AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ರೀಲ್​ಗೆ ಪೋಸ್​​ ನೀಡಲು ಹೋಗಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಬೈಕ್​​ ಸವಾರ ಸಾವು

ಬೈಕ್​ನ ಹಿಂದೆ ಕುಳಿತಿರುವಾತ ರೀಲ್​​​ ಮಾಡಲು ಪ್ರಾರಂಭಿಸುತ್ತಿದ್ದಂತೆ​ ಚಾಲಕ ಹಿಂದಕ್ಕೆ ತಿರುಗಿ ಪೋಸ್​​ ನೀಡಲು ಪ್ರಾರಂಭಿಸಿದ್ದಾನೆ. ಇದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್​​​ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ವರದಿಗಳ ಪ್ರಕಾರ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

Video Viral: ರೀಲ್​ಗೆ ಪೋಸ್​​ ನೀಡಲು ಹೋಗಿ ಡಿವೈಡರ್‌ಗೆ ಢಿಕ್ಕಿ ಹೊಡೆದು  ಬೈಕ್​​ ಸವಾರ ಸಾವು
ರೀಲ್​ಗೆ ಪೋಸ್​​ ನೀಡಲು ಹೋಗಿ ಡಿವೈಡರ್‌ಗೆ ಢಿಕ್ಕಿ ಹೊಡೆದು ಬೈಕ್​​ ಸವಾರ ಸಾವು
ಅಕ್ಷತಾ ವರ್ಕಾಡಿ
|

Updated on:Jul 06, 2024 | 5:20 PM

Share

ಮಹಾರಾಷ್ಟ್ರ: ರೀಲ್ಸ್​ಗೆ ಪೋಸ್​​ ನೀಡಲು ಹೋಗಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬೈಕ್​​ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮತ್ತೊರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಧುಲೆ-ಸೋಲಾಪುರ ಹೆದ್ದಾರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬೈಕಿನ ಹಿಂದಿನ ಸೀಟಿನಲ್ಲಿ ಕುಳಿತ್ತಿದ್ದ ಗೆಳೆಯನ ರೀಲ್ಸ್​​​ಗೆ ಚಾಲಕ ಪೋಸ್​​ ಕೊಡಲು ಹೋಗಿದ್ದಾನೆ. ಈ ವೇಳೆ ಗಾಡಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ಇಬ್ಬರು ಗೆಳೆಯರು ಹೆಲ್ಮೆಟ್ ಇಲ್ಲದೆ ಹೆದ್ದಾರಿಯಲ್ಲಿ ರೈಡ್​​​ ಹೋಗುತ್ತಿರುವುದನ್ನು ಕಾಣಬಹುದು. ಹಿಂದೆ ಕುಳಿತಿರುವಾತ ರೀಲ್ಸ್​​ ಮಾಡಲು ಪ್ರಾರಂಭಿಸುತ್ತಿದ್ದಂತೆ ಬೈಕ್​ ಚಾಲಕ ಹಿಂದಕ್ಕೆ ತಿರುಗಿ ಪೋಸ್​​ ನೀಡಲು ಪ್ರಾರಂಭಿಸಿದ್ದಾನೆ. ಇದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ್ದು, ಬೈಕ್​​​ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಗಾಳಿಗೆ ಹಾರಿ ರಸ್ತೆಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ವೈರಲ್​​  ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹಾಡು ಹಗಲೇ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಿತ್ತು ಪರಾರಿಯಾದ ಖದೀಮರು

@atuljmd123 ಎಂಬ ಟ್ವಿಟರ್​​ ಖಾತೆಯಲ್ಲಿ ಈ ಅಪಘಾತದ ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ವಿಡಿಯೋ ಕಂಡು ಸಾಕಷ್ಟು ನೆಟ್ಟಿಗರು ರೀಲ್ಸ್​​​ ಹುಚ್ಚು ಬಿಟ್ಟು ಬಿಡಿ ಎಂದು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:19 pm, Sat, 6 July 24

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್