AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಆಕಸ್ಮಿಕವಾಗಿ ರೈಲ್ವೆ ಹಳಿಯ ಮಧ್ಯೆ ಬಿದ್ದ ವ್ಯಕ್ತಿ! ಆಘಾತಕಾರಿ ದೃಶ್ಯದ ವಿಡಿಯೋ ವೈರಲ್​

ಒಮ್ಮೆಲೆ ವಿಡಿಯೋ ನೋಡಿದಾಕ್ಷಣ ಮೈ ಜುಂ ಅನ್ನುವುದಂತೂ ಸತ್ಯ. ಒಂದು ವೇಳೆ ರೈಲು ಬಂದುಬಿಟ್ಟಿದ್ದರೆ? ಹೀಗೆಲ್ಲಾ ಪ್ರಶ್ನೆ ತಲ್ಲೆಯಲ್ಲಿ ಹಾದು ಹೋಗುವುದೂ ಸಹಜ. ಆದರೆ ಏನೂ ಅಪಾಯವಾಗದೇ ವ್ಯಕ್ತಿ ಬದುಕುಳಿದ್ದಾರೆ ಎಂಬುದು ಮನಸ್ಸಿಗೆ ಖುಷಿಯ ಜತೆಗೆ ಸಮಾಧಾನ.

Shocking Video: ಆಕಸ್ಮಿಕವಾಗಿ ರೈಲ್ವೆ ಹಳಿಯ ಮಧ್ಯೆ ಬಿದ್ದ ವ್ಯಕ್ತಿ! ಆಘಾತಕಾರಿ ದೃಶ್ಯದ ವಿಡಿಯೋ ವೈರಲ್​
ಆಕಸ್ಮಿಕವಾಗಿ ರೈಲ್ವೆ ಹಳಿಯ ಮಧ್ಯೆ ಬಿದ್ದ ವ್ಯಕ್ತಿ!
TV9 Web
| Edited By: |

Updated on:Aug 06, 2021 | 9:35 AM

Share

ವೀಲ್​ಚೇರ್​ನಲ್ಲಿ ಕುಳಿತ ವ್ಯಕ್ತಿಯೋರ್ವರು ರೈಲ್ವೆ ಹಳಿಯ ಮೇಲೆ ಬಿದ್ದ ಆಘಾತಕಾರಿ ಘಟನೆಯೊಂದು ನಡೆದಿದೆ. ತಕ್ಷಣವೇ ಅಲ್ಲೇ ಪಕ್ಕದಲ್ಲಿದ್ದ ಪ್ರಯಾಣಿಕರು ಅವರನ್ನು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ. ದೇವರು ಯಾವ ರೂಪದಲ್ಲಿಯೂ ಬಂದು ಜೀವ ಉಳಿಸಬಹುದು ಎಂಬುದಕ್ಕೆ ಸಾಕ್ಷಿ ಎಂಬಂತಿದೆ ಈ ದೃಶ್ಯ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದ್ದು ಫುಲ್ ವೈರಲ್ ಆಗಿದೆ.

ಕಳೆದ ಬುಧವಾರ ಮಧ್ಯಾಹ್ನ ನ್ಯೂಯಾರ್ಕ್​ನಲ್ಲಿ ಈ ಘಟನೆ ನಡೆದಿದೆ. ವೀಲ್​ಚೇರ್​ನಲ್ಲಿ ಕುಳಿತ ವ್ಯಕ್ತಿ ರೈಲಿಗಾಗಿ ಕಾಯುತ್ತಾ ಇರುವಾಗ ಆಕಸ್ಮಿಕವಾಗಿ ರೈಲ್ವೇ ಹಳಿಯ ಮೇಲೆ ಬಿದ್ದು ಬಿಟ್ಟಿದ್ದಾರೆ. ಅಷ್ಟರಲ್ಲಿಯೇ ರೈಲು ಬರುತ್ತಿರುವ ಶಬ್ದ ಕೂಡಾ ಕೇಳಿಸಲು ಪ್ರಾರಂಭಿಸಿದೆ. ತಡಮಾಡದೇ ಅಲ್ಲಿದ್ದ ವ್ಯಕ್ತಿಯೋರ್ವರು ರೈಲ್ವೇ ಟ್ರ್ಯಾಕ್​ನತ್ತ ಇಳಿದು, ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಅಲ್ಲಿದ್ದ ಸುತ್ತಮುತ್ತಲಿನ ಜನ ಕೂಡಾ ಸಹಾಯ ಮಾಡಿದ್ದಾರೆ.

ಒಮ್ಮೆಲೆ ವಿಡಿಯೋ ನೋಡಿದಾಕ್ಷಣ ಮೈ ಜುಂ ಅನ್ನುವುದಂತೂ ಸತ್ಯ. ಒಂದು ವೇಳೆ ರೈಲು ಬಂದುಬಿಟ್ಟಿದ್ದರೆ? ಹೀಗೆಲ್ಲಾ ಪ್ರಶ್ನೆ ತಲ್ಲೆಯಲ್ಲಿ ಹಾದು ಹೋಗುವುದೂ ಸಹಜ. ಆದರೆ ಏನೂ ಅಪಾಯವಾಗದೇ ವ್ಯಕ್ತಿ ಬದುಕುಳಿದ್ದಾರೆ ಎಂಬುದು ಮನಸ್ಸಿಗೆ ಖುಷಿಯ ಜತೆಗೆ ಸಮಾಧಾನ. ಕಿಂಚಿತ್ತೂ ಯೋಚಿಸದೇ ವ್ಯಕ್ತಿಯನ್ನು ಬದುಕಿಸಿದ ಅಪರಿಚಿತ ವ್ಯಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. 3 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ. ನೆಟ್ಟಿಗರು ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಾದ್ದಾರೆ. ಜನರು ತುಂಬಾ ಹೃದಯವಂತರು ಎಂಬುದು ಖುಷಿಯ ವಿಚಾರ ಎಂದು ಕೆಲವರು ಹೇಳಿದ್ದಾರೆ. ಇನ್ನು ಪ್ರಾಣಾಪಾಯದಿಂದ ರಕ್ಷಿಸಿದ ವ್ಯಕ್ತಿಗೆ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ:

Viral Video: ರೈಲು ಹಳಿ ಮಧ್ಯೆ ಸಿಲುಕಿಕೊಂಡ ಸ್ಕೂಟರ್​; ಕೂದಲೆಳೆಯ ಅಂತರದಲ್ಲಿ ವ್ಯಕ್ತಿ ಪಾರು

Viral Video: ಚಲಿಸುತ್ತಿದ್ದ ರೈಲು ಹತ್ತಲು ಮುಂದಾದ ಮಹಿಳೆ…ಆಮೇನಾಯ್ತು?

Published On - 9:30 am, Fri, 6 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್