AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಈ ನಾಗರಹಾವಿನ ಬಣ್ಣವೇ ಕೆಂಪು, ಇದು ಎಷ್ಟು ಅಪಾಯ ಗೊತ್ತಾ?

ಈ ಭೂಮಿಯ ನೂರಾರು ಜಾತಿಯ ವಿಷಕಾರಿ ಹಾಗೂ ವಿಷರಹಿತ ಹಾವುಗಳಿದ್ದು, ಒಂದ್ಕಕಿಂತ ಒಂದು ವಿಭಿನ್ನವಾಗಿರುತ್ತದೆ. ಕೆಲವು ಹಾವುಗಳು ತನ್ನ ಮೈ ಬಣ್ಣದಿಂದಲೇ ಗಮನ ಸೆಳೆಯುತ್ತದೆ. ಸಾಮಾನ್ಯವಾಗಿಬಿಳಿ ಬಣ್ಣದ ನಾಗರಹಾವನ್ನು ಎಲ್ಲರೂ ನೋಡಿರುತ್ತಾರೆ. ಆದರೆ ಇದೀಗ ಕೆಂಪು ಬಣ್ಣದ ನಾಗರಹಾವನ್ನು ರಕ್ಷಿಸಿದ ವಿಡಿಯೋವೊಂದು ವೈರಲ್ ಆಗಿದೆ. ಈ ನಾಗರಹಾವಿನ ಈ ಬಣ್ಣ ನೋಡಿದ ನೆಟ್ಟಿಗರು ಶಾಕ್ ಆಗಿದ್ದು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

Video : ಈ ನಾಗರಹಾವಿನ ಬಣ್ಣವೇ ಕೆಂಪು, ಇದು ಎಷ್ಟು ಅಪಾಯ ಗೊತ್ತಾ?
ವೈರಲ್​​​ ವಿಡಿಯೋ
ಸಾಯಿನಂದಾ
| Edited By: |

Updated on: Aug 24, 2024 | 5:47 PM

Share

ಹಾವುಗಳ ಹೆಸರು ಕೇಳಿದರೇ ಗಡ ಗಡ ನಡುಕ ಶುರುವಾಗುತ್ತದೆ. ಈ ಭಯಾನಕ ಹಾವುಗಳು ಎದುರಿಗೆ ಬಂದರೆ ಕೇಳುವುದೇ ಬೇಡ, ಒಂದು ಮೈಲಿ ದೂರ ಓಡುವವರೇ ಹೆಚ್ಚು. ಆದರೆ ಕೆಲವೊಮ್ಮೆ ಸೋಶಿಯಲ್ ಮೀಡಿಯಾದಲ್ಲಿ ಹಾವುಗಳನ್ನು ಸಲೀಸಾಗಿ ಹಿಡಿದು ಮುದ್ದಿಸುವ, ಮೈ ಮೇಲೆ ಹಾವುಗಳು ತೆವಳುವ ವಿಡಿಯೋಗಳು ಕಾಣಸಿಗುತ್ತವೆ. ಈ ನಾಗರಹಾವುಗಳ ಕುರಿತು ಹಲವು ರೀತಿಯ ಅಚ್ಚರಿಗಳ ನೋಡಿದ್ದೇವೆ.

ಅದರಲ್ಲಿಯು ಕೆಲವೊಂದು ವಿಚಿತ್ರ ರೀತಿಯ ಹಾವುಗಳನ್ನು ನೋಡಿದ್ದೇವೆ. ನೀವು ಬಿಳಿ ಬಣ್ಣದ ನಾಗರಹಾವುಗಳನ್ನು ನೋಡಿದ್ದಿರಬಹುದು. ಆದರೆ ಕೆಂಪು ಬಣ್ಣದ ನಾಗರಹಾವನ್ನು ನೋಡಿರಲು ಸಾಧ್ಯವೇ ಇಲ್ಲ. ಹೌದು, ಇತ್ತೀಚೆಗಷ್ಟೇ ವೈರಲ್ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ವಿಶಿಷ್ಟವಾದ ಹಾವನ್ನು ರಕ್ಷಿಸುತ್ತಿರುವುದನ್ನು ನೋಡಬಹುದಾಗಿದೆ. ‘ಕೆಂಪು ನಾಗರ ಹಾವು’ ಈ ವೈರಲ್‌ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದು, ಇದನ್ನು ನೋಡಿದ ನೆಟ್ಟಿಗರು ಶಾಕ್ ಆಗಿದ್ದಾರೆ.

ಇದನ್ನೂ ಓದಿ: ಇದು ಎಣ್ಣೆ ಎಫೆಕ್ಟ್ ಸ್ವಾಮಿ, ಕುಡಿದ ನಶೆಯಲ್ಲಿ ತರಗತಿಯಲ್ಲೇ ನಿದ್ದೆಗೆ ಜಾರಿದ ಶಿಕ್ಷಕ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by jay agrawal (@jay_k_agrawal)

ಸ್ನೇಕ್ ಫ್ರೆಂಡ್’ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ “ಸ್ನೇಕ್ ರೆಸ್ಕ್ಯೂ ಅಂಡ್ ರಿಲೀಸ್” ಎಂಬ ಶೀರ್ಷಿಕೆಯೊಂದಿಗೆ ಈ ವಿಡಿಯೋವನ್ನು ಶೇರ್ ಮಾಡಲಾಗಿದೆ. ಇಪ್ಪತ್ತು ಸಾವಿರಕ್ಕೂ ಆಧಿಕ ವೀಕ್ಷಣೆ ಕಂಡಿದ್ದು, ನೆಟ್ಟಿಗರು, ಇದು ನಿಜವೇ ಅಥವಾ ಕೃತಕ ಬಣ್ಣವೇ ಎಂದು ಹಲವರು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋಗೆ ನೆಟ್ಟಿಗರೊಬ್ಬರು, ‘ಈ ಹಾವು ವಿಷವನ್ನು ಉಗುಳುತ್ತದೆ’ ಎಂದು ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ. ಮತ್ತೊಬ್ಬರು ‘ಇದು ನಿಜವಾದ ಬಣ್ಣವಲ್ಲ’ಎಂದು ಕಾಮೆಂಟ್ ಮಾಡಿದ್ದರೆ, ಇನ್ನೊಬ್ಬರು, ‘ತುಂಬಾ ಚೆನ್ನಾಗಿ ಬಣ್ಣ ಹಚ್ಚಿದ್ದೀರಿ’ ಎಂದಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್