AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸಿದ ಹೃದಯವಂತ; ಮಾನವೀಯತೆ ಇಂದಿಗೂ ಜೀವಂತವಾಗಿದೆ ನೋಡಿ

ಈ ಆಧುನಿಕ ಯುಗದಲ್ಲಿ ಜನರಲ್ಲಿ ದಯೆ, ಮಾನವೀಯ ಮೌಲ್ಯಗಳು ಸತ್ತು ಹೋಗಿವೆ ಎಂದು ಹಲವರು ಹೇಳುತ್ತಿರುತ್ತಾರೆ. ಆದ್ರೆ ಇಲ್ಲೊಂದು ಮಾನವೀಯತೆ ಇಂದಿಗೂ ಜೀವಂತವಾಗಿದೆ ಎಂಬುದಕ್ಕೆ ನಿದರ್ಶನದಂತಿರುವ ವಿಡಿಯೋವೊಂದು ವೈರಲ್‌ ಆಗಿದ್ದು, ಹೃದಯವಂತ ವ್ಯಕ್ತಿಯೊಬ್ಬ ಗಲೀಜು ಎಂದು ಕೂಡಾ ಭಾವಿಸದೆ ಕೊಳಚೆ ನೀರಿಗಿಳಿದು ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸಿದ್ದಾನೆ. ಈತನ ಈ ಮಹತ್‌ ಕಾರ್ಯವನ್ನು ನೆಟ್ಟಿಗರು ಕೊಂಡಾಡಿದ್ದಾರೆ.

Viral: ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸಿದ ಹೃದಯವಂತ; ಮಾನವೀಯತೆ ಇಂದಿಗೂ ಜೀವಂತವಾಗಿದೆ ನೋಡಿ
ವೈರಲ್​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Mar 04, 2025 | 11:50 AM

Share

ಈಗಿನ ಕಾಲದಲ್ಲಿ ರಸ್ತೆ ಬದಿ ಒಂದು ಸಣ್ಣ ಕಸ ಕಂಡ್ರೂ ಛೀ.. ಛೀ… ಇದನ್ಯಾಕೆ ನಾನು ಎತ್ತಿ ಕಸದ ಬುಟ್ಟಿಗೆ ಹಾಕಬೇಕು ಎಂದು ಮೂಗು ಮುರಿಯುವವರೆ ಹೆಚ್ಚು. ಇಂತಹ ಜನಗಳ ಮಧ್ಯೆ ಇಲ್ಲೊಬ್ಬ ವ್ಯಕ್ತಿ ಕೊಳಚೆ ನೀರಿನಿಂದ ತುಂಬಿದ್ದ ಚರಂಡಿಗಿಳಿದು ಹಸುವನ್ನು ರಕ್ಷಣೆ ಮಾಡಿದ್ದಾನೆ. ಹೌದು ಚರಂಡಿಗೆ ಬಿದ್ದ ಹಸುವೊಂದು, ಮೇಲೆ ಬರಲಾಗದೆ ಪರದಾಡುತ್ತಿತ್ತು. ಈ ದೃಶ್ಯವನ್ನು ಕಂಡು ಈತ ಗಲೀಜು ಇದೆ ಎಂದು ತಲೆ ಕೆಡಿಸಿಕೊಳ್ಳದೆ ಚರಂಡಿಗಿಳಿದು ಗೋವನ್ನು ರಕ್ಷಿಸಿದ್ದಾನೆ. ಈ ದೃಶ್ಯ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ಮಾನವೀಯತೆ ಇಂದಿಗೂ ಜೀವಂತವಾಗಿದೆ ಎಂದು ಈ ವ್ಯಕ್ತಿಯ ಮಹತ್‌ ಕಾರ್ಯವನ್ನು ನೆಟ್ಟಿಗರು ಕೊಂಡಾಡಿದ್ದಾರೆ.

ಚರಂಡಿಯಲ್ಲಿ ಸಿಲುಕಿದ್ದ ಹಸುವನ್ನು ರಕ್ಷಿಸುವ ಮೂಲಕ ಹೃದಯವಂತ ವ್ಯಕ್ತಿಯೊಬ್ಬ ಮಾನವೀಯತೆ ಇಂದಿಗೂ ಜೀವಂತವಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾನೆ. veera__singam ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಶೇರ್‌ ಮಾಡಲಾಗಿದೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಚರಂಡಿಯಲ್ಲಿ ಸಿಲುಕಿದ್ದ ಹಸುವೊಂದು ಅಲ್ಲಿಂದ ಮೇಲೆ ಬರಲಾಗದೆ ಪರದಾಡುತ್ತಿರುವ ದೃಶ್ಯವನ್ನು ಕಾಣಬಹುದು. ಆ ತಕ್ಷಣ ಚರಂಡಿಗೆ ಇಳಿದ ವ್ಯಕ್ತಿಯೊಬ್ಬ ಬಹಳ ಪ್ರಯತ್ನಪಟ್ಟು ಹಸುವನ್ನು ಮೇಲಕ್ಕೆತ್ತಲು ಪ್ರಯತ್ನಿಸುತ್ತಾನೆ. ಕೊನೆಗೆ ಹಗ್ಗದ ಸಹಾಯದಿಂದ ಆತ ಹಸುವನ್ನು ರಕ್ಷಿಸಿದ್ದಾನೆ.

ಇದನ್ನೂ ಓದಿ
Image
ಲೈಫ್​​ನ್ನು ಬ್ಯಾಚುರಲ್ ಇದ್ದಾಗಲೇ ಎಂಜಾಯ್ ಮಾಡಿ ಎಂದ ಪೊಲೀಸ್
Image
ಪ್ರಿಯಕರನ ಜೊತೆ ಸೇರಿ ನಡುರಸ್ತೆಯಲ್ಲೇ ಗಂಡನನ್ನು ಥಳಿಸಿದ ಹೆಂಡತಿ!
Image
ಗೆಳತಿಯರೊಂದಿಗೆ ಸ್ಕೂಟಿಯಲ್ಲಿ ಬೆಂಗಳೂರು ಸುತ್ತಿದ ಗಿಳಿರಾಯ
Image
ಸಾವಿನೊಂದಿಗೆ ಸರಸ; ವಿದ್ಯುತ್‌ ಕಂಬದ ಮೇಲೇರಿ ಸ್ಟಂಟ್​ ಮಾಡಿದ ವ್ಯಕ್ತಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 25.5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ವ್ಯಕ್ತಿಯೇ ಸಮಾಜದ ನಿಜವಾದ ಹೀರೋʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಜವಾಗಿಯೂ ಮಾನವೀಯತೆ ಜೀವಂತವಾಗಿದೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಈ ದೃಶ್ಯವನ್ನು ಕಂಡು ಕಣ್ಣು ತುಂಬಿ ಬಂತುʼ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ