರೆ ಮೊಸಳೆ ಹಲವು ಬಾರಿ ಕಣ್ಮರೆಯಾಗಿದ್ದು, ಟೈರ್​ಅನ್ನು ಹೊರತೆಗೆಯಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ:

Viral News: ಉದ್ಯೋಗಿಗಳಿಗೆ ಧನ್ಯವಾದ ಹೇಳಲು 1 ಕೋಟಿ ರೂ.ಗಳ ಟೂರ್​ ಪ್ಯಾಕೇಜ್​ ನೀಡಿದ ಕಂಪನಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ