AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುಳುಗುತ್ತಿದ್ದ ನಾಯಿಯನ್ನು ರಕ್ಷಿಸಿದ ಮಾಲೀಕ: ವಿಡಿಯೋ ವೈರಲ್​

ಅರಿಝೋನಾದಲ್ಲಿ ಈ ಘಟನೆ ನಡೆದಿದ್ದು, ಡಿಸೆಂಬರ್​ 28ರಂದು  ವಿಡಿಯೋ ಹಂಚಿಕೊಳ್ಳಲಾಗಿದೆ. 41 ಲಕ್ಷಕ್ಕೂ  ಹೆಚ್ಚು ವೀಕ್ಷಣೆ ಪಡೆದ ವೀಡಿಯೊ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

Viral Video: ಮುಳುಗುತ್ತಿದ್ದ ನಾಯಿಯನ್ನು ರಕ್ಷಿಸಿದ ಮಾಲೀಕ: ವಿಡಿಯೋ ವೈರಲ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Jan 07, 2022 | 4:27 PM

Share

ಮನೆಯಲ್ಲಿ  ಸಾಕಿದ ನಾಯಿಗಳೊಂದಿಗೆ ಆಟವಾಡುವುದು ಒಂದು ಖುಷಿಯ ಸಂಗತಿ. ತಮ್ಮದೇ ರೀತಿಯಲ್ಲಿ ಒಡೆಯನ ಮೇಲೆ ಪ್ರೀತಿ ತೋರಿಸುವ ನಾಯಿಗಳ ತುಂಟಾಟ, ಹುಡುಗಾಟ ಅನುಭವಿಸಿದವರಿಗೇ ಗೊತ್ತು. ನಾಯಿಗಳು ಹೇಗೆ ಮಾಲೀಕನಿಗೆ ಕಷ್ಟವಾದರೆ ಸಂಕಟಪಡುತ್ತವೆಯೋ ಅದೇ ರೀತಿ ಮಾಲೀಕ ಕೂಡ ತಾನು ಸಾಕಿದ ನಾಯಿಗಳಿಗೆ ನೋವಾದರೆ ಸಹಿಸುವುದಿಲ್ಲ. ಇಲ್ಲೊಂದು ಹೃದಯಸ್ಪರ್ಶಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನಾಯಿಯೊಂದು ನೀರಿನಲ್ಲಿ ಮುಳುಗುತ್ತಿರುವ ವೇಳೆ ಒಡೆಯ ತಕ್ಷಣ ತೆರಳಿ ನಾಯಿಯನ್ನು ನೀರಿನಿಂದ ಎತ್ತಿಕೊಂಡು ಬಂದು ರಕ್ಷಿಸಿದ ವೀಡಿಯೋ ವೈರಲ್​ ಆಗಿದೆ.

ವಿಡಿಯೋದ ಆರಂಭದಲ್ಲಿ ಮೂರ್ನಾಲ್ಕು ನಾಯಿಗಳು  ಒಡೆಯನ ಜತೆಗೆ ನೀರಿನ ಬಳಿ ಆಟವಾಡುತ್ತಿರುತ್ತವೆ. ಒಡೆಯ ಎಸೆದ ಬಾಲ್​ಅನ್ನು ತಂದುಕೊಡುವ ಮೂಲಕ ತಮ್ಮದೇ ಪ್ರಪಂಚದಲ್ಲಿ ಮುಳುಗಿರುತ್ತವೆ. ಆದರೆ ಒಂದು ಬಾರಿ ಎಸೆದ ಬಾಲ್​ ಅನ್ನು ಹಿಡಿಯಲು ಹೋದ ನಾಯಿಯೊಂದು ಮರಳಿ ದಡಕ್ಕೆ ಬಾರದೆ ನೀರಿನ ಮಧ್ಯದಲ್ಲಿ ಸಿಲುಕಿ ಒದ್ದಾಡುತ್ತಿರುವುದು ಕಾಣಿಸುತ್ತದೆ. ಇದನ್ನು ಕಂಡು ದಡದಲ್ಲಿದ್ದ ಮಾಲೀಕ ತಕ್ಷಣ ನೀರಿಗಿಳಿದು ಮುಳುಗುತ್ತಿದ್ದ ನಾಯಿಯನ್ನು ಮೇಲೆತ್ತಿಕೊಂಡು ಬರುತ್ತಾನೆ. ಇದರ ವೀಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಹಂಚಿಕೊಂಡಿರುವ ವಿಡಿಯೋ ನೆಟ್ಟಿಗರನ್ನು ಸೆಳೆದಿದೆ. ಸಾಕು ನಾಯಿಯ ಮೇಲಿನ ಪ್ರೀತಿ ಕಂಡು ನೆಟ್ಟಿಗರು ಶ್ಲಾಘಿಸಿದ್ದಾರೆ. ಅರಿಝೋನಾದಲ್ಲಿ ಈ ಘಟನೆ ನಡೆದಿದ್ದು, ಡಿಸೆಂಬರ್​ 28ರಂದು  ವಿಡಿಯೋ ಹಂಚಿಕೊಳ್ಳಲಾಗಿದೆ. 41 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

ಇದನ್ನೂ ಓದಿ:

Viral Video: ಬೀದಿ ಪಾಲಾಗಿ ಫುಟ್​ಪಾತ್​ನಲ್ಲಿ ಕುಳಿತಿದ್ದ ವ್ಯಕ್ತಿಯನ್ನು ತಬ್ಬಿಕೊಂಡ ನಾಯಿ; ವಿಡಿಯೋ ವೈರಲ್

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ