AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮುಳುಗುತ್ತಿದ್ದ ನಾಯಿಯನ್ನು ರಕ್ಷಿಸಿದ ಮಾಲೀಕ: ವಿಡಿಯೋ ವೈರಲ್​

ಅರಿಝೋನಾದಲ್ಲಿ ಈ ಘಟನೆ ನಡೆದಿದ್ದು, ಡಿಸೆಂಬರ್​ 28ರಂದು  ವಿಡಿಯೋ ಹಂಚಿಕೊಳ್ಳಲಾಗಿದೆ. 41 ಲಕ್ಷಕ್ಕೂ  ಹೆಚ್ಚು ವೀಕ್ಷಣೆ ಪಡೆದ ವೀಡಿಯೊ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

Viral Video: ಮುಳುಗುತ್ತಿದ್ದ ನಾಯಿಯನ್ನು ರಕ್ಷಿಸಿದ ಮಾಲೀಕ: ವಿಡಿಯೋ ವೈರಲ್​
ವಿಡಿಯೋದಿಂದ ಸೆರೆಹಿಡಿದ ಚಿತ್ರ
TV9 Web
| Edited By: |

Updated on: Jan 07, 2022 | 4:27 PM

Share

ಮನೆಯಲ್ಲಿ  ಸಾಕಿದ ನಾಯಿಗಳೊಂದಿಗೆ ಆಟವಾಡುವುದು ಒಂದು ಖುಷಿಯ ಸಂಗತಿ. ತಮ್ಮದೇ ರೀತಿಯಲ್ಲಿ ಒಡೆಯನ ಮೇಲೆ ಪ್ರೀತಿ ತೋರಿಸುವ ನಾಯಿಗಳ ತುಂಟಾಟ, ಹುಡುಗಾಟ ಅನುಭವಿಸಿದವರಿಗೇ ಗೊತ್ತು. ನಾಯಿಗಳು ಹೇಗೆ ಮಾಲೀಕನಿಗೆ ಕಷ್ಟವಾದರೆ ಸಂಕಟಪಡುತ್ತವೆಯೋ ಅದೇ ರೀತಿ ಮಾಲೀಕ ಕೂಡ ತಾನು ಸಾಕಿದ ನಾಯಿಗಳಿಗೆ ನೋವಾದರೆ ಸಹಿಸುವುದಿಲ್ಲ. ಇಲ್ಲೊಂದು ಹೃದಯಸ್ಪರ್ಶಿ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ನಾಯಿಯೊಂದು ನೀರಿನಲ್ಲಿ ಮುಳುಗುತ್ತಿರುವ ವೇಳೆ ಒಡೆಯ ತಕ್ಷಣ ತೆರಳಿ ನಾಯಿಯನ್ನು ನೀರಿನಿಂದ ಎತ್ತಿಕೊಂಡು ಬಂದು ರಕ್ಷಿಸಿದ ವೀಡಿಯೋ ವೈರಲ್​ ಆಗಿದೆ.

ವಿಡಿಯೋದ ಆರಂಭದಲ್ಲಿ ಮೂರ್ನಾಲ್ಕು ನಾಯಿಗಳು  ಒಡೆಯನ ಜತೆಗೆ ನೀರಿನ ಬಳಿ ಆಟವಾಡುತ್ತಿರುತ್ತವೆ. ಒಡೆಯ ಎಸೆದ ಬಾಲ್​ಅನ್ನು ತಂದುಕೊಡುವ ಮೂಲಕ ತಮ್ಮದೇ ಪ್ರಪಂಚದಲ್ಲಿ ಮುಳುಗಿರುತ್ತವೆ. ಆದರೆ ಒಂದು ಬಾರಿ ಎಸೆದ ಬಾಲ್​ ಅನ್ನು ಹಿಡಿಯಲು ಹೋದ ನಾಯಿಯೊಂದು ಮರಳಿ ದಡಕ್ಕೆ ಬಾರದೆ ನೀರಿನ ಮಧ್ಯದಲ್ಲಿ ಸಿಲುಕಿ ಒದ್ದಾಡುತ್ತಿರುವುದು ಕಾಣಿಸುತ್ತದೆ. ಇದನ್ನು ಕಂಡು ದಡದಲ್ಲಿದ್ದ ಮಾಲೀಕ ತಕ್ಷಣ ನೀರಿಗಿಳಿದು ಮುಳುಗುತ್ತಿದ್ದ ನಾಯಿಯನ್ನು ಮೇಲೆತ್ತಿಕೊಂಡು ಬರುತ್ತಾನೆ. ಇದರ ವೀಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ. ಯುಟ್ಯೂಬ್​ನಲ್ಲಿ ಹಂಚಿಕೊಂಡಿರುವ ವಿಡಿಯೋ ನೆಟ್ಟಿಗರನ್ನು ಸೆಳೆದಿದೆ. ಸಾಕು ನಾಯಿಯ ಮೇಲಿನ ಪ್ರೀತಿ ಕಂಡು ನೆಟ್ಟಿಗರು ಶ್ಲಾಘಿಸಿದ್ದಾರೆ. ಅರಿಝೋನಾದಲ್ಲಿ ಈ ಘಟನೆ ನಡೆದಿದ್ದು, ಡಿಸೆಂಬರ್​ 28ರಂದು  ವಿಡಿಯೋ ಹಂಚಿಕೊಳ್ಳಲಾಗಿದೆ. 41 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್​ ಪಡೆದಿದೆ.

ಇದನ್ನೂ ಓದಿ:

Viral Video: ಬೀದಿ ಪಾಲಾಗಿ ಫುಟ್​ಪಾತ್​ನಲ್ಲಿ ಕುಳಿತಿದ್ದ ವ್ಯಕ್ತಿಯನ್ನು ತಬ್ಬಿಕೊಂಡ ನಾಯಿ; ವಿಡಿಯೋ ವೈರಲ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ