AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವದ ಹಂಗು ತೊರೆದು ರೈಲಿನಡಿಗೆ ಸಿಲುಕುತ್ತಿದ್ದ ನಾಯಿ ರಕ್ಷಣೆ; ಮಾನವೀಯತೆಯೇ ಧರ್ಮ ಎಂದ ನೆಟ್ಟಿಗರು

ವೈರಲ್​ ಆದ ವಿಡಿಯೋದಲ್ಲಿ ರೈಲ್ವೇ ಹಳಿ ಮೇಲೆ ಸಿಲುಕಿದ ನಾಯಿಯ ರಕ್ಷಣೆಗೆ ಮುಂದಾದ ವ್ಯಕ್ತಿಯನ್ನು ನೋಡಬಹುದು. ಅದರಲ್ಲೂ ರೈಲು ಇನ್ನೇನು ನಾಯಿ ಬಳಿಗೆ ಸಮೀಪಿಸುತ್ತಿದೆ ಎನ್ನುವ ಹಂತದಲ್ಲಿ ವ್ಯಕ್ತಿ ಹಿಂದಿನಿಂದ ಓಡಿ ಬಂದು ತನ್ನ ಜೀವದ ಹಂಗು ತೊರೆದು ನಾಯಿಯ ರಕ್ಷಣೆಗೆ ಮುಂದಾಗಿದ್ದಾರೆ.

Viral Video: ಜೀವದ ಹಂಗು ತೊರೆದು ರೈಲಿನಡಿಗೆ ಸಿಲುಕುತ್ತಿದ್ದ ನಾಯಿ ರಕ್ಷಣೆ; ಮಾನವೀಯತೆಯೇ ಧರ್ಮ ಎಂದ ನೆಟ್ಟಿಗರು
ನಾಯಿ ರಕ್ಷಣೆ
TV9 Web
| Edited By: |

Updated on: Dec 28, 2021 | 3:50 PM

Share

ಮಾನವೀಯತೆಯೇ ದೊಡ್ಡ ಧರ್ಮ. ಅದಕ್ಕಿಂತ ಮೇಲ್ಪಟ್ಟು ಏನೂ ಇಲ್ಲ. ಆದರೆ, ಇಂದಿನ ಕಾಲದಲ್ಲಿ ಮನುಷ್ಯರಲ್ಲಿ ಮಾನವೀಯತೆ ಕಾಣುವುದು ಅಪರೂಪ. ಎಲ್ಲೆಡೆ ಮಾನವೀಯತೆಯ ಕತ್ತು ಹಿಸುಕಲಾಗುತ್ತಿದೆ. ಜನರು ಪರಸ್ಪರ ವಿರೋಧಿಗಳಾಗುತ್ತಿದ್ದಾರೆ. ಸಹಾಯದ ಹೆಸರಿನಲ್ಲಿ ವಂಚನೆ ಮಾಡಲಾಗುತ್ತಿದೆ. ಸ್ವಂತ ಸಹೋದರನನ್ನೇ ಮೋಸ ಮಾಡುವ ಕಾಲ ಇದಾಗಿದೆ. ಆದಾಗ್ಯೂ, ಇಂದಿಗೂ ಈ ಜಗತ್ತಿನಲ್ಲಿ ಮಾನವೀಯತೆಯನ್ನು ಪಾಲಿಸುವ ಜನರಿದ್ದಾರೆ. ಇದಕ್ಕೆ ಪುಷ್ಠಿ ನೀಡುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್​ ಆಗಿದೆ. ಮನುಷ್ಯರನ್ನು ಕಂಡರೆ ಮನುಷ್ಯರಿಗೆ ಆಗದ ಈ ಸಮಯದಲ್ಲಿ ಒಬ್ಬ ವ್ಯಕ್ತಿ, ರೈಲಿನಡಿಗೆ ಸಿಲುಕುತ್ತಿದ್ದ ನಾಯಿಯ (Dog) ರಕ್ಷಣೆಗೆ ಮುಂದಾಗಿದ್ದಾನೆ. ವೈರಲ್​ ಆದ ಈ ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದು, ವ್ಯಕ್ತಿಯ ಧೈರ್ಯಕ್ಕೆ ಜೈ ಎಂದಿದ್ದಾರೆ.

ವೈರಲ್​ ಆದ ವಿಡಿಯೋದಲ್ಲಿ ರೈಲ್ವೇ ಹಳಿ ಮೇಲೆ ಸಿಲುಕಿದ ನಾಯಿಯ ರಕ್ಷಣೆಗೆ ಮುಂದಾದ ವ್ಯಕ್ತಿಯನ್ನು ನೋಡಬಹುದು. ಅದರಲ್ಲೂ ರೈಲು ಇನ್ನೇನು ನಾಯಿ ಬಳಿಗೆ ಸಮೀಪಿಸುತ್ತಿದೆ ಎನ್ನುವ ಹಂತದಲ್ಲಿ ವ್ಯಕ್ತಿ ಹಿಂದಿನಿಂದ ಓಡಿ ಬಂದು ತನ್ನ ಜೀವದ ಹಂಗು ತೊರೆದು ನಾಯಿಯ ರಕ್ಷಣೆಗೆ ಮುಂದಾಗಿದ್ದಾರೆ. ಪ್ರಾಣವನ್ನು ಲೆಕ್ಕಿಸದೆ ವ್ಯಕ್ತಿಯೊಬ್ಬ ನಾಯಿಯ ಜೀವ ಉಳಿಸಿದ ಪರಿ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರೈಲು ಹಿಂದಿನಿಂದ ಅತಿ ವೇಗವಾಗಿ ಬರುತ್ತಿರುವುದನ್ನು ನೋಡಿದರೂ, ಸಕಾಲದಲ್ಲಿ ಆ ವ್ಯಕ್ತಿ ನಾಯಿಯ ಹಗ್ಗವನ್ನು ಬಿಚ್ಚಿ ರೈಲ್ವೇ ಟ್ರ್ಯಾಕ್‌ನಿಂದ ದೂರಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಸ್ವಲ್ಪವಾದರೂ ತಡ ಮಾಡಿದ್ದರೆ ನಾಯಿ ಮತ್ತು ವ್ಯಕ್ತಿ ಇಬ್ಬರ ಪ್ರಾಣ ಹೋಗುವ ಸಾಧ್ಯತೆ ಇತ್ತು ಎನ್ನುವುದು ಈ ವಿಡಿಯೋ ನೋಡಿದ ನೆಟ್ಟಿಗರ ಮಾತಾಗಿದೆ.

ನಾಯಿಯ ಜೀವ ಉಳಿಸಲು ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿರುವುದು ಮಾನವೀಯತೆಗೆ ನಿಜವಾದ ನಿದರ್ಶನ. ಈ ಆಘಾತಕಾರಿ ವೀಡಿಯೊವನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು  ತಮ್ಮ ಟ್ವಿಟರ್​ ಖಾತೆಯಲ್ಲಿ, ನಾಯಿಯನ್ನು ಉಳಿಸಲು ವ್ಯಕ್ತಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟಿದ್ದಾನೆ ಎಂಬ ಶೀರ್ಷಿಕೆಯಡಿ ಹಂಚಿಕೊಂಡಿದ್ದಾರೆ ಮತ್ತು ಮಾನವೀಯತೆಯ ನಿಜವಾದ ನಾಯಕ ಎಂದು ಹೇಳಿದ್ದಾರೆ.

ಈ ಹೃದಯಸ್ಪರ್ಶಿ ವಿಡಿಯೋ ಇಲ್ಲಿಯವರೆಗೆ 9 ಸಾವಿರಕ್ಕೂ ಹೆಚ್ಚು ವ್ಯೂವ್ಸ್​ ಪಡೆದಿದೆ. ಕಮೆಂಟ್​ ಮೂಲಕ ಅನೇಕರು ತಮ್ಮ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈ ಮನುಷ್ಯನಿಗೆ ಹೆಚ್ಚಿನ ಗೌರವ ಸಲ್ಲಬೇಕು ಎಂದು ಒಬ್ಬರು ಹೇಳಿದರೆ, ಮತ್ತೊಬ್ಬರು ಮನುಷ್ಯ ಮತ್ತೊಬ್ಬ ಮನುಷ್ಯನ ಬಗ್ಗೆ ತಲೆಕೆಡಿಸಿಕೊಳ್ಳದ ಇಂದಿನ ಕಾಲದಲ್ಲಿ ನಾಯಿಯ ಜೀವ ಉಳಿಸಲು ತನ್ನ ಪ್ರಾಣದ ಬಗ್ಗೆ ತಲೆಕೆಡಿಸಿಕೊಂಡ ಆತನಿಗೆ ಸಲಾಂ ಎಂದು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: Viral Video: ಸಾಂತಾಕ್ಲಾಸ್​ ಟೋಪಿ ಧರಿಸಿ ತಿರುಗಾಡಿದ ಹಾವು; ವಿಡಿಯೋ ಕಂಡು ಅಚ್ಚರಿಗೊಂಡ ನೆಟ್ಟಿಗರು

Viral Video: ಯುವತಿ ಮತ್ತು ಸಾಕು ನಾಯಿ ಮೇಲೆ ದಾಳಿ ಮಾಡಿದ ಪಿಟ್ ಬುಲ್; ಮುಂದೇನಾಯ್ತು ನೋಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್