AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video | ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ಭೂಪ ಅರೆಸ್ಟ್​: ಕೊರೊನಾ ಹರಡೋಕೆ ಈ ತಂತ್ರವಾ?

ತಂದೂರಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ರೊಟ್ಟಿಯನ್ನು ಒರೆದು, ಅದಕ್ಕೆ ಎಂಜಲು ಉಗುಳಿ ಬೇಯಿಸುತ್ತಿದ್ದ. ಇದನ್ನು ನೋಡಿದ ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

Viral Video | ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ಭೂಪ ಅರೆಸ್ಟ್​: ಕೊರೊನಾ ಹರಡೋಕೆ ಈ ತಂತ್ರವಾ?
ವೈರಲ್​ ಆದ ವಿಡಿಯೋದ ದೃಶ್ಯ
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​|

Updated on: Feb 22, 2021 | 4:00 PM

Share

ಕೊರೊನಾ ವೈರಸ್​ ಹರಡುವ ಸಂದರ್ಭದಲ್ಲಿ ತಬ್ಲಿಘಿಗಳು ನಡೆಸಿದ ಸಭೆ ತುಂಬಾನೇ ಚರ್ಚೆಗೆ ಕಾರಣವಾಗಿತ್ತು. ತಬ್ಲಿಘಿಗಳು ಕೊರೊನಾ ವೈರಸ್​ ಹರಡಬೇಕು ಎನ್ನುವ ಉದ್ದೇಶಕ್ಕೇ ಈ ರೀತಿ ಮಾಡಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಅಷ್ಟೇ ಅಲ್ಲ, ಕೊರೊನಾ ಹರಡಬೇಕು ಎನ್ನುವ ಉದ್ದೇಶಕ್ಕೆ ನೋಟುಗಳಿಗೆ ಎಂಜಲು ಹಚ್ಚಿ ನೀಡಲಾಗುತ್ತಿದೆ ಎನ್ನುವ ಮಾತುಗಳೂ ಕೇಳಿ ಬಂದಿದ್ದವು. ಆ ಬಗ್ಗೆ ಅನೇಕ ಫ್ಯಾಕ್ಟ್ ​ಚೆಕ್​ಗಳು ಕೂಡ ನಡೆದವು. ಈಗ ಇಂತಹುದೇ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದುವೆ ಸಮಾರಂಭದಲ್ಲಿ ಎಂಜಲು ಹಚ್ಚಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್​ ಆಗಿದ್ದಾನೆ. ಉತ್ತರ ಪ್ರದೇಶದ ಮೀರತ್​ನಲ್ಲಿ ಅದ್ದೂರಿ ಮದುವೆ ಏರ್ಪಡಿಸಲಾಗಿತ್ತು. ಮದುವೆಗೆ ಸಾವಿರಾರು ಮಂದಿ ಕೂಡ ಸೇರಿದ್ದರು. ಅದ್ದೂರಿ ಕಾರ್ಯಕ್ರಮ ಆಗಿದ್ದರಿಂದ ನಾನಾ ರೀತಿಯ ಅಡುಗೆ ಕೂಡ ಸಿದ್ಧಪಡಿಸಲಾಗಿತ್ತು. ಬಂದ ಅತಿಥಿಗಳಿಗೆ ಬಿಸಿ ಬಿಸಿ ತಂದೂರಿ ರೊಟ್ಟಿ ನೀಡಲು ಕೌಂಟರ್​​ ಒಂದನ್ನು ತೆಗೆಯಲಾಗಿತ್ತು. ಆದರೆ, ಹೇಸಿಗೆಯ ವಿಚಾರ ಎಂದರೆ, ರೊಟ್ಟಿ ಮಾಡುವ ವ್ಯಕ್ತಿ ಎಂಜಲು ಉಗುಳಿ ಬೇಯಿಸುತ್ತಿದ್ದ!

ತಂದೂರಿ ರೊಟ್ಟಿ ಮಾಡುತ್ತಿದ್ದ ವ್ಯಕ್ತಿ ರೊಟ್ಟಿಯನ್ನು ಒರೆದು, ಅದಕ್ಕೆ ಎಂಜಲು ಉಗುಳಿ ಬೇಯಿಸುತ್ತಿದ್ದ. ಇದನ್ನು ನೋಡಿದ ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅಷ್ಟೇ ಅಲ್ಲ, ಈ ವಿಚಾರವನ್ನು ಗಂಡು-ಹೆಣ್ಣಿನ ಕಡೆಯವರಿಗೂ ತಿಳಿಸಿದ್ದಾರೆ. ಪೊಲೀಸರು ಸದ್ಯ ಈತನನ್ನು ಅರೆಸ್ಟ್​ ಮಾಡಿದ್ದಾರೆ.

ಬಂಧಿತನ ಹೆಸರು ನೌಷಾದ್​. ಕೊರೊನಾ ವೈರಸ್​ ಹರಡಲು ನೌಷಾದ್​ ಎಂಜಲು ಹಚ್ಚುತ್ತಿದ್ದ ಎಂದು ಆರೋಪಿಸಲಾಗಿದೆ. ಇದೇ ಆರೋಪದ ಅಡಿಯಲ್ಲಿ ನೌಷಾದ್​​ನನ್ನು ಬಂಧಿಸಲಾಗಿದೆ. ಆತನಿಗೆ ಕೊರೊನಾ ವೈರಸ್​ ಇದೇಯೇ ಅಥವಾ ಇಲ್ಲವೇ ಎನ್ನುವ ಬಗ್ಗೆ ಇನ್ನಷ್ಟೇ ತಿಳಿದು ಬರಬೇಕಿದೆ. ಕೊರೊನಾ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.

ತಂದೂರಿ ರೊಟ್ಟಿ ಸಾಮಾನ್ಯ ರೊಟ್ಟಿಗಿಂತ ಭಿನ್ನವಾಗಿರುತ್ತದೆ. ರೊಟ್ಟಿಯನ್ನು ಬೇಯಿಸೋದು ಕೂಡ ಭಿನ್ನವೇ. ರೊಟ್ಟಿಯನ್ನು ಬಂಡಿಯ ಮೇಲೆ ಬೇಯಿಸಿದರೆ, ತಂದೂರಿ ರೊಟ್ಟಿ ಸುಡಲು ಬೇರೆಯದೆ ರೀತಿಯ ಒಲೆ ಇರುತ್ತದೆ.

ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಡಿವೈಡರ್​​ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
‘ಚಾಯ್ ಪೆ ಚರ್ಚಾ’; ಇಂಗ್ಲೆಂಡ್ ಪ್ರಧಾನಿ ಜೊತೆ ಟೀ ಸವಿದ ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?