Viral: ಮಗನ ಬರ್ತ್‌ ಡೇ ಸೆಲೆಬ್ರೇಷನ್‌ ವಿಡಿಯೋ ರೆಕಾರ್ಡಿಂಗ್‌ ಮಾಡುತ್ತಿದ್ದಾಗ ಮಾತನಾಡಿದಳೆಂದು ಹೆಂಡ್ತಿ ಕಪಾಳಕ್ಕೆ ಬಾರಿಸಿದ ಪತಿರಾಯ

ಪತಿ-ಪತ್ನಿಯರ ನಡುವಿನ ಕಲಹಗಳಿಗೆ ಸಂಬಂಧಿಸಿದ ಸುದ್ದಿಗಳು ಆಗಾಗ್ಗೆ ವೈರಲ್‌ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು ಕ್ಲುಲ್ಲಕ ಕಾರಣಕ್ಕೆ ಪತಿರಾಯ ತನ್ನ ಹೆಂಡ್ತಿಯ ಕಪಾಳಕ್ಕೆ ಬಾರಿಸಿದ್ದಾನೆ. ಹೌದು ಮಗನ ಬರ್ತ್‌ ಡೇ ಸೆಲೆಬ್ರೇಷನ್‌ನ ವಿಡಿಯೋ ಮಾಡುವಾಗ ಮಧ್ಯದಲ್ಲಿ ಮಾತನಾಡಿದಳೆಂದು ಪತಿರಾಯ ಕೋಪದಿಂದ ತನ್ನ ಹೆಂಡತಿಯ ಕೆನ್ನೆಗೆ ಬಾರಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 24, 2024 | 3:36 PM

ದಂಪತಿ ಮಧ್ಯೆ ಆಗಾಗ್ಗೆ ಸಣ್ಣಪುಟ್ಟ ಮನಸ್ತಾಪಗಳು, ಜಗಳಗಳಾಗುವುದು ಸಾಮಾನ್ಯ. ಎಷ್ಟೇ ಮನಸ್ತಾಪ ಇದ್ರೂ ಕೂಡಾ ಪತಿ-ಪತ್ನಿಯರು ಮನೆಯಲ್ಲಿ ಏನಾದ್ರೂ ವಿಶೇಷ ಕಾರ್ಯಕ್ರಮಗಳಿದ್ದರೆ ಆ ಮನಸ್ತಾಗಳನ್ನೆಲ್ಲಾ ಪಕ್ಕಕ್ಕಿಟ್ಟು ನಗುನಗುತ್ತಾ ಓಡಾಡುತ್ತಿರುತ್ತಾರೆ. ಆದ್ರೆ ಇಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಹೆತ್ತ ಮಗನ ಹುಟ್ಟು ಹಬ್ಬದ ಸಂಭ್ರಮದ ದಿನದಂದೆ ಪತಿರಾಯ ತನ್ನ ಪತ್ನಿಯ ಮೇಲೆ ಕೈ ಮಾಡಿದ್ದಾನೆ. ಹೌದು ಬರ್ತ್‌ ಡೇ ಸೆಲೆಬ್ರೇಷನ್‌ನ ವಿಡಿಯೋ ಮಾಡುವಾಗ ಮಧ್ಯದಲ್ಲಿ ಮಾತನಾಡಿದಳೆಂದು ಪತಿರಾಯ ಕೋಪದಿಂದ ತನ್ನ ಹೆಂಡತಿಯ ಕೆನ್ನೆಗೆ ಬಾರಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಈ ಕುರಿತ ವಿಡಿಯೋವನ್ನು Deadlykalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಮಗನ ಬರ್ತ್‌ ಡೇ ಸೆಲೆಬ್ರೇಷನ್‌ನ ವಿಡಿಯೋ ರೆಕಾರ್ಡ್‌ ಮಾಡುವಾಗ ಮತನಾಡಿದ್ದಕ್ಕಾಗಿ ಹೆಂಡತಿಗೆ ಗಂಡನಿಂದ ಕಪಾಳಮೋಕ್ಷ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಮಗನ ಹುಟ್ಟುಹಬ್ಬದ ಸಂಭ್ರಮದ ನಡುವೆಯೂ ಪತಿರಾಯ ತನ್ನ ಹೆಂಡತಿಗೆ ಕಪಾಳಕ್ಕೆ ಬಾರಿಸುವಂತಹ ದೃಶ್ಯವನ್ನು ಕಾಣಬಹುದು. ಪುಟ್ಟ ಮಗನನ್ನು ಮಧ್ಯದಲ್ಲಿ ಕೂರಿಸಿ ವಿಡಿಯೋ ರೆಕಾರ್ಡಿಂಗ್‌ ಮಾಡುತ್ತಾ ಪತಿ ಮತ್ತು ಪತ್ನಿ ಕೇಕ್‌ ಕಟ್‌ ಮಾಡಲು ಮುಂದಾಗುತ್ತಾರೆ. ಹೀಗೆ ವಿಡಿಯೋ ರೆಕಾರ್ಡಿಂಗ್‌ ಮಾಡುವ ವೇಳೆ ಆ ಮಹಿಳೆ ಏನೋ ಮಾತನಾಡಲು ಮುಂದಾಗಿದ್ದು, ಇದರಿಂದ ಕೋಪಗೊಂಡ ಪತಿರಾಯ ಆಕೆಯ ಕೆನ್ನೆಗೆ ಸರಿಯಾಗಿ ಬಾರಿಸಿ ಅಲ್ಲಿಂದ ಎದ್ದು ಹೋಗಿದ್ದಾನೆ.

ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮಾತ್ರ ಇದೆಲ್ಲಾ ಸಾಧ್ಯ ನೋಡಿ… ಪುಸ್ತಕ ಮೇಳದಲ್ಲಿ ಬುಕ್ಸ್‌ಗಳ ಬದಲು ಬಿರಿಯಾನಿ, ಶವರ್ಮಾ ಕೊಳ್ಳಲು ಮುಗಿಬಿದ್ದ ಜನ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಆ ಮನುಷ್ಯ ಇಷ್ಟೊಂದು ಅಸಭ್ಯ ವರ್ತನೆಯನ್ನು ತೋರುವ ಅವಶ್ಯಕತೆಯಿತ್ತೇʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಂತಹ ವಾತಾವರಣ ಮಗುವಿನ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರುತ್ತದೆʼ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇನ್ನೂ ಅನೇಕರು ಆ ವ್ಯಕ್ತಿಯ ಮೃಗೀಯ ವರ್ತನೆಯನ್ನು ಕಂಡು ಕೋಪಗೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಚನ್ನಪಟ್ಟಣಕ್ಕೆ 2 ಬಾರಿ ಶಾಸಕನಾಗಿದ್ದ ಕುಮಾರಸ್ವಾಮಿ ಕೊಡುಗೆ ಏನು?ಶಿವಕುಮಾರ್
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು