AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರಿನ ಹವಾಮಾನ ಚಿಲ್​​​ನಿಂದ ಗ್ರಿಲ್ ಆಗುತ್ತಿದೆ, ಕೂಲ್ ಆಗಲು ಓಯೋ ರೂಮ್ ಬುಕ್​​ ಮಾಡಿದ ವ್ಯಕ್ತಿ 

ವಿಶೇಷವಾಗಿ ಈ ವರ್ಷ ದೇಶದೆಲ್ಲೆಡೆ ಬಿಸಿಲಿನ ತಾಪಮಾನ ವಿಪರೀತವಾಗಿ ಹೇರಿಕೆಯಾಗಿದೆ. ಬಹುದಿನಗಳಿಂದ  ಉದ್ಯಾನ ನಗರಿ ಬೆಂಗಳೂರು ಕೂಡಾ ನಿರಂತರ ಶಾಖದ ಅಲೆಗೆ ಸಾಕ್ಷಿಯಾಗುತ್ತಿದೆ. ಎಸಿ ಇಲ್ಲದೆ ಕೂರಲು ಸಾಧ್ಯವಾಗದು ಎಂಬಂತಾಗಿದೆ. ಹೀಗೆ ಈ ಬಿಸಿಲಿನ ತಾಪದಿಂದ ತಪ್ಪಿಸಿಕೊಂಡು   ಕೂಲ್ ಆಗಿರಲು ಬೆಂಗಳೂರಿನ ವ್ಯಕ್ತಿಯೊಬ್ಬರು ಓಯೋ ರೂಮ್ ಅಲ್ಲಿ ಆಶ್ರಯ ಪಡೆಯಲು ಮುಂದಾಗಿದ್ದಾರೆ.

Viral Post: ಬೆಂಗಳೂರಿನ ಹವಾಮಾನ ಚಿಲ್​​​ನಿಂದ ಗ್ರಿಲ್ ಆಗುತ್ತಿದೆ, ಕೂಲ್ ಆಗಲು ಓಯೋ ರೂಮ್ ಬುಕ್​​ ಮಾಡಿದ ವ್ಯಕ್ತಿ 
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Apr 04, 2024 | 3:44 PM

Share

ಬೇಸಿಗೆ ಕಾಲ ಆರಂಭವಾಗಿ ದಿನಗಳೇ ಕಳೆದಿವೆ. ಈ ಬಾರಿ ಫ್ರೆಬ್ರವರಿ ಅಂತ್ಯದಲ್ಲೇ ಸುಡು ಬಿಸಿಲು ಬಂದೆರಗಿದ್ದು, ದಿನೇ ದಿನೇ ತಾಪ ಹೆಚ್ಚಾಗುತ್ತಿದೆ. ವಿಶೇಷವಾಗಿ ಈ ವರ್ಷ ದೇಶದೆಲ್ಲೆಡೆ ಬಿಸಿಲಿನ ತಾಪಮಾನ ವಿಪರೀತವಾಗಿ ಹೇರಿಕೆಯಾಗಿದೆ.  ಉದ್ಯಾನ ನಗರಿ  ಬೆಂಗಳೂರು ಕೂಡಾ ಬಹುದಿನಗಳ ನಿರಂತರ ಶಾಖದ ಅಲೆಗೆ ಸಾಕ್ಷಿಯಾಗುತ್ತಿದೆ. ಎಸಿ ಇಲ್ಲದೆ ಮನೆಯ ಒಳಗಡೆ ಕೂರಲು ಕೂಡಾ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಎಸಿ ಇಲ್ಲದೆ ಬದುಕಲು ಸಾಧ್ಯವಾಗದು ಎಂದು ಬೆಂಗಳೂರಿನ ವ್ಯಕ್ತಿಯೊಬ್ಬರು, ಬಿಸಿಲ ತಾಪದಿಂದ ತಪ್ಪಿಸಿಕೊಳ್ಳಲು ಓಯೋ ರೂಮ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ಈ ಕುರಿತ ಪೋಸ್ಟ್ ಒಂದು ಇದೀಗ ಸಖತ್ ವೈರಲ್ ಆಗುತ್ತಿದೆ.

ರಿಷಭ್ ಶ್ರಿವಾಸ್ತವ (@arre_rishabh) ಎಂಬವರು  ತಮ್ಮ ಎಕ್ಸ್ ಖಾತೆಯಲ್ಲಿ ಈ ಪೋಸ್ಟ್ ಅನ್ನು ಹಂಚಿಕೊಂಡು, ಬೆಂಗಳೂರಿನ ಹವಾಮಾನವು ಚಿಲ್ ನಿಂದ ಗ್ರಿಲ್ ಆಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಎಸಿ ಇಲ್ಲದೆ ಬದುಕಲು ಸಾಧ್ಯವಿಲ್ಲ. ಅದಕ್ಕಾಗಿ ಓಯೋ ರೂಮ್ ಆಶ್ರಯ ಪಡೆಯಲು ನಿರ್ಧರಿಸಿದ್ದೇನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ರಿಷಭ್ ಅವರು ನಮ್ಮ ಬೆಂಗಳೂರಿನಲ್ಲಿ ನಿರಂತರವಾಗಿ ಏರುತ್ತಿರುವ ತಾಪಮಾನದಿಂದ ಮನೆಯಲ್ಲಿ ಎಸಿ ಇಲ್ಲದೆ ಒಂದು ಕ್ಷಣವೂ ಇರಲು ಸಾಧ್ಯವಿಲ್ಲ ಎಂದು, ಬಿಸಿಲ ತಾಪದಿಂದ ತಪ್ಪಿಸಿಕೊಂಡು ಚಿಲ್ ಆಗಿರಲು ಓಯೋ ರೂಮ್ ಹೋಟೆಲ್ ನಲ್ಲಿ ಆಶ್ರಯ ಪಡೆಯಬೇಕೆಂದು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್​​​ನಲ್ಲಿ ಮಿನಿ ಗಾರ್ಡನ್ ನಿರ್ಮಿಸಿದ ಚಾಲಕ; ಕನ್ನಡಿಗರ ಭಾರೀ ಮೆಚ್ಚುಗೆ

ಏಪ್ರಿಲ್ 01 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಹನ್ನೆರಡು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು  ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹೌದು ಇಲ್ಲಿ ತಾಪಮಾನ ತುಂಬಾನೇ ಬಿಸಿಯಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅಯ್ಯೋ ಬೆಂಗಳೂರು ಇತರ ನಗರಗಳಿಗಿಂತ ಉತ್ತಮವಾಗಿದೆ, ಇಲ್ಲಿ ಎಸಿ ಬೇಕೇಂದೇನಿಲ್ಲ ಫ್ಯಾನ್ ಇದ್ದರೂ ಸಾಕು. ಇತರೆ ನಗರಗಳಲ್ಲಿ ಫ್ಯಾನ್ ಇದ್ದರೂ ಬೆವರಿಗೆ ಒದ್ದೆಯಾಗುತ್ತೇವೆʼ ಎಂಬ ಕಾಮೆಂಟ್  ಬರೆದುಕೊಂಡಿದ್ದಾರೆ.

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ