AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇನ್ನೊಂಚೂರು ಜಾರಿದ್ದರೂ ಸಿಂಹಕ್ಕೆ ಆಹಾರವಾಗುತ್ತಿದ್ದ ವ್ಯಕ್ತಿ; ಹೈದರಾಬಾದ್​ ಮೃಗಾಲಯದಲ್ಲಿ ಘಟನೆ

ಬಂಡೆಯ ಮೇಲೆ ವ್ಯಕ್ತಿ ಕುಳಿತಿದ್ದರೆ ಕೆಳಗೆ ನಿಂತ ದೈತ್ಯ ಸಿಂಹವೊಂದು ಆತನನ್ನೇ ನೋಡುತ್ತಿದೆ. ಹೈದರಾಬಾದ್​ ಮೃಗಾಲಯದಲ್ಲಿ ನಡೆದ ಘಟನೆಯ ಈ ಭಯಾನಕ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

Video: ಇನ್ನೊಂಚೂರು ಜಾರಿದ್ದರೂ ಸಿಂಹಕ್ಕೆ ಆಹಾರವಾಗುತ್ತಿದ್ದ ವ್ಯಕ್ತಿ; ಹೈದರಾಬಾದ್​ ಮೃಗಾಲಯದಲ್ಲಿ ಘಟನೆ
ಬಂಡೆಯ ಮೇಲೆ ವ್ಯಕ್ತಿ ಕುಳಿತಿದ್ದರೆ ಕೆಳಗೆ ನಿಂತ ದೈತ್ಯ ಸಿಂಹವೊಂದು ಆತನನ್ನೇ ನೋಡುತ್ತಿದೆ
TV9 Web
| Updated By: shruti hegde|

Updated on:Nov 24, 2021 | 10:21 AM

Share

ಹೈದರಾಬಾದ್​ನ (Hyderabad zoo) ನೆಹರೂ ಝೂವಲಾಜಿಕಲ್ ಪಾರ್ಕ್‌ನಲ್ಲಿ ಪ್ರವೇಶವಿಲ್ಲದ ಪ್ರದೇಶವಾದ ಸಿಂಹ ವಾಸಿಸುವ ಸ್ಥಳದಲ್ಲಿ ಅಲೆದಾಡುತ್ತಿದ್ದ ವ್ಯಕ್ತಿಯನ್ನು ರಕ್ಷಾಣಾ ಸಿಬ್ಬಂದಿ ರಕ್ಷಿಸಿದ್ದಾರೆ. 31 ವರ್ಷದ ವ್ಯಕ್ತಿಯೋರ್ವ ಹೈದರಾಬಾದ್​ನ ಮೃಗಾಲಯದೊಳಗೆ ನುಗ್ಗಿದ್ದಾನೆ. ಸಿಂಹದ (Lion) ಗುಹೆಯ ಮೇಲೆ ಕುಳಿತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಂಡೆಯ ಮೇಲೆ ವ್ಯಕ್ತಿ ಕುಳಿತಿದ್ದರೆ ಕೆಳಗಿನಿಂದ ದೈತ್ಯ ಸಿಂಹವೊಂದು ಆತನನ್ನೇ ನೋಡುತ್ತಿದೆ. ಈ ಭಯಾನಕ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ (Social Media) ಫುಲ್ ವೈರಲ್ ಆಗಿದೆ.

ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮನುಷ್ಯನು ಎತ್ತರದ ಬಂಡೆಯ ಮೇಲೆ ಕುಳಿತಿದ್ದಾನೆ. ಸಿಂಹವು ವ್ಯಕ್ತಿಯನ್ನೇ ದಿಟ್ಟಿಸಿ ನೋಡುತ್ತಿದೆ. ಮೃಗಾಲಯದಲ್ಲಿ ನೆರೆದಿದ್ದ ಜನರು ಕಿರುಚಾಡುತ್ತಿದ್ದು, ಜಾಗರೂಕರಾಗಿರಿ ಎಂದು ಕೂಗುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದು. ವ್ಯಕ್ತಿಯನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿ ಆತನ ವಿರುದ್ಧ ದೂರು ದಾಖಲಿಸಲಾಗಿದೆ. ವ್ಯಕ್ತಿಯ ಹೆಸರು ಸಾಯಿ ಕುಮಾರ್ ಎಂಬುದು ತಿಳಿದು ಬಂದಿದೆ.

ಹೈದರಾಬಾದ್​ ನೆಹರೂ ಝೂವಾಲಜಿಕಲ್ ಪಾರ್ಕ್ ಹೇಳಿರುವ ಪ್ರಕಾರ, ಸಾಯಿ ಕುಮಾರ್, ಸಾರ್ವನಿಕ ಪ್ರವೇಶವಿಲ್ಲದ ಸಿಂಹದ ಆವರಣದ ಒಳಗೆ ಜಿಗಿದಿದ್ದಾರೆ. ಬಳಿಕ ಬಂಡೆಯ ಮೇಲೆ ನಡೆಕೊಂಡು ಹೋಗಿದ್ದಾರೆ ಎಂದು ಹೇಳಿದೆ. ಹೈದರಾಬಾದ್ ನೆಹರು ಝೂವಾಲಜಿಕಲ್ ಪಾರ್ಕ್​ನಲ್ಲಿ ಸಂಪೂರ್ಣವಾಗಿ ನಿಷೇಧಿತ ಪ್ರದೇಶವಾಗಿರುವ ಸಿಂಹದ ಗುಹೆಯ ಬಳಿ ವ್ಯಕ್ತಿ ಪ್ರವೇಶ ಮಾಡಿದ್ದಾನೆ. ವ್ಯಕ್ತಿಯನ್ನು ಅಪಾಯದಿಂದ ರಕ್ಷಿಸಿದ ರಕ್ಷಣಾ ಸಿಬ್ಬಂದಿ ಬಹದ್ದೂರ್​ಪುರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Viral Video: ಸಫಾರಿಗೆ ಹೋದಾಗ ಸಿಂಹವನ್ನು ಕೆಣಕಿದ ವ್ಯಕ್ತಿ; ಆಮೇಲೇನಾಯ್ತು? ವಿಡಿಯೋ ನೋಡಿ

Shocking Video: ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಬಟ್ಟೆ ಅಂಗಡಿ ಒಳಗೆ ನುಗ್ಗಿದ ಬೈಕ್​; ಶಾಕಿಂಗ್​ ವಿಡಿಯೊ ವೈರಲ್​

Published On - 10:18 am, Wed, 24 November 21

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಪುಣೆಯಲ್ಲಿ 2 ಟ್ರಕ್‌ಗಳ ನಡುವೆ ಸಿಕ್ಕಿ ಸುಟ್ಟು ಕರಕಲಾದ ಕಾರು; 8 ಜನ ಸಾವು
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್
ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; MLC ಸುನಿಲ್ ಸಿಂಗ್