Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇನ್ನೊಂಚೂರು ಜಾರಿದ್ದರೂ ಸಿಂಹಕ್ಕೆ ಆಹಾರವಾಗುತ್ತಿದ್ದ ವ್ಯಕ್ತಿ; ಹೈದರಾಬಾದ್​ ಮೃಗಾಲಯದಲ್ಲಿ ಘಟನೆ

ಬಂಡೆಯ ಮೇಲೆ ವ್ಯಕ್ತಿ ಕುಳಿತಿದ್ದರೆ ಕೆಳಗೆ ನಿಂತ ದೈತ್ಯ ಸಿಂಹವೊಂದು ಆತನನ್ನೇ ನೋಡುತ್ತಿದೆ. ಹೈದರಾಬಾದ್​ ಮೃಗಾಲಯದಲ್ಲಿ ನಡೆದ ಘಟನೆಯ ಈ ಭಯಾನಕ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.

Video: ಇನ್ನೊಂಚೂರು ಜಾರಿದ್ದರೂ ಸಿಂಹಕ್ಕೆ ಆಹಾರವಾಗುತ್ತಿದ್ದ ವ್ಯಕ್ತಿ; ಹೈದರಾಬಾದ್​ ಮೃಗಾಲಯದಲ್ಲಿ ಘಟನೆ
ಬಂಡೆಯ ಮೇಲೆ ವ್ಯಕ್ತಿ ಕುಳಿತಿದ್ದರೆ ಕೆಳಗೆ ನಿಂತ ದೈತ್ಯ ಸಿಂಹವೊಂದು ಆತನನ್ನೇ ನೋಡುತ್ತಿದೆ
Follow us
TV9 Web
| Updated By: shruti hegde

Updated on:Nov 24, 2021 | 10:21 AM

ಹೈದರಾಬಾದ್​ನ (Hyderabad zoo) ನೆಹರೂ ಝೂವಲಾಜಿಕಲ್ ಪಾರ್ಕ್‌ನಲ್ಲಿ ಪ್ರವೇಶವಿಲ್ಲದ ಪ್ರದೇಶವಾದ ಸಿಂಹ ವಾಸಿಸುವ ಸ್ಥಳದಲ್ಲಿ ಅಲೆದಾಡುತ್ತಿದ್ದ ವ್ಯಕ್ತಿಯನ್ನು ರಕ್ಷಾಣಾ ಸಿಬ್ಬಂದಿ ರಕ್ಷಿಸಿದ್ದಾರೆ. 31 ವರ್ಷದ ವ್ಯಕ್ತಿಯೋರ್ವ ಹೈದರಾಬಾದ್​ನ ಮೃಗಾಲಯದೊಳಗೆ ನುಗ್ಗಿದ್ದಾನೆ. ಸಿಂಹದ (Lion) ಗುಹೆಯ ಮೇಲೆ ಕುಳಿತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಂಡೆಯ ಮೇಲೆ ವ್ಯಕ್ತಿ ಕುಳಿತಿದ್ದರೆ ಕೆಳಗಿನಿಂದ ದೈತ್ಯ ಸಿಂಹವೊಂದು ಆತನನ್ನೇ ನೋಡುತ್ತಿದೆ. ಈ ಭಯಾನಕ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ (Social Media) ಫುಲ್ ವೈರಲ್ ಆಗಿದೆ.

ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮನುಷ್ಯನು ಎತ್ತರದ ಬಂಡೆಯ ಮೇಲೆ ಕುಳಿತಿದ್ದಾನೆ. ಸಿಂಹವು ವ್ಯಕ್ತಿಯನ್ನೇ ದಿಟ್ಟಿಸಿ ನೋಡುತ್ತಿದೆ. ಮೃಗಾಲಯದಲ್ಲಿ ನೆರೆದಿದ್ದ ಜನರು ಕಿರುಚಾಡುತ್ತಿದ್ದು, ಜಾಗರೂಕರಾಗಿರಿ ಎಂದು ಕೂಗುತ್ತಿರುವುದನ್ನು ವಿಡಿಯೋದಲ್ಲಿ ಗಮನಿಸಬಹುದು. ವ್ಯಕ್ತಿಯನ್ನು ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ಆ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿ ಆತನ ವಿರುದ್ಧ ದೂರು ದಾಖಲಿಸಲಾಗಿದೆ. ವ್ಯಕ್ತಿಯ ಹೆಸರು ಸಾಯಿ ಕುಮಾರ್ ಎಂಬುದು ತಿಳಿದು ಬಂದಿದೆ.

ಹೈದರಾಬಾದ್​ ನೆಹರೂ ಝೂವಾಲಜಿಕಲ್ ಪಾರ್ಕ್ ಹೇಳಿರುವ ಪ್ರಕಾರ, ಸಾಯಿ ಕುಮಾರ್, ಸಾರ್ವನಿಕ ಪ್ರವೇಶವಿಲ್ಲದ ಸಿಂಹದ ಆವರಣದ ಒಳಗೆ ಜಿಗಿದಿದ್ದಾರೆ. ಬಳಿಕ ಬಂಡೆಯ ಮೇಲೆ ನಡೆಕೊಂಡು ಹೋಗಿದ್ದಾರೆ ಎಂದು ಹೇಳಿದೆ. ಹೈದರಾಬಾದ್ ನೆಹರು ಝೂವಾಲಜಿಕಲ್ ಪಾರ್ಕ್​ನಲ್ಲಿ ಸಂಪೂರ್ಣವಾಗಿ ನಿಷೇಧಿತ ಪ್ರದೇಶವಾಗಿರುವ ಸಿಂಹದ ಗುಹೆಯ ಬಳಿ ವ್ಯಕ್ತಿ ಪ್ರವೇಶ ಮಾಡಿದ್ದಾನೆ. ವ್ಯಕ್ತಿಯನ್ನು ಅಪಾಯದಿಂದ ರಕ್ಷಿಸಿದ ರಕ್ಷಣಾ ಸಿಬ್ಬಂದಿ ಬಹದ್ದೂರ್​ಪುರ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ:

Viral Video: ಸಫಾರಿಗೆ ಹೋದಾಗ ಸಿಂಹವನ್ನು ಕೆಣಕಿದ ವ್ಯಕ್ತಿ; ಆಮೇಲೇನಾಯ್ತು? ವಿಡಿಯೋ ನೋಡಿ

Shocking Video: ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಬಟ್ಟೆ ಅಂಗಡಿ ಒಳಗೆ ನುಗ್ಗಿದ ಬೈಕ್​; ಶಾಕಿಂಗ್​ ವಿಡಿಯೊ ವೈರಲ್​

Published On - 10:18 am, Wed, 24 November 21

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ