AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ 52 ವರ್ಷದ ತಾಯಿಗೆ ಮರು ಮದುವೆ ಮಾಡಿಸಿದ ಮಗ

44 ನೇ ವಯಸ್ಸಿಗೆ ಗಂಡನನ್ನು ಕಳೆದುಕೊಂಡು ಸ್ತನ ಕ್ಯಾನ್ಸರ್​​ಗೆ ತುತ್ತಾದ ಅಮ್ಮನಿಗೆ ಮಗನೊಬ್ಬ 52ನೇ ವಯಸ್ಸಿಗೆ ಮರು ಮದುವೆ ಮಾಡಿಸಿದ್ದಾರೆ. ಸದ್ಯ ಈ ಸ್ಟೋರಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. 

ಕ್ಯಾನ್ಸರ್​ ಪೀಡಿತ 52 ವರ್ಷದ ತಾಯಿಗೆ ಮರು ಮದುವೆ ಮಾಡಿಸಿದ ಮಗ
ಮದುವೆ
TV9 Web
| Updated By: Pavitra Bhat Jigalemane|

Updated on:Mar 03, 2022 | 2:45 PM

Share

ಹೆಣ್ಣು ಜೀವನದ ಪ್ರತೀ ಹಂತದಲ್ಲಿಯೂ ಒಂದಷ್ಟು ಕಷ್ಟಗಳನ್ನು ಎದುರಿಸುತ್ತಾಳೆ.  ಗಂಡ, ಮನೆ, ಮಕ್ಕಳು ಎಂದು ಸಂಸಾರಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಆಕೆಯ ಒಂಟಿತನವನ್ನು ಹೋಗಲಾಡಿಸುವುದು ಪ್ರತೀ ಮಕ್ಕಳ ಕರ್ತವ್ಯವಾಗಿರುತ್ತದೆ. ಇಲ್ಲೊಂದು ಅಂತಹ ಒಂದು ಕಥೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 44 ನೇ ವಯಸ್ಸಿಗೆ ಗಂಡನನ್ನು ಕಳೆದುಕೊಂಡು ಸ್ತನ ಕ್ಯಾನ್ಸರ್​​ಗೆ ತುತ್ತಾದ ಅಮ್ಮನಿಗೆ ಮಗನೊಬ್ಬ 52ನೇ ವಯಸ್ಸಿಗೆ ಮರು ಮದುವೆ ಮಾಡಿಸಿದ್ದಾರೆ. ಸದ್ಯ ಈ ಸ್ಟೋರಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಜಿಮೀತ್​ ಗಾಂಧಿ ಎನ್ನುವವರು ತಮ್ಮ ತಾಯಿಯ ಜೀವನದ ಪ್ರೇಮ ಕತೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ವೈರಲ್​ ಆಗಿದೆ. ಜಿಮೀತ್​ ತಮ್ಮ ತಾಯಿಯ ಬಗ್ಗೆ ಹೇಳುವಾಗ ಆಕೆ 2013ರಲ್ಲಿ 44 ನೇ ವಯಸ್ಸಿಗೆ ಗಂಡನನ್ನು ಕಳೆದುಕೊಂಡರು. 2019ರಲ್ಲಿ 3ನೇ ಹಂತದ ಸ್ತನ ಕ್ಯಾನ್ಸರ್​ಗೆ ತುತ್ತಾದರು. 2 ವರ್ಷಗಳ ಚಿಕಿತ್ಸೆಯ ಬಳಿಕ ಒಂದು ಹಂತಕ್ಕೆ ಗುಣಮುಖರಾಗಿದ್ದರು. ಆದರೆ ಕಳೆದ ವರ್ಷ ಡೆಲ್ಟಾ ವೇರಿಯಂಟ್​ಗೆ ತುತ್ತಾದರು. ಆದರೂ ಜೀವನೋತ್ಸಾಹ ಕಳೆದುಕೊಳ್ಳದ  ಅವರು ಒಂಟಿಯಾಗಿ ಬದುಕುತ್ತಿದ್ದರು. ಅವರು 52 ವರ್ಷದಲ್ಲೂ ಪ್ರೀತಿಯನ್ನು ಕಂಡುಕೊಂಡಿದ್ದಾರೆ. ಅವರ ಮಗನಾಗಿ ತಾಯಿಯ ಆಸೆಯನ್ನು ಈಡೇರಿಸುವುದು ಕರ್ತವ್ಯವಾಗಿದೆ. ಹೀಗಾಗಿ ಅವರು 52ನೇ ವರ್ಷದಲ್ಲಿ ಇಷ್ಟಪಟ್ಟ ಹುಡುಗನೊಂದಿಗೆ ಮದುವೆ ಮಾಡಿಸಿದ್ದೇನೆ. ಅಮ್ಮ ಎಂದರೆ ನಿಜಕ್ಕೂ ಹೋರಾಟಗಾರ್ತಿಯೂ ಹೌದು, ಯೋಧನೂ ಹೌದು, ಜೀವನದ ಯುದ್ಧದಲ್ಲಿ ಎದುರಾಗುವ ಪ್ರತೀ ಸವಾಲನ್ನು ಎದೆಗುಂದದೆ ಎದುರಿಸಿ ಗಟ್ಟಿಯಾಗಿ ನಿಲ್ಲುತ್ತಾಳೆ ಎಂದು ಬರೆದುಕೊಂಡಿದ್ದಾರೆ.

ಜಿಮೀತ್​ ಅವರು ಲಿಂಕ್ಡ್​​ಇನ್​ನಲ್ಲಿ ಹಂಚಿಕೊಂಡ ಕತೆಯಲ್ಲಿ ತಾಯಿಯ ಕಷ್ಟದ ದಿನಗಳನ್ನು ವಿವರಿಸಿದ್ದಾರೆ. ಜತೆಗೆ ನಿಜವಾದ ಪ್ರೀತಿಗೆ ವಯಸ್ಸಿನ ಹಂಗಿಲ್ಲ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. ಫೆ.14ರಂದು ಜೀಮೀತ್​ ತಾಯಿ ವಿವಾಹವಾಗಿದ್ದಾರೆ.

ಇದನ್ನೂ ಓದಿ:

ಹೂವುಗಳಿಂದ ತುಂಬಿದ ಗಾಡಿಯಲ್ಲಿ ಗ್ರ್ಯಾಂಡ್​ ಎಂಟ್ರಿ ಪಡೆದ ವಧು: ವಿಡಿಯೋ ವೈರಲ್​

Published On - 2:44 pm, Thu, 3 March 22

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ